ದುರುಗಮ್ಮನಹಳ್ಳ ಕಾಯಕಲ್ಪ ಅಂತಿಮ ಹಂತಕ್ಕೆ

•ನಮ್ಮೂರು ನಮ್ಮ ಹಳ್ಳ ಸಮಿತಿಗೆ ಉತ್ತಮ ಸ್ಪಂದನೆ•ಜಿಲ್ಲಾಧಿಕಾರಿಗಳ ಮಾರ್ಗದರ್ಶನಕ್ಕೆ ಸಿಕ್ಕಿತು ಫಲ

Team Udayavani, Jul 1, 2019, 10:36 AM IST

kopala-tdy-2..

ಗಂಗಾವತಿ: ಹಳ್ಳ ಹೂಳೆತ್ತುವ ಕಾರ್ಯವನ್ನು ವೀಕ್ಷಿಸಿದ ಶಾಸಕ ಪರಣ್ಣ ಮುನವಳ್ಳಿ.

ಗಂಗಾವತಿ: ನಗರದ ಮಧ್ಯೆ ಭಾಗದಲ್ಲಿರುವ ದುರುಗಮ್ಮನಹಳ್ಳದ ಕಾಯಕಲ್ಪ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ನಮ್ಮೂರು ನಮ್ಮ ಹಳ್ಳ ಸ್ವಚ್ಛತಾ ಸಮಿತಿಯ ಶ್ರಮ ಇದೀಗ ಸಾರ್ಥಕವಾಗುತ್ತಿದೆ. ನಗರದ ಎಸ್‌ಬಿಐ ಬ್ಯಾಂಕ್‌ನಿಂದ ಗುಂಡಮ್ಮನಕ್ಯಾಂಪ್‌ ಬಾಲಾಜಿ ಗ್ಯಾಜ್‌ ಕಂಪನಿವರೆಗೆ ಇಡೀ ಹಳ್ಳವನ್ನು ಸ್ವಚ್ಛಗೊಳಿಸುವ ಜತೆಗೆ ಇದೇ ಪ್ರಥಮಬಾರಿ ಹೂಳು ತೆಗೆದು ಸುಂದರವಾಗಿಸಲಾಗಿದೆ. ದುರುಗಮ್ಮನಹಳ್ಳವೋ ಚರಂಡಿಯೋ ಎಂದು ಅನುಮಾನ ಮೂಡಿಸುತ್ತಿದ್ದ ಹಳ್ಳ ಇದೀಗ ಘನತ್ಯಾಜ್ಯ, ನಗರದ ಕಸವನ್ನು ಸ್ವಚ್ಛಗೊಳಿಸಿ ಸುಂದರವಾಗಿ ಕಾಣುವಂತೆ ಮಾಡಲಾಗಿದೆ.

ಹಳ್ಳಕ್ಕೆ ಸಂತೆಯಲ್ಲಿ ಉಳಿದ, ಕೊಳೆತ ತರಕಾರಿ ಮತ್ತು ಹೋಟೆಲ್ನಲ್ಲಿ ಉಳಿದ ಆಹಾರ ಸುರಿಯುವ ಮೂಲಕ ಚರಂಡಿಯನ್ನಾಗಿಸಿದ ಪರಿಣಾಮ ಇಡೀ ದುರುಗಮ್ಮನಹಳ್ಳ ಗಬ್ಬೆದ್ದು ನಾರುತ್ತಿತ್ತು. ಹಳ್ಳದ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುವವರು ಮೂಗು ಮುಚ್ಚಿಕೊಂಡು ಹೋಗುವಂತಹ ಸ್ಥಿತಿಯುಂಟಾಗಿತ್ತು. ಜತೆಗೆ ಪೌರಕಾರ್ಮಿಕರು ನಗರದಲ್ಲಿ ಉತ್ಪಾದನೆಯಾಗುತ್ತಿದ್ದ ಹಸಿ ಮತ್ತು ಒಣ ತ್ಯಾಜ್ಯವನ್ನು ಹಳ್ಳಕ್ಕೆ ಸುರಿದು ಬೆಂಕಿ ಹಚ್ಚುತ್ತಿದ್ದರು. ಈ ಗಾಳಿಯನ್ನು ಸೇವಿಸುವ ಜನರಿಗೆ ಅಲರ್ಜಿ, ಅಸ್ತಮಾ ಸೇರಿ ಉಸಿರಿನ ತೊಂದರೆಯಾಗುತ್ತಿತ್ತು. ಈ ಎಲ್ಲಾ ಸಮಸ್ಯೆಗಳ ಕುರಿತು ‘ಉದಯವಾಣಿ’ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತ್ತು.

ನಂತರ ಎಚ್ಚೆತ್ತ ಡಾ| ಶಿವಕುಮಾರ ಮಾಲೀಪಾಟೀಲ್ ನೇತೃತ್ವದ ನಮ್ಮೂರು ನಮ್ಮ ಹಳ್ಳ ಸ್ವಚ್ಛತಾ ಸಮಿತಿ ಸದಸ್ಯರು ಹಳ್ಳ ಸ್ವಚ್ಛತೆ ಬಗ್ಗೆ ಆಗಾಗ ಸಭೆ ನಡೆಸಿ, ವಿವಿಧ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳ, ವೈದ್ಯರ ಸಹಕಾರದಿಂದ ಹಳ್ಳದಲ್ಲಿದ್ದ ಕಸ, ಪ್ಲಾಸ್ಟಿಕ್‌ ವಿವಿಧ ಅಪಾಯಕಾರಿ ಘನತ್ಯಾಜ್ಯವನ್ನು ನಗರಸಭೆಯ ಸ್ವಚ್ಛತಾ ಸಿಬ್ಬಂದಿ ನೆರವಿನೊಂದಿಗೆ ಸ್ವಚ್ಛಗೊಳಿಸಿ ಮಲಕನಮರಡಿ ಯಾರ್ಡ್‌ಗೆ ಸಾಗಿಸಲಾಯಿತು.

ಈ ಮಧ್ಯೆ ದುರುಗಮ್ಮನಹಳ್ಳಕ್ಕೆ ಎರಡು ಕಡೆ ಗೋಡೆ ನಿರ್ಮಿಸಿ ವಾಹನ ನಿಲುಗಡೆ ಮಾಡಲು ಯೋಜನೆ ಸಿದ್ಧಪಡಿಸಿ ಸರಕಾರ ಟೆಂಡರ್‌ ಕರೆದು ಗುತ್ತಿಗೆ ನೀಡಿತ್ತು. ಈ ಕಾಮಗಾರಿ ಅವೈಜ್ಞಾನಿಕವಾಗಿದ್ದು ಹಳ್ಳವನ್ನು ಸ್ವಚ್ಛಗೊಳಿಸಿ ಹೂಳೆತ್ತಿದ ನಂತರವೇ ಹಳ್ಳದಲ್ಲಿ ಅಮೃತಸಿಟಿ ಕಾಮಗಾರಿ ನಡೆಯುವಂತೆ ನಮ್ಮೂರು ನಮ್ಮ ಹಳ್ಳ ಸಮಿತಿಯವರು ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದ ನಂತರವೇ ಅಮೃತಸಿಟಿ ಕಾಮಗಾರಿಯನ್ನು ಕೆಲ ಬದಲಾವಣೆ ಮಾಡಿ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸೂಚನೆ ನೀಡಿ ಹೂಳೆತ್ತಲು ಜಿಲ್ಲಾಡಳಿತದಿಂದ 5 ಲಕ್ಷ ಮಂಜೂರಿ ಮಾಡಿದರು.

5 ಲಕ್ಷ ರೂ. ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದ್ದರಿಂದ ಸಮಿತಿಯವರು ಶಾಸಕ ಪರಣ್ಣ ಮುನವಳ್ಳಿಗೆ ಮನವಿ ಮಾಡಿದ್ದರಿಂದ ಶಾಸಕರು ಹೂಳೆತ್ತುವ ಕಾಮಗಾರಿ ನಡೆಯಲಿ. ಸರಕಾರ ಮತ್ತು ಸಾರ್ವಜನಿಕರ ವಂತಿಗೆ ಪಡೆದು ಹಳ್ಳವನ್ನು ಸೌಂದರ್ಯ ಮಾಡುವ ಸಂಕಲ್ಪ ಮಾಡಿದರು. ಉದ್ಯಮಿ ಕಳಕನಗೌಡ ತಮ್ಮ ಯಂತ್ರೋಪಕರಣಗಳ ಮೂಲಕ 16 ದಿನಗಳಿಂದ ಹೂಳೆತ್ತಿ ಇಡೀ ಹಳ್ಳವನ್ನು ಸ್ವಚ್ಛ, ಸುಂದರವಾಗಿಸಿದ್ದಾರೆ. ಹೂಳೆತ್ತಿದ ನಂತರ ಹಳ್ಳದ ಎರಡು ಕಡೆ ಗೋಡೆ ನಿರ್ಮಿಸಿ ಬದಿಯಲ್ಲಿ ಸಸಿ ನೆಟ್ಟು ಬೆಳೆಸುವ ಉದ್ದೇಶ ಹೊಂದಿದ್ದಾರೆ.

 

•ಕೆ.ನಿಂಗಜ್ಜ

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯಗೆ ಶರಣಾದ ವಿವಾಹಿತ ಜೋಡಿ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿವಾಹಿತ ಜೋಡಿ

Koppala; Congress guarantee will not last, only Modi guarantee is permanent: AS Nadahalli

Koppala; ಕಾಂಗ್ರೆಸ್ ಗ್ಯಾರಂಟಿ ಉಳಿಯಲ್ಲ, ಮೋದಿ ಗ್ಯಾರಂಟಿ ಮಾತ್ರ ಶಾಶ್ವತ: ಎ.ಎಸ್.ನಡಹಳ್ಳಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.