ದುರುಗಮ್ಮನಹಳ್ಳ ಸ್ವಚ್ಛತೆಗೆ ಒಂದಾದ ಸಮಾನ ಮನಸ್ಕರು


Team Udayavani, May 16, 2019, 3:59 PM IST

kopp-2

ಗಂಗಾವತಿ: ಮನಸ್ಸೊಂದಿದ್ದರೆ ಎಲ್ಲವೂ ಸಾಧ್ಯ ಎಂಬುದನ್ನು ನಗರದ ಸಮಾನ ಮನಸ್ಕರರು ನಗರದ ಮಧ್ಯೆದಲ್ಲಿ ಹರಿಯುವ ದುರುಗಮ್ಮನಹಳ್ಳ ಸ್ವಚ್ಛತೆ ಮಾಡುವ ಮೂಲಕ ಸಾಬೀತು ಮಾಡಿದ್ದಾರೆ.

ಹೌದು. ಹಳ್ಳದಲ್ಲಿದ್ದ ಪ್ಲಾಸ್ಟಿಕ್‌ ಹಾಗೂ ತ್ಯಾಜ್ಯವನ್ನು ಸ್ವಚ್ಛ ಮಾಡುವ ಮೂಲಕ ನಗರದ ಸಮಾನ ಮನಸ್ಕರರು ಮಾದರಿಯಾಗಿದ್ದಾರೆ. ಮಠಾಧಿಧೀಶರು, ವೈದ್ಯರು, ವ್ಯಾಪಾರಸ್ಥರು, ನಿವೃತ್ತ ನೌಕರರು, ಶಿಕ್ಷಕರು, ಯುವಕರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಈ ಸಾರ್ಥಕ ಕಾರ್ಯ ಮಾಡಿದ್ದಾರೆ. ಮೊದಲ ಹಂತದಲ್ಲಿ ದುರುಗಮ್ಮನಹಳ್ಳದಲ್ಲಿ ಸಂಗ್ರಹವಾಗಿದ್ದ ಘನತ್ಯಾಜ್ಯವನ್ನು ಸ್ವಚ್ಛ ಮಾಡಲಾಗಿದೆ. 15 ವರ್ಷಗಳಿಂದ ಗಬ್ಬೆದ್ದಿದ್ದ ಹಳ್ಳಕ್ಕೆ ಮರು ಜೀವ ಬಂದಿದೆ. ಹಳ್ಳದ ದಂಡೆಯಲ್ಲಿ ಬೆಳೆದಿದ್ದ ಬಳ್ಳಾರಿ ಜಾಲಿ ಸೇರಿ ಕಸವನ್ನು ತೆರವುಗೊಳಿಸಲಾಗಿದೆ. ನಗರದಲ್ಲಿ ಉತ್ಪನ್ನವಾಗುವ ತ್ಯಾಜ್ಯವನ್ನು ನಗರಸಭೆ ಸಿಬ್ಬಂದಿ ಹಳ್ಳಕ್ಕೆ ಹಾಕಿದ್ದನ್ನು ಅಧಿಕಾರಿಗಳ ಗಮನಕ್ಕೆ ತಂದು ಕಸವನ್ನು ಪುನಃ ಮಲಕನಮರಡಿ ಯಾರ್ಡ್‌ಗೆ ರವಾನಿಸಲಾಗಿದೆ. ಹಳ್ಳಕ್ಕೆ ಕೊಳೆತ ತರಕಾರಿ ಮತ್ತು ಉಳಿದ ಆಹಾರ ಪಾದಾರ್ಥಗಳನ್ನು ಸುರಿಯದಂತೆ ಜಾಗೃತಿ ಮೂಡಿಸಲಾಗಿದೆ. ನಗರದ ಸುಮಾರು 32ಕ್ಕೂ ಅಧಿಕ ಚರಂಡಿಗಳ ನೀರನ್ನು ನೇರವಾಗಿ ದುರುಗಮ್ಮನಹಳ್ಳಕ್ಕೆ ಹರಿಸುವ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದು, ಪರ್ಯಾಯ ವ್ಯವಸ್ಥ ಕಲ್ಪಿಸಲು ಅಮೃತ ಸಿಟಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಅಮೃತ ಸಿಟಿ ಯೋಜನೆಯಡಿ ದುರುಗಮ್ಮನ ಹಳ್ಳಕ್ಕೆ ಎರಡು ಕಡೆ ಗೋಡೆ ನಿರ್ಮಿಸಿ ವಾಹನ ನಿಲುಗಡೆ ಮಾಡುವ ಉದ್ದೇಶ ಹೊಂದಲಾಗಿತ್ತು. ಗೋಡೆ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಹಳ್ಳದ ಜಾಗವನ್ನು ಒತ್ತುವರಿ ಮಾಡುವ ಅವಕಾಶವಿದ್ದು ಅಮೃತ ಸಿಟಿ ಯೋಜನೆ ಮಾರ್ಪಾಡು ಮಾಡುವಂತೆ ಸಮಾನ ಮನಸ್ಕರು ಮಾಡಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಸ್ಪಂದಿಸಿ. ಹಳಕ್ಕೆ ಗೋಡೆ ನಿರ್ಮಾಣ ಸದ್ಯಕ್ಕೆ ಬೇಡ. ಯೋಜನೆ ನೀಲ ನಕ್ಷೆ ಮರು ಪರಿಶೀಲಿಸಿ ಹಳ್ಳದ ಜಾಗವನ್ನು ಒತ್ತುವರಿ ಮಾಡದಂತೆ ತಡೆಯಲು ಗೋಡೆ ನಿರ್ಮಾಣ ಮಾಡಲು ನೀಲ ನಕ್ಷೆ ಬದಲಿಸುವಂತೆ ಹಾಗೂ ಹಳ್ಳದ ಎರಡು ಕಡೆ ಚರಂಡಿ ನೀರು ಹೋಗಲು ಮಧ್ಯೆದಲ್ಲಿ ಹಳ್ಳದ ನೀರು ಹರಿಸುವಂತೆ ಯೋಜನೆ ರೂಪಿಸಲು ಸೂಚನೆ ನೀಡಿದ್ದಾರೆ. ಮೊದಲ ಹಂತದಲ್ಲಿ ಹಳ್ಳದ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಸಂಘಟಕರು ಯಶಸ್ವಿಯಾಗಿದ್ದಾರೆ. ‘ನಮ್ಮ ಊರು ನಮ್ಮ ಹಳ್ಳ’ ಸಮಾನ ಮನಸ್ಕರ ತಂಡಕ್ಕೆ ಇನ್ನಷ್ಟು ಸಂಘಟನೆಗಳು ಸೇರಬೇಕಾದ ಅಗತ್ಯವಿದೆ. ಎಲ್ಲರ ಕೈ ಜೋಡಿಸಿದಾಗ ಮಾತ್ರ ಉದ್ದೇಶ ಈಡೇಲು ಸಾಧ್ಯ.

15 ದಿನಗಳ ಹಿಂದೆ ದುರುಗಮ್ಮನಹಳ್ಳ ಸ್ವಚ್ಛ ಮಾಡುವ ಕುರಿತು ಸಮಾನ ಮನಸ್ಕರ ಜೊತೆ ಚರ್ಚಿಸಿದಾಗ ಉತ್ತಮ ಸ್ಪಂದನೆ ಬಂತು. ಮೊದಲ ಹಂತದಲ್ಲಿ ಬಂಬೂ ಬಜಾರ್‌ ಹತ್ತಿರ ಸ್ವಚ್ಚತಾ ಕಾರ್ಯ ಮಾಡಲಾಗಿದೆ. ಪ್ಲಾಸ್ಟಿಕ್‌, ತ್ಯಾಜ್ಯ ಹೊರ ತೆಗೆಯಲಾಗಿದೆ. ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಸ್ಥಳೀಯರಿಗೆ ಜಾಗೃತಿ ಮೂಡಿಸಲಾಗಿದೆ. ನೂರಾರು ಜನರ ಸಹಕಾರದಿಂದ ಮೊದಲ ಹಂತದ ಕಾರ್ಯ ಮುಗಿದಿದೆ. ಮುಂದಿನ ದಿನಗಳಲ್ಲಿ ಇಡೀ ಹಳ್ಳ ಸ್ವಚ್ಛಗೊಳಿಸಲಾಗುತ್ತದೆ. ಅಮೃತಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಹಳ್ಳದ ಗೋಡೆ ವೈಜ್ಞಾನಿಕವಾಗಿ ನಿರ್ಮಿಸಬೇಕು.
•ಡಾ| ಶಿವಕುಮಾರ ಮಾಲೀಪಾಟೀಲ್ ಸಂಚಾಲಕರು ನಮ್ಮ ಊರು ನಮ್ಮ ಹಳ್ಳ

•ಕೆ. ನಿಂಗಜ್ಜ

ಟಾಪ್ ನ್ಯೂಸ್

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.