![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ವಿಜಯನಗರ ಕಾಲುವೆ ದುರಸ್ತಿಗೆ ಚಾಲನೆ
Team Udayavani, May 12, 2019, 4:56 PM IST
![kopp-3](https://www.udayavani.com/wp-content/uploads/2019/05/kopp-3-3-620x286.jpg)
ಗಂಗಾವತಿ: ತುಂಗಭದ್ರಾ ಡ್ಯಾಂ ನಿರ್ಮಾಣಕ್ಕೂ ಮೊದಲೇ ನದಿಗೆ ನೈಸರ್ಗಿಕವಾಗಿ ನಿರ್ಮಿಸಿದ್ದ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯಕ್ಕೆ ಕೊನೆಗೂ ಸರಕಾರ ಹಾಗೂ ಏಷಿಯನ್ ಅಭಿವೃದ್ಧಿ ಬ್ಯಾಂಕು ಚಾಲನೆ ನೀಡಿದ್ದು, ಮುಂದಿನ ಜನವರಿಯಲ್ಲಿ ದುರಸ್ತಿ ಕಾರ್ಯ ಆರಂಭಿಸುವಂತೆ ರೈತರು ಸಲಹೆ ನೀಡಿದ್ದಾರೆ. ಇದಕ್ಕಾಗಿ ಒಂದು ಬೆಳೆಯನ್ನು ಬೆಳೆಯದಿರಲು ರೈತರು ತೀರ್ಮಾನಿಸಿದ್ದಾರೆ. 2007-08ನೇ ಸಾಲಿನಲ್ಲಿ ಕಲಬುರ್ಗಿಯಲ್ಲಿ ಜರುಗಿದ ರಾಜ್ಯ ಸರಕಾರದ ಕ್ಯಾಬಿನೆಟ್ ಸಭೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಜಯನಗರ ಕಾಲುವೆಗಳ ದುರಸ್ತಿ ಮಾಡುವ ನಿರ್ಣಯ ಕೈಗೊಂಡಿದ್ದರು. ಬೃಹತ್ ಕಾಮಗಾರಿ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವುದರಿಂದ ಕೇಂದ್ರ ಜಲಸಂಪನ್ಮೂಲ ಇಲಾಖೆ ಮತ್ತು ಪರಿಸರ ಇಲಾಖೆಗಳ ಪರವಾನಗಿ ಅಗತ್ಯವಿತ್ತು. ಕೇಂದ್ರ ಸರಕಾರದ ಪರವಾನಗಿ ಪಡೆದು ಏಷಿಯನ್ ಅಭಿವೃದ್ಧಿ ಬ್ಯಾಂಕ್ ಹಣಕಾಸು ನೆರವಿನೊಂದಿಗೆ ಕಾಮಗಾರಿ ಕೈಗೊಳ್ಳಲು ರಾಜ್ಯ ಸರಕಾರ ತೀರ್ಮಾನಿಸಿದೆ. 432 ಕೋಟಿ ವೆಚ್ಚದಲ್ಲಿ ವಿಜಯನಗರ ಕಾಲುವೆಗಳ ದುರಸ್ತಿ ನಡೆಯಲಿದ್ದು, ಹುಬ್ಬಳ್ಳಿಯ ಆರ್.ಎನ್. ಶೆಟ್ಟಿ ಮತ್ತು ಕಂಪನಿ ಕಾಲುವೆ ಶಾಶ್ವತ ದುರಸ್ತಿ ಕಾಮಗಾರಿ ಗುತ್ತಿಗೆ ಪಡೆದಿದೆ.
ಹಂಪಿ, ಆನೆಗೊಂದಿ, ಕಿಷ್ಕಿಂದಾ ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ವಿಜಯನಗರ ಕಾಲುವೆಗಳು ಇರುವುದರಿಂದ ಅಲ್ಲಿಯ ಪರಿಸರಕ್ಕೆ ಧಕ್ಕೆಯಾಗದಂತೆ ಮತ್ತು ತುಂಗಭದ್ರಾ ನದಿಯಲ್ಲಿರುವ ಚೀರ್ ನಾಯಿ ಸೇರಿ ಜಲಚರಗಳಿಗೆ ಹಾನಿಯಾದಂತೆ ಕಾಮಗಾರಿ ನಿರ್ವಹಿಸಬೇಕಿದ್ದು, ಈಗಾಗಲೇ ಏಷಿಯನ್ ಬ್ಯಾಂಕಿನ ಅಧಿಕಾರಿಗಳು ಆನೆಗೊಂದಿ, ಸಾಣಾಪೂರ, ಹನುಮನಹಳ್ಳಿ ಜನರು ಮತ್ತು ರೈತರ ಜತೆ ಹಲವು ಸುತ್ತಿನ ಮಾತುಕತೆ ಸಲಹೆ ಸೂಚನೆ ಪಡೆದಿದೆ. ಇದೀಗ ಅಂತಿಮವಾಗಿ ಕಾಮಗಾರಿಯನ್ನು 2019 ಡಿಸೆಂಬರ್ನಲ್ಲಿ ಕಾಲುವೆ ದುರಸ್ತಿ ಕಾರ್ಯ ನಡೆಸಲು ಆರ್.ಎನ್. ಶೆಟ್ಟಿ ಕಂಪನಿ ನಿರ್ಧರಿಸಿತ್ತು. ರೈತರ ಜತೆ ನಡೆಸಿದ ಮಾತುಕತೆ ವೇಳೆ ಡಿಸೆಂಬರ್ ಬದಲಿಗೆ 2020 ಜನವರಿ ಕೊನೆಯ ವಾರದಲ್ಲಿ ಕಾಮಗಾರಿ ನಡೆಸುವ ಮೂಲಕ ಬೆಳೆದು ನಿಂತ ಬೆಳೆಗಳನ್ನು ಕಟಾವು ಮಾಡಿದ ನಂತರ ಕೆಲಸ ಆರಂಭಿಸುವಂತೆ ರೈತರ ಸಲಹೆ ಹಿನ್ನೆಲೆಯಲ್ಲಿ ಮುಂದಿನ ವರ್ಷ ಕಾಮಗಾರಿ ಆರಂಭಿಸಲು ಈಗಾಗಲೇ ಅಗತ್ಯ ಕಾರ್ಯ ನಡೆದಿದೆ.
ಶಿವಪೂರ, ಸಾಣಾಪೂರ, ಕಂಪ್ಲಿ, ದೇವಘಾಟನಲ್ಲಿ ತುಂಗಭದ್ರಾ ನದಿಯಲ್ಲಿ ನಿರ್ಮಿಸಿರುವ ಅಣೆಕಟ್ಟು, ಮುಖ್ಯಕಾಲುವೆ, ಕಾಲುವೆ ಮೇಲಿನ ರಸ್ತೆ ಹಾಗೂ ಉಪಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದೆ. ರೈತರ ಸಲಹೆಯಂತೆ ಕಾಮಗಾರಿ ನಡೆಸಲು ಸರಕಾರ ಸೂಚನೆ ನೀಡಿದೆ. ಹೊಸಪೇಟೆ, ಕಂಪ್ಲಿ, ಕೊಪ್ಪಳ, ಗಂಗಾವತಿ, ಸಿರಗುಪ್ಪಾ ತಾಲೂಕುಗಳಲ್ಲಿ ವಿಜಯನಗರ ಕಾಲುವೆಗಳಿದ್ದು ಸಾವಿರಾರು ಎಕರೆ ಭೂಪ್ರದೇಶಕ್ಕೆ ನೀರಾವರಿ ಮಾಡಲಾಗಿದೆ. ಡ್ಯಾಮ್ ನಿರ್ಮಾಣ ನಂತರ ಎಡ ಮತ್ತು ಬಲದಂಡೆ ಕಾಲುವೆ ಮೂಲಕ ರೈತರು ಭೂಮಿಗೆ ನೀರು ಪಡೆಯುತ್ತಿದ್ದಾರೆ. ಆದರೆ ಹಳೆಯ ಮಗಾಣಿ ರೈತರಿಗೆ ವಿಜಯನಗರ ಕಾಲುವೆಗಳು 12 ತಿಂಗಳು ನೀರಾವರಿ ಕಲ್ಪಿಸಿವೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.