ಆನೆಗೊಂದಿ-ಹೇಮಗುಡ್ಡದಲ್ಲಿ ದಸರಾ ವೈಭವ

ಇಲ್ಲಿಯ ದಸರಾಕ್ಕಿದೆ ಮಹತ್ವ; ಹಬ್ಬ ಕಮ್ಮಟ ದುರ್ಗದಿಂದ ಆರಂಭ ; ಈಗ ಮೈಸೂರಿನಲ್ಲಿ ಸಂಭ್ರಮ

Team Udayavani, Oct 4, 2022, 3:49 PM IST

15

ಗಂಗಾವತಿ: ರಾಜ್ಯದಲ್ಲಿ ನಾಡಹಬ್ಬ ದಸರಾಕ್ಕೆ ತನ್ನದೇ ಆದ ಮಹತ್ವವಿದೆ. ಈ ಹಬ್ಬ ಆಚರಣೆಗೆ ತಂದವರು ಕುಮ್ಮಟ ದುರ್ಗ, ಆನೆಗೊಂದಿ, ವಿಜಯನಗರ ಅರಸರು ಎನ್ನುವ ಮಾಹಿತಿ ಇತಿಹಾಸದಲ್ಲಿ ಉಲ್ಲೇಖವಾಗಿದೆ.

ಪ್ರಸ್ತುತ ಮೈಸೂರು ದಸರಾ ಹಬ್ಬ ಈ ಮೊದಲು ಕುಮ್ಮಟದುರ್ಗದಿಂದ ಆರಂಭವಾಗಿ ವಿಜಯನಗರದಲ್ಲಿ ಇದೀಗ ಮೈಸೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ.

ಸಾಮ್ರಾಜ್ಯದ ರಕ್ಷಣೆಯ ಹೊಣೆ ಹೊತ್ತಿರುವ ಸೈನ್ಯದ ಬಲ ಪ್ರದರ್ಶನ ಮತ್ತು ಆಯುಧ ಪೂಜೆ ನೆಪದಲ್ಲಿ ಕುಮ್ಮಟದುರ್ಗ ಅರಸರು 9 ದಿನಗಳವರೆಗೆ ವಿಶೇಷವಾಗಿ ದೇವಿಯ ಆರಾಧನೆ ಆರಂಭಿಸಿದರು. ಕುಮ್ಮಟ ದುರ್ಗದ ನಂತರ ಆನೆಗೊಂದಿ ಮೂಲಕ ಹಂಪಿಯಲ್ಲಿ ಸ್ಥಾಪನೆಗೊಂಡ ವಿಜಯನಗರ ಸಾಮ್ರಾಜ್ಯದಲ್ಲಿ ಮಹಾನವಮಿ ದಿಬ್ಬದ ಬಳಿ ಸೇನೆಯ ಶಕ್ತಿ ಪ್ರದರ್ಶನ, 9 ದಿನಗಳ ಕಾಲ ಶ್ರೀದೇವಿಯ ಆರಾಧನೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿದ್ದವು. ಇತಿಹಾಸಕಾರರ ಮಾಹಿತಿ ಪ್ರಕಾರ ಮೈಸೂರು ದಸರಾ ಆನೆಯ ಅಂಬಾರಿ ಮತ್ತು ಸಿಂಹಾಸನ ಮೂಲತಃ ಕುಮ್ಮಟದುರ್ಗದ ಅರಸರಿಗೆ ಸೇರಿದ್ದವು. ಶತ್ರುಗಳ ದಾಳಿ ಹಿನ್ನೆಲೆಯಲ್ಲಿ ಆನೆಗೊಂದಿ, ವಿಜಯನಗರ, ಚಂದ್ರಗಿರಿ, ಶ್ರೀರಂಗಪಟ್ಟಣ ನಂತರ ಮೈಸೂರು ಯದುವಂಶದ ಅರಸರ ಆಡಳಿತಕ್ಕೊಪ್ಪಿಸಲಾಗಿದೆ ಎಂಬ ಮಾಹಿತಿ ಇದೆ.

ಈಗಲೂ ಆನೆಗೊಂದಿ ವಾಲೀಕಿಲ್ಲಾ ಕೋಟೆಯಲ್ಲಿರುವ ಆದಿಶಕ್ತಿ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಮತ್ತು ಕುಮ್ಮಟದುರ್ಗದ ಹತ್ತಿರ ಇರುವ ಹೇಮಗುಡ್ಡ ದುರ್ಗಾ ಪರಮೇಶ್ವರಿ ದೇಗುಲಗಳಲ್ಲಿ ದಸರಾ ಹಬ್ಬವನ್ನು 9 ದಿನಗಳ ಕಾಲ ವೈಭವಯುತವಾಗಿ ಆಚರಿಸಲಾಗುತ್ತದೆ. ಹಬ್ಬದ ಕೊನೆಯ ದಿನ ಆನೆ ಮೇಲೆ ಅಂಬಾರಿಯಲ್ಲಿ ದೇವತೆಯ ಮೂರ್ತಿ ಪ್ರತಿಷ್ಠಾಪಿಸಿ ಜನಪದ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆ ಆಕರ್ಷಿಣೀಯವಾಗಿರುತ್ತದೆ.

ಆನೆಗೊಂದಿಯಲ್ಲಿ ರಾಜವಂಶಸ್ಥರ ನೇತೃತ್ವದಲ್ಲಿ ದಸರಾ ಆಚರಿಸಲಾಗುತ್ತದೆ. 9 ದಿನಗಳ ಕಾಲ ಶ್ರೀದೇವಿಯ ಪುರಾಣ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತದೆ. ತಾಲೂಕಿನ ಹೇಮಗುಡ್ಡದಲ್ಲಿ ಮಾಜಿ ಸಂಸದ ಎಚ್‌.ಜಿ.ರಾಮುಲು ಕುಟುಂಬದವರು 28 ವರ್ಷಗಳಿಂದ ಅದ್ಧೂರಿಯ ನವರಾತ್ರಿ ಉತ್ಸವ ಆಯೋಜಿಸುತ್ತಿದ್ದಾರೆ. ಉತ್ತರ ಕರ್ನಾಟಕದ ನೂರಾರು ಕಲಾ ತಂಡಗಳು ಡೊಳ್ಳು, ಕೋಲು ಕುಣಿತದ ತಂಡಗಳು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತವೆ. ಪ್ರತಿನಿತ್ಯ ಅನ್ನದಾನ ನಡೆಯುತ್ತದೆ.

ದಸರಾ ಹಬ್ಬದ ಮೂಲಕ ಪುರಾತನ ಧಾರ್ಮಿಕ ಸಾಂಸ್ಕೃತಿಕೋತ್ಸವವನ್ನು ಆನೆಗೊಂದಿ-ಹೇಮಗುಡ್ಡದಲ್ಲಿ ನಿರಂತರವಾಗಿ ಮುಂದುವರಿಸಲಾಗುತ್ತಿದೆ.

ಸರಕಾರ ಆನೆಗೊಂದಿ- ಹೇಮಗುಡ್ಡ ದಸರಾ ಹಬ್ಬ ಆಚರಣೆಗೆ ಬಜೆಟ್‌ನಲ್ಲಿ ವಿಶೇಷ ಅನುದಾನ ನೀಡಬೇಕು. ಕನ್ನಡ ಸಂಸ್ಕೃತಿ ಸಚಿವಾಲಯದಿಂದ 9 ದಿನಗಳ ಕಾಲ ಕಾರ್ಯಕ್ರಮ ಆಯೋಜಿಸಬೇಕು. ಪ್ರತಿವರ್ಷ ಆನೆಗೊಂದಿ ಉತ್ಸವ ಆಚರಣೆಗೂ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು. ಅಮರೇಶಪ್ಪ ಇಂಗಳಗಿ, ಕಲಾವಿದರು.

„ಕೆ.ನಿಂಗಜ್ಜ

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.