ಬಹುಗ್ರಾಮ ಕುಡಿವ ನೀರಿನ ಯೋಜನೆಗೆ ಗ್ರಹಣ

•84 ಹಳ್ಳಿಗೆ ನೀರು ಪೂರೈಸುವ ಯೋಜನೆ•ಸಚಿವರೇ ವೀಕ್ಷಣೆ ಮಾಡಿದ್ರು•2010ರಲ್ಲೇ ಕೆಲಸ ಶುರು

Team Udayavani, Aug 7, 2019, 1:24 PM IST

kopala-tdy-3

ಕೊಪ್ಪಳ: ತಾಲೂಕಿನ ಬಹುದೊಡ್ಡ ಕುಡಿಯುವ ನೀರಿನ ಯೋಜನೆಯಾದ 84 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮತ್ತೆ ಗ್ರಹಣ ಬಡಿತೇ ಎನ್ನುವ ಮಾತುಗಳು ಕೇಳಿ ಬಂದಿವೆ. ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದಿದ್ದು, ಅವರಾದರೂ ಈ ಯೋಜನೆ ಬಗ್ಗೆ ಕಾಳಜಿ ವಹಿಸಲಿ.

ಹೌದು. ಕೊಪ್ಪಳ ತಾಲೂಕಿನಲ್ಲಿಯೇ ತುಂಗಭದ್ರಾ ಜಲಾಶಯವಿದ್ದರೂ ಹಲವು ಹಳ್ಳಿಗಳು ಇಂದಿಗೂ ಕುಡಿಯುವ ನೀರಿಲ್ಲ. ಪ್ರತಿ ಬೇಸಿಗೆಯ ಸಂದರ್ಭದಲ್ಲಿ ನೀರಿಗಾಗಿ ಹಾಹಾಕಾರ ಸೃಷ್ಟಿಯಾಗುತ್ತದೆ. ಗ್ರಾಮೀಣ ಪ್ರದೇಶದ ಜನರಂತೂ ಹೊಲ ಗದ್ದೆಗಳಿಗೆ ಸುತ್ತಾಡುವುದು ಇಂದಿಗೂ ಕಾಣಲಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು 2008-09ನೇ ಸಾಲಿನಲ್ಲಿ ತುಂಗಭದ್ರಾ ಹಿನ್ನೀರಿನ ಮೂಲಕ 84 ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸಿತ್ತು. ಅದರಂತೆ 2010ರಲ್ಲಿ ಕಾಮಗಾರಿಯನ್ನೂ ಆರಂಭಿಸಲಾಯಿತು. ಈ ವರೆಗೂ ಬರೊಬ್ಬರಿ 58 ಕೋಟಿ ರೂ. ಅನುದಾನ ಈ ಕಾಮಗಾರಿಗೆ ಖರ್ಚಾಗಿದೆ. ಆದರೆ ಈ ವರೆಗೂ ಮೊದಲ ಹಂತದ ಹಳ್ಳಿಗಳಿಗೆ ಕುಡಿಯುವ ನೀರನ್ನು ಪೂರೈಸಿಲ್ಲ.

ಈ ಯೋಜನೆಯಲ್ಲಿ ಕಾಸನಕಂಡಿ ಸಮೀಪದಲ್ಲಿ ಮೇನ್‌ ರೈಸಿಂಗ್‌ ಪೈಪ್‌ ಡಿಸೈನ್‌ ಸರಿಯಿಲ್ಲ ಎಂದು ತಾಂತ್ರಿಕ ವರದಿ ಹೇಳುತ್ತಿದೆ. ನೀರು ಪೂರೈಸಿದರೆ ಪೈಪ್‌ಗ್ಳು ಎಲ್ಲೆಂದರಲ್ಲಿ ಒಡೆದು ನೀರು ಸೋರಿಕೆಯಾಗುತ್ತಿವೆ ಎನ್ನುತ್ತಿದ್ದಾರೆ ಇಂಜನಿಯರ್‌ಗಳು. ಇದೆಲ್ಲವನ್ನು ಅರಿತು ಶಾಸಕ ರಾಘವೇಂದ್ರ ಹಿಟ್ನಾಳ ಅವರು ಇತ್ತೀಚೆಗಷ್ಟೆ ಮೈತ್ರಿ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೃಷ್ಣಭೈರೇಗೌಡ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಕಾಸನಕಂಡಿ ಬಳಿಯ ನೀರು ಪೂರೈಕೆ ಮಾಡುವ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ವಾಸ್ತುವ ಕುರಿತು ಪರಿಶೀಲನೆ ಮಾಡಿದ್ದರು. ಸ್ವತಃ ಭೈರೇಗೌಡ ಅವರೇ ಅಲ್ಲಿನ ನೀಲನಕ್ಷೆ ಸಮೇತ ವಾಸ್ತುವ ಸ್ಥಿತಿ ಅವಲೋಕಿಸಿ ಇಲಾಖೆ ಆಯುಕ್ತರನ್ನು ಭೇಟಿ ನೀಡಿ ವರದಿ ಸಲ್ಲಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ಪ್ರಸ್ತಾಪ ಮಾಡಿದ್ದರು. ಆದರೆ, ಅಷ್ಟರೊಳಗೆ ಮೈತ್ರಿ ಸರ್ಕಾರ ಪತನವಾಗಿದೆ.

ಬಿಜೆಪಿ ಸರ್ಕಾರದಲ್ಲೇ ಯೋಜನೆ ಜಾರಿ!:

ವಿಶೇಷವೆಂಬಂತೆ, ಕೊಪ್ಪಳ ತಾಲೂಕಿನ 84 ಹಳ್ಳಿಗಳ ಕುಡಿಯುವ ನೀರಿನ ಯೋಜನೆ ಈ ಹಿಂದೆ 2008ರಲ್ಲಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಜಾರಿಯಾಗಿತ್ತು. ಆಗ ಸಂಗಣ್ಣ ಕರಡಿ ಅವರು ಶಾಸಕರಾಗಿದ್ದು, ಈ ಯೋಜನೆಯ ಬಗ್ಗೆ ಕಾಳಜಿ ವಹಿಸಿ ಜಾರಿ ಮಾಡಿಸಿದ್ದರು. ಯೋಜನೆಯ ಅನುದಾನ ನೀರಿನಂತೆ ಖರ್ಚಾಗಿದೆ. ಆದರೆ ಜನರಿಗೆ ನೀರು ಪೂರೈಕೆಯಾಗಿಲ್ಲ. ಕಳೆದ ಏಳೆಂಟು ವರ್ಷಗಳಿಂದ ಈ ಯೋಜನೆಯು ವಿಫಲವಾಗಿದ್ದರಿಂದ ಬರಿ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆಯಲ್ಲಿಯೇ ಕಾಲಹರಣ ಮಾಡಿ

ಯೋಜನೆಯನ್ನು ಮುಂದೂಡುತ್ತಾ ಬಂದಿತ್ತು. ಇದರಿಂದ ಜನರು ಬಹುಗ್ರಾಮದ ಯೋಜನೆಯ ಆಸೆ ಬಗ್ಗೆ ನಿರೀಕ್ಷೆಯನ್ನೇ ಕಳೆದುಕೊಂಡಿದ್ದರು. ಈಗ ಮತ್ತೆ ರಾಜ್ಯದಲ್ಲಿ ಯಡಿಯೂರಪ್ಪ ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಿಜೆಪಿ-ಕಾಂಗ್ರೆಸ್‌ ರಾಜಕಾರಣದ ಮಧ್ಯೆ ಯೋಜನೆ ನರಳಾಡುತ್ತಿದೆ. ಜನರಿಗೆ ಇತ್ತ ನೀರು ಕೊಡುತ್ತಿಲ್ಲ. ಅತ್ತ ತಪ್ಪಿತಸ್ಥರ ಮೇಲೆಯೂ ಯಾವುದೇ ಕ್ರಮವಿಲ್ಲವೆಂಬಂತಾಗಿದೆ. ಇನ್ನಾದರೂ ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ ಅವರು ರಾಜಕಾರಣ ಮರೆತು ಯೋಜನೆ ಬಗ್ಗೆ ಕಾಳಜಿ ಕೊಟ್ಟು ಜನರಿಗೆ ನೀರು ಪೂರೈಸುವ ಕೆಲಸ ಮಾಡಬೇಕಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.