ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .
Team Udayavani, Oct 19, 2021, 4:42 PM IST
ಗಂಗಾವತಿ: ಶಾಂತಿ ಸೌಹಾರ್ದತೆ ಪರಧರ್ಮ ಸಹಿಷ್ಣುತೆ ಪೈಗಂಬರ್ ಜಯಂತಿಯ ಮೂಲ ಉದ್ದೇಶವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಇತರರ ಧರ್ಮವನ್ನು ಸೌಹಾರ್ದ ಮತ್ತು ಗೌರವಯುತವಾಗಿ ಕಾಣುವಂತೆ ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ ಹೇಳಿದರು .
ಅವರು ನಗರದ ಕರ್ನೂಲ್ ಬಾಬಾ ದರ್ಗಾ ಹತ್ತಿರ ಮಹಮ್ಮದ್ ಪೈಗಂಬರ್ ಜಯಂತಿ ನಿಮಿತ್ತ ಸರಳವಾಗಿ ಆಯೋಜಿಸಿದ್ದ ಧಾರ್ಮಿಕ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು .
ಸರ್ಕಾರ ಕೊರೋನ ಹಿನ್ನೆಲೆಯಲ್ಲಿ ಮೆರವಣಿಗೆ ಮಾಡದಂತೆ ಆದೇಶ ವಿಧಿಸಿದ್ದರೂ ಸರಳವಾಗಿ ಕಡ್ಡಾಯವಾಗಿ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಮೆರವಣಿಗೆಗೆ ಆಯೋಜನೆ ಮಾಡಲಾಗಿದೆ. ಮೆರವಣಿಗೆ ಮೂಲ ಉದ್ದೇಶ ಮಹಾನ್ ವ್ಯಕ್ತಿಗಳ ವಿಚಾರವನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡಬೇಕು ಆ ಮೂಲಕ ಧಾರ್ಮಿಕ ಸೌಹಾರ್ದತೆ ಬೆಳೆಸಬೇಕು .
ಪ್ರತಿಯೊಬ್ಬರೂ ಮನೆಯಲ್ಲಿ ಪೈಗಂಬರ್ ಜಯಂತಿ ಆಚರಣೆ ಮಾಡುವ ಮೂಲಕ ಅವರ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದರು .
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಹಮ್ಮದ್ ಉಸ್ಮಾನ್ ಬಿಚ್ಚುಗತ್ತಿ ,ಸಲೀಂ ,ಸಾದಿಕ್ ಸೇರಿ ಮುಸ್ಲಿಂ ಸಮಾಜದ ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ