ಕುಡಿವ ನೀರು ಯೋಜನೆ; ಮತ್ತೆ ತಪಾಸಣೆ


Team Udayavani, Oct 14, 2019, 1:13 PM IST

kopala-tdy-1

ಕೊಪ್ಪಳ: ತಾಲೂಕಿನ ಬಹು ನಿರೀಕ್ಷಿತ ಮುಂಡರಗಿ-ಕಾಸನಕಂಡಿ 84 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿನ ಲೋಪದೋಷಗಳ ಕುರಿತು ನಿವೃತ್ತ ಚೀಪ್‌ ಇಂಜನಿಯರ್‌ ಅವರಿಂದ ಮತ್ತೆ ತಪಾಸಣೆ ನಡೆದಿದ್ದು, ಜಿಪಂ ಮೂಲಕ ಸರ್ಕಾರಕ್ಕೂ ಸಮಗ್ರ ವರದಿ ಸಲ್ಲಿಕೆಯಾಗಿದೆ.  ಆದರೆ ತಪಾಸಣೆ ಬಳಿಕ ಮತ್ತಾವ ಬೆಳವಣಿಗೆಯು ನಡೆದಿಲ್ಲ.

ಹೌದು.. ತುಂಗಭದ್ರಾ ಜಲಾಶಯ ಜಿಲ್ಲೆಯಲ್ಲೇ ಇದ್ದರೂ ಕೊಪ್ಪಳ ತಾಲೂಕಿನ ಹಲವಾರು ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಅದರಲ್ಲೂ ಮಳೆಗಾಲದ ವೇಳೆ ನೀರಿಗೆ ಹಾಹಾಕಾರವಾಗಿರುವ ಉದಾಹರಣೆ ತಾಲೂಕಿನಲ್ಲಿವೆ. ಇಲ್ಲಿನ ನೀರಿನ ಭವಣೆ ತಪ್ಪಿಸಿ ಜನತೆಗೆ ಶಾಶ್ವತ ಕುಡಿಯವ ನೀರಿನ ಪೊರೈಸಬೇಕೆಂಬ ಉದ್ದೇಶದಿಂದ ಸರ್ಕಾರ 2010-11ರಲ್ಲಿ ತುಂಗಭದ್ರಾ ನದಿಯಿಂದ ಮುಂಡರಗಿ-ಕಾಸನಕಂಡಿ ಸಮೀಪದಿಂದ ಕುಡಿಯುವ ನೀರಿನ ಯೋಜನೆ ಆರಂಭಿಸಿತ್ತು. ಯೋಜನೆಗೆ ಕೋಟ್ಯಂತರ ವ್ಯಯವಾದರೂ ಈ ವರೆಗೂ ಹನಿ ನೀರೂ ಜನರಿಗೆ ತಲುಪಿಲ್ಲ. ಇಲ್ಲಿ ಗುತ್ತಿಗೆದಾರ, ಅ ಧಿಕಾರಿಗಳು ಮಾಡಿದ ಎಡವಟ್ಟಿನಿಂದ ಜನತೆ ನೀರಿನ ಭವಣೆಯಿಂದ ಪರಿತಪಿಸುತ್ತಿದ್ದಾರೆ. ಈ ಕಾಮಗಾರಿಯಲ್ಲಿ ಡಿಸೈನ್‌ ವಿಫಲವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಈಗ 40 ಕೋಟಿಗೂ ಅಧಿಕ ವ್ಯಯವಾದ ಯೋಜನೆಯ ಸ್ಥಿತಿಗತಿ ಅವಲೋಕಿಸಲು ಈ ಹಿಂದೆ ಹಲವು ಸಚಿವರು, ಶಾಸಕ, ಸಂಸದರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಯಾವುದೇ ಪರಿಹಾರ ಕಂಡುಕೊಳ್ಳುತ್ತಿಲ್ಲ. ಕಳೆದ ಮೈತ್ರಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೃಷ್ಣಭೈರೇಗೌಡ ಅವರೇ ಕಾಸನಕಂಡಿ ಯೋಜನಾ ಸ್ಥಳಕ್ಕೆ ಆಗಮಿಸಿ ಅಲ್ಲಿನ ಸ್ಥಿತಿಗತಿ ಅವಲೋಕಿಸಿ ವರದಿ ಅಧ್ಯಯನಕ್ಕೆ ಸಮ್ಮತಿಸಿದ್ದರು.

ಇತ್ತೀಚೆಗೆ ಬೆಂಗಳೂರು ಮುಖ್ಯ ಇಂಜನಿಯರ್‌ ವಿಭಾಗದ ನಿವೃತ್ತ ಸಿಇ ರಾಘವೇಂದ್ರ ರಾವ್‌ ಅವರ ತಂಡವೂ ಕಾಸನಕಂಡಿ ಬಳಿ ಆರಂಭಿಸಿದ ಯೋಜನೆಯ ಲೋಪದೋಷಗಳನ್ನು ಅವಲೋಕನ ಮಾಡಿದೆ. ಯಾವ ಹಂತದಲ್ಲಿ ಯೋಜನೆ ವಿಫಲವಾಗಿದೆ. ಜನತೆಗೆ ನೀರು ಏಕೆ ಪೂರೈಕೆಯಾಗುತ್ತಿಲ್ಲ. ಅದಕ್ಕೆ ಪರಿಹಾರವೇನು ಎನ್ನುವ ಕುರಿತಂತೆ ಸಮಗ್ರವಾಗಿ ಅಧ್ಯಯನ ನಡೆಸಿ ಜಿಪಂ ಗಮನಕ್ಕೆ ತಂದಿದೆ. ಜಿಪಂ ಸಹಿತ ಅಲ್ಲಿನ ಲೋಪಗಳನ್ನು ಪಟ್ಟಿ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಿವೃತ್ತ ಅಧಿಕಾರಿ ತಂಡವು ಅದಕ್ಕೆ ಮುಂದೇನು ಮಾಡಬೇಕು ಎನ್ನುವ ಸಲಹೆಗಳನ್ನೂ ವರದಿಯಲ್ಲಿ ಉಲ್ಲೇಖೀಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವರದಿಯೇನೋ ಸರ್ಕಾರಕ್ಕೆ ಇತ್ತೀಚೆಗೆ ಸಲ್ಲಿಕೆಯಾಗಿದೆ. ಆದರೆ ಬದಲಾದ ರಾಜಕೀಯದಲ್ಲಿ ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಕೋಟ್ಯಂತರ ರೂ. ಯೋಜನೆ ಹಳ್ಳಹಿಡಿಯುತ್ತಿವೆ. 2010-11ರಲ್ಲೇ ಆರಂಭವಾದ ಯೋಜನೆ 8 ವರ್ಷ ಗತಿಸುತ್ತಾ ಬಂದರೂ ಜನತೆಗೆ ನೀರು ಕೊಡಲಾಗಿಲ್ಲ. ಗುತ್ತಿಗೆದಾರನಿಗೆ ಶೇ. 90ರಷ್ಟು ಅನುದಾನ ಬಿಡುಗಡೆಯಾಗಿದೆ. ಯೋಜನೆಯಲ್ಲಿ ಆದ ಲೋಪ ಅಧ್ಯಯನದ ವರದಿಗಳು ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿವೆ. ಆದರೆ ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತಿಲ್ಲ. ನನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ. ಇದು ಜಿಲ್ಲೆಯ ಜನರ ದುರಂತವೇ ಸರಿ.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.