ಕಿಲ್ಲಾರಹಟ್ಟಿ ಗ್ರಾಪಂನಲ್ಲಿ ಕುಡಿಯುವ ನೀರಿಗೆ ಪರದಾಟ

2-3 ವರ್ಷಗಳಿಂದ ಹನಿ ನೀರಿಗೂ ತತ್ವಾರ 720 ಅಡಿ ಆಳ ಬೋರ್‌ವೆಲ್ ಕೊರೆದರೂ ಸಿಗುತ್ತಿಲ್ಲ ನೀರು

Team Udayavani, Jun 28, 2019, 11:37 AM IST

kopala-tdy-2..

ದೋಟಿಹಾಳ: ಮಾದರಡೊಕ್ಕಿ ತಾಂಡಾಕ್ಕೆ ಹೋಗುವ ರಸ್ತೆಯ ಪಕ್ಕದ ಗುಡ್ಡಗಳ ಇಳಿಜಾರು ಪ್ರದೇಶದಲ್ಲಿರುವ ದೊಡ್ಡ ಕಂದಕಗಳು.

ದೋಟಿಹಾಳ: ಸತತ ಬರಗಾಲ, ಕಾಯ್ದು ಕೆಂಪಾದ ಭೂಮಿ, ಕಣ್ಮರೆಯಾದ ಮಳೆರಾಯ, ಕಣ್ಣಿಗೆ ಕಾಣುವ ಮೋಡಗಳು ಮಳೆ ಸುರಿಸುತ್ತಿಲ್ಲ. ಇಲ್ಲಿ ಹನಿ ನೀರಿಗೂ ಪರದಾಟ. ಇಂತಹ ಭೀಕರ ಪರಿಸ್ಥಿತಿ ಎದುರಿಸುತ್ತಿವೆ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು.

ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿಗಾಗಿ ಜನ ತತ್ತರಿಸುವಂತಾಗಿದೆ. ಕೆರೆ, ಬಾವಿ, ಹಳ್ಳ ಬತ್ತಿವೆ. ಅಂತರ್ಜಲ ಕುಸಿತದಿಂದ ಕೊಳೆವೆಬಾವಿಗಳಲ್ಲೂ ನೀರು ಕಾಣದಾಗಿದೆ. ಹೀಗಾಗಿ ಅನೇಕ ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ.

ಅಮರಾಪೂರ ಗ್ರಾಮಸ್ಥರು ಸದ್ಯ ಕುಡಿಯುವ ಮತ್ತು ಬಳಕೆಯ ನೀರಿಗಾಗಿ ದೂರದಲ್ಲಿರುವ ತೋಟಗಳ ಬೋರ್‌ವೆಲ್ ಅವಲಂಬಿಸಿದ್ದಾರೆ. ವಿದ್ಯುತ್‌ ಸಂಪರ್ಕವಿದ್ದಾಗ ಮಾತ್ರ ನೀರು. ರೈತರು ಹೊಲಕ್ಕೆ ಹೋದರೆ ನಮಗೆ ನೀರು ಸಿಗುವುದಿಲ್ಲ. ಆದ್ದರಿಂದ ನೀರಿಗಾಗಿ ಬೆಳಗ್ಗಿನಿಂದ ಕೆಲಸ ಬಿಟ್ಟು ಕಾಯುವಂತಾಗಿದೆ ಎಂದು ಮಹಿಳೆಯರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಗಡಿಭಾಗದಲ್ಲಿರುವ ಕಿಲ್ಲಾರಹಟ್ಟಿ, ಕಿಲ್ಲಾರಹಟ್ಟಿ ತಾಂಡಾ, ಅಮರಾಪೂರ, ಅಮರಾಪೂರ ತಾಂಡಾ, ಕಳಮಳ್ಳಿ ತಾಂಡ, ಗರ್ಜನಾಳ ಗ್ರಾಮಗಳಲ್ಲಿ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆಯಿಂದ ಇಲ್ಲಿಯ ಜನರು ವರ್ಷಗಳಿಂದ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ನೀರಿಗಾಗಿ ಗ್ರಾಪಂ, ಜಿಪಂ, ಶಾಸಕರು ಸೇರಿದಂತೆ ಅನೇಕ ನಾಯಕರು ಹಲವು ಭಾರಿ ಬೋರ್‌ವೆಲ್ ಹಾಕಿಸಿದರು ಹನಿ ನೀರು ಭೂಮಿಯಲ್ಲಿ ಸಿಗುತ್ತಿಲ್ಲ.

ಭೌಗಳಿಕವಾಗಿ ಈ ಗ್ರಾಮಗಳು ಗುಡದ ಮೇಲೆ ಇರುವುದರಿಂದ ನೀರು ಸಿಗುವುದು ಕಷ್ಟ, ಹಿಂದೆ ಕೇಂದ್ರ ಸರಕಾರ ಒಂದು ತಂಡ ಕಿಲ್ಲಾರಹಟ್ಟಿ ಮತ್ತು ಕಳಮಳ್ಳಿ ಈ ಗ್ರಾಮಗಳಿಗೆ ಭೇಟಿ ನೀಡಿ. ಇಲ್ಲಿಯ ನೀರಿ ಅಂತರ್ಜಲ ಬತ್ತಿ ಹೋಗಿದೆ ಸುಮಾರು 700 ಅಡಿ ಆಳದಲ್ಲಿ ನೀರು ಸಿಗಬಹುದು ಎಂದು ವರದಿ ನೀಡಿದ ಕಾರಣ ಕಿಲ್ಲಾರಹಟ್ಟಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮತ್ತು ಕಳಮಳ್ಳಿ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 720 ಅಡಿ ಆಳ ಬೋರ್‌ವೆಲ್ ಹಾಕಿದರು ಅಲ್ಲಿ ಒಂದು ಹನಿ ನೀರು ಸಿಗಲಿಲ್ಲ.

ಕೆರೆ ನಿರ್ಮಾಣ ಮುಂದಾಗಬೇಕು: ಈ ಭಾಗದಲ್ಲಿ ಗುಡಗಳೇ ಇರುವುದರಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೆಚ್ಚಾಗಿ ಗುಡ್ಡಗಳ ಇಳಿಜಾರು ಪ್ರದೇಶದಲ್ಲಿ ಚೆಕ್‌ಡ್ಯಾಂ ಅಥವಾ ಸಣ್ಣ ಸಣ್ಣ ಕೆರೆಗಳನ್ನು ನಿರ್ಮಿಸಬೇಕು. ಇದರಿಂದ ಈ ಭಾಗದ ಅಂತರ್ಜಲ ಅಭಿವೃದ್ಧಿಯಾಗುವುದರ ಜೊತೆಗೆ 3-4 ಹಳ್ಳಿಗಳಿಗೆ ನೀರು ಸಿಗುತ್ತದೆ.

ಮುದ್ದಲಗುಂದಿ ಗ್ರಾಮದಿಂದ ಬರುವ ರಸ್ತೆಯ ಮಾದರಡೊಕ್ಕಿ, ಮಾದರಡೊಕ್ಕಿ ತಾಂಡಾ ಹೋಗುವ ರಸ್ತೆ ಕ್ರಾಸ್‌ ಬಳಿ ದೊಡ್ಡ ಕಂದಕಗಳು ಇದ್ದು, ಇಲ್ಲಿ ದೊಡ್ಡಪ್ರಮಾಣದ ಚೆಕ್‌ ಡ್ಯಾಂ ಅಥವಾ ಕೆರೆ ನಿರ್ಮಾಣ ಮಾಡಲು ಉತ್ತಮ ಸ್ಥಳವಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯ

ಇಂದು ಜನ ಸ್ಪಂದನ: ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಅಮರಾಪೂರ ಗ್ರಾಮದಲ್ಲಿ ಜೂ. 28ರಂದು ಶಾಸಕರು ಜನ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಭೆಯಲ್ಲಾದರೂ ಗ್ರಾಮದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೋ ಕಾದು ನೋಡಬೇಕು.

 

•ಮಲ್ಲಿಕಾರ್ಜುನ ಮೆದಿಕೇರಿ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.