ಸಮಾಜದ ಏಳ್ಗೆಗೆ ಶಿಕ್ಷಣ ಅವಶ್ಯ: ಎಂ.ಡಿ. ಲಕ್ಷ್ಮೀನಾರಾಯಣ

ಸಂಕಷ್ಟದ ಸ್ಥಿತಿಯಲ್ಲಿದೆ ನೇಕಾರರ ಬದುಕು; ಸಮಾಜದಿಂದ ಉನ್ನತ ವ್ಯಾಸಾಂಗಕ್ಕೆ ನೆರವು

Team Udayavani, Nov 6, 2022, 4:54 PM IST

14

ದೋಟಿಹಾಳ: ನೇಕಾರರ ಬದುಕು ದುಸ್ಥಿತಿಯಲ್ಲಿ ಇದೆ. ಹೀಗಾಗಿ ನಾವೆಲ್ಲರೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು. ಆಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ವಿಧಾನ ಪರಿಷತ್ತಿನ ಸದಸ್ಯ ಹಾಗೂ ರಾಜ್ಯ ನೇಕಾರ ಸಮುದಾಯ ಒಕ್ಕೂಟದ ಅಧ್ಯಕ್ಷ ಎಂ.ಡಿ.  ಲಕ್ಷ್ಮೀನಾರಾಯಣ್ ಕರೆ ನೀಡಿದರು.

ಗ್ರಾಮದ ದೇವಾಂಗ ಮಹರ್ಷಿ ಸಾಂಸ್ಕೃತಿಕ ಭವನದಲ್ಲಿ ಶನಿವಾರ ದೇವಾಂಗ ಸಂಘ, ದಯಾನಂದಪುರಿ ಕ್ರೀಡಾ, ಸಾಂಸ್ಕೃತಿಕ ಜಾನಪದ ಕಲಾ ಸಂಘ ಹಾಗೂ ಗಾಯಿತ್ರಿ ಮಹಿಳಾ ಸಂಘ ದೋಟಿಹಾಳ ಇವರ ಸಹಯೋಗದಲ್ಲಿ ನಡೆದ ದೇವಲ ಮಹರ್ಷಿಗಳ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಂಘದ ರಜತ ಮಹೋತ್ಸವ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು.

ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ, ನಮ್ಮ ಸಮಾಜದಲ್ಲಿ ಜಾತಿ ಯಾವುದೇ ಆಗಿರಲಿ ಆದರೆ ಅವರು ಸಮಾಜಕ್ಕೆ ನೀಡುವ ಕೊಡುಗೆ ಮಾತ್ರ ಮಹೊನ್ನತವಾಗಿರುತ್ತದೆ. ಅನಾದಿ ಕಾಲದಿಂದಲು ಮಗ್ಗ, ಲಾಳಿ, ಲಡಿ ಹಿಡಿದುಕೊಂಡು ಬೆಳೆಯುತ್ತಿರುವ ನಮ್ಮ ನೇಕಾರ ಮಕ್ಕಳಿಗೆ ಉನ್ನತ ಶಿಕ್ಷಣ ಎಂಬುದು ಮರೀಚಿಕೆಯಾಗಿದೆ. ಸದ್ಯ ನೇಕಾರರ ಸ್ಥಿತಿ ಚಿಂತಾಜನಕವಾಗಿದೆ. ಈಗ ನಮಗಿರುವುದು ಒಂದೇ ದಾರಿ, ನಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವುದು. ಅದಕ್ಕಾಗಿ ಸಮಾಜದ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಉಚಿತ ತರಬೇತಿ ನೀಡುವಂತಹ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಉಪ ಆಯುಕ್ತೆ ಭಾಗ್ಯಶ್ರೀ ರಾಮಚಂದ್ರ ಹುಗ್ಗಿ ಗಾಯಿತ್ರಿ ಮಹಿಳಾ ಸಂಘವನ್ನು ಉಧ್ಘಾಟಿಸಿದರು.

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ದಯಾನಂದಪುರಿ ಸಂಘದವರು ರಚನಾತ್ಮಕ ಕಾರ್ಯಗಳನ್ನು ಮಾಡುವುದರ ಮೂಲಕ ಈ ಸಂಘ ಮತ್ತು ಸಮಾಜ ತಾಲೂಕಿನಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು.

ದಯಾನಂದಪುರಿ ಸಂಘದ ಕಾರ್ಯದರ್ಶಿ ಶ್ರೀನಿವಾಸ ಕಂಟ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಖಿಲ ಭಾರತ ದೇವಾಂಗ ಸಮಾಜದ ಜಗದ್ಗುರು, ಶ್ರೀ ಗಾಯಿತ್ರಿ ಪೀಠಾಧ್ಯಕ್ಷ ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು.

ನಾರಾಯಣಸ್ವಾಮಿ ದೇವಾಂಗಮಠ, ರುದ್ರಮುನಿಸ್ವಾಮಿ ದೇವಾಂಗಮಠ, ಈಶ್ವರಸ್ವಾಮಿ ದೇವಾಂಗಮಠ, ಗ್ರಾಪಂ ಅಧ್ಯಕ್ಷ ಲಕ್ಷ್ಮವ್ವ ಕುಷ್ಟಗಿ, ಮಾಜಿ ಜಿಪಂ ಸದಸ್ಯ ಕೆ.ಮಹೇಶ, ಮಾಜಿ ತಾಪಂ ಸದಸ್ಯ ಮಹಾಂತೇಶ ಬಾದಾವಿ, ಸಂಡೂರ ಅಬಕಾರಿ ಎಸ್.ಐ ಬಸವರಾಜ ಗುಗ್ಗರಿ, ಹುನಗುಂದ ಬಿಇಓ ವೆಂಕಟೇಶ ಕೊಂಕಲ್, ಗ್ರಾಪಂ ಸದಸ್ಯರಾದ ದೇವರಾಜ ಕಟ್ಟಿಮನಿ, ಮಹೇಶ ಕಾಳಗಿ, ಲಕ್ಷ್ಮೀಬಾಯಿ ಸಕ್ರಿ, ಮುಖಂಡರಾದ ರಾಮಚಂದ್ರ ಹುಗ್ಗಿ, ಶಿವಶಂಕರ ಕರಡಕಲ್, ಹಿರೇಣ್ಯಪ್ಪ ಸಕ್ರಿ, ರಾಮನಗೌಡ ಬಿಜ್ಜಲ್, ಶಿವಪುತ್ರಪ್ಪ ಮಾಳಗಿ, ಬಾಳಪ್ಪ ಅರಳಿಕಟ್ಟಿ, ಅಮರೇಗೌಡ ಬಿಜ್ಜಲ್, ಪಂಪಾಪತಿ ಅರಳೀಕಟ್ಟಿ, ಸಮಾಜದ ಮುಖಂಡರು, ಯುವಕರು, ಮಹಿಳೆಯರು, ಗಾಯಿತ್ರಿ ಮಹಿಳಾ ಸಂಘದವರು ಮತ್ತು ದಯಾನಂದಪುರಿ ಸಂಘದ ಸದಸ್ಯರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿರ‍್ದಿದರು.

ಶಿಕ್ಷಕ ಉಮಾಪತಿ ಮಾಳಗಿಯವರು ನಿರೂಪಿಸಿ, ನಾಗರಾಜ ಕಾಳಗಿ ವಂದಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.