ಡಾ| ರಾಜಕುಮಾರ ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟ

ನೆಲ, ಜಲ, ಭಾಷೆಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್‌ ಕನ್ನಡ ಪ್ರೇಮಿ

Team Udayavani, Apr 25, 2022, 11:37 AM IST

9

ಕಾರಟಗಿ: ಡಾ| ರಾಜಕುಮಾರ ಅಭಿಮಾನಿಗಳ ಸಂಘದಿಂದ ಕರ್ನಾಟಕ ರತ್ನ, ಪದ್ಮಭೂಷಣ ಡಾ| ರಾಜಕುಮಾರ ಜನ್ಮದಿನವನ್ನು ರವಿವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಡಾ| ರಾಜಕುಮಾರ ಕಲಾ ಮಂದಿರದಲ್ಲಿ ಡಾ| ರಾಜ್‌ ಅಭಿಮಾನಿ ಸಂಘದಿಂದ ಆಯೋಜಿಸಲಾದ ಈ ಸಮಾರಂಭದಲ್ಲಿ ವರನಟ ಡಾ| ರಾಜಕುಮಾರ ಹಾಗೂ ಪವರ್‌ ಸ್ಟಾರ್‌ ಪುನೀತರಾಜಕುಮಾರ್‌ ಭಾವಚಿತ್ರಕ್ಕೆ ಅರ್ಚಕ ಮುತ್ತುಸ್ವಾಮಿ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು.

ನಂತರ ನೆರೆದಿದ್ದ ಅಭಿಮಾನಿಗಳು ಇಬ್ಬರು ಮಹನೀಯರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಅಭಿಮಾನಿಗಳಿಗೆ ಸಿಹಿ ಹಂಚಿದ್ದಲ್ಲದೇ ಸ್ಥಳೀಯ ಕಡು ಬಡವರಾದ ದಂಪತಿಗೆ ಬಟ್ಟೆ ವಿತರಿಸಿದರು.

ಡಾ| ರಾಜ್‌ ಅಭಿಮಾನಿ ಸಂಘದ ಗೌರವಾಧ್ಯಕ್ಷ ಮಹಾರುದ್ರಯ್ಯ ಸ್ವಾಮಿ ಮಾತನಾಡಿ, ಡಾ| ರಾಜಕುಮಾರ ಕನ್ನಡ ಚಲನಚಿತ್ರರಂಗ ಕಂಡ ಅದ್ಭುತ ನಟ. ಅವರು ಬರೀ ನಟರಷ್ಟೇ ಅಲ್ಲ ರಾಜ್ಯದ ನೆಲ, ಜಲ, ಭಾಷೆಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್‌ ಕನ್ನಡ ಪ್ರೇಮಿ ಮತ್ತು ಹೋರಾಟಗಾರರು ಹೌದು. ಸುಮಾರು ಐವತ್ತು ವರ್ಷಗಳ ಕಾಲ ಸುಮಾರು 200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ ಕೋಟ್ಯಂತರ ಕಲಾಪ್ರೇಮಿಗಳ ಹೃದಯ ಗೆದ್ದಿದ್ದರು. ತಮ್ಮ ಚಿತ್ರಗಳ ಮೂಲಕ ಬರೀ ಮನರಂಜನೆ ನೀಡದೇ ಸಾಮಾಜಿಕ ಮೌಲ್ಯಗಳನ್ನು ಸಾರಿದ್ದು, ಅವರ ಚಿತ್ರ ಜೀವನದ ವಿಶೇಷವಾಗಿತ್ತು. ಇಷ್ಟಲ್ಲದೇ ಇತ್ತೀಚಿಗೆ ತಾನೇ ತೀರಿಕೊಂಡ ಅವರ ಕೊನೆಯ ಪುತ್ರ ಕೂಡ ಅಭಿಜಾತ ಕಲಾವಿದರಾಗಿದ್ದರು. ಜೊತೆಗೆ ಅಂಧ, ಅನಾಥ ಮಕ್ಕಳ ಶಿಕ್ಷಣಕ್ಕೆ, ಗೋಶಾಲೆಗಳಿಗೆ ಕೋಟ್ಯಂತರ ರೂಪಾಯಿ ದಾನ ನೀಡಿದ್ದರು. ಇದಕ್ಕೆಲ್ಲ ಸ್ಫೂರ್ತಿ ವರನಟ ಡಾ| ರಾಜಕುಮಾರ ಆಗಿದ್ದರು ಎಂದರು.

ನಂತರ ಶಿಕ್ಷಕ ಸೂಗುರೇಶ ಬಪ್ಪೂರು ಮಾತನಾಡಿ, ಆರು ಕೋಟಿ ಕನ್ನಡಿಗರ ಆರಾಧ್ಯ ದೈವ ಡಾ| ರಾಜಕುಮಾರ ಅವರು ಈ ನಾಡಿಗೆ ನೀಡಿದ ಕೊಡುಗೆ ಅನುಪಮವಾದುದು. ಅವರು ಬರೀ ಚಿತ್ರರಂಗಕ್ಕೆ ಮಾತ್ರ ಸೇವೆ ಸಲ್ಲಿಸಲಿಲ್ಲ. ನಾಡು-ನುಡಿಗೆ ಧಕ್ಕೆ ಬಂದಾಗ ಬೀದಿಗೆ ಇಳಿದು ಹೋರಾಡಿದರು. ಅವರ ಆದರ್ಶ, ತತ್ವಗಳನ್ನು ಇಂದಿನ ಯುವ ಪೀಳಿಗೆ ಅನುಸರಿಸಬೇಕು. ಆ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯಬೇಕು ಎಂದರು.

ಡಾ| ರಾಜಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ಮಹಾರುದ್ರಯ್ಯಸ್ವಾಮಿ, ಅಧ್ಯಕ್ಷ ಯಮನೂರಪ್ಪ ಬೇವಿನಾಳ, ನಾಗರಾಜ್‌ ಬಾಂಢೆ ಅಂಗಡಿ, ವೆಂಕಟೇಶ ಮೂಲಿಮನಿ, ವೆಂಕಟೇಶ ಭೋವಿ, ಅರ್ಜುನ ಸಿಂಗ್‌, ಖಾಜಾಸಾಬ್‌ ಪೇಂಟರ್‌, ವೆಂಕಟೇಶ ಚಿತ್ರಬರಹಗಾರರು, ತಿಪ್ಪಣ್ಣ ಮೂಲಿಮನಿ, ರಾಘವೇಂದ್ರ ಹಡಪದ್‌, ಕೃಷ್ಣಯ್ಯಶ್ರೇಷ್ಠಿ ಇನ್ನಿತರರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.