ಎಂಟು ತಿಂಗಳಿಂದ ನೀಡಿಲ್ಲ ವೇತನ


Team Udayavani, Nov 19, 2018, 3:58 PM IST

19-november-18.gif

ಗಂಗಾವತಿ: ಸರಕಾರದ ಖಜಾನೆ-02ದಿಂದ ಅಂಗನವಾಡಿ ನೌಕರರಗೆ ನೇರ ವೇತನ ಪಾವತಿ ನೆಪದಲ್ಲಿ ಸರಕಾರ 8 ತಿಂಗಳಿಂದ ರಾಜ್ಯದ ಅಂಗನವಾಡಿ ನೌಕರರ ವೇತನ ಬಾಕಿ ಉಳಿಸಿಕೊಂಡಿದ್ದು, ಅಂಗನವಾಡಿ ನೌಕರರು ಕುಟುಂಬ ನಿರ್ವಹಣೆ ಸೇರಿ ಇತರೆ ಖರ್ಚಿಗೆ ಸಾಲ ಮಾಡುವ ಸ್ಥಿತಿ ಬಂದೊದಗಿದೆ. ಇದುವರೆಗೂ ನೌಕರರ ವೇತನವನ್ನು ತಾಲೂಕು ಮಟ್ಟದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿಗಳು ಬಿಲ್‌ ಮಾಡುವ ಮೂಲಕ ವೇತನ ಪಾವತಿ ವ್ಯವಸ್ಥೆ ಇತ್ತು. ಇದರಿಂದ ಪ್ರತಿ ತಿಂಗಳು ಸರಿಯಾಗಿ ವೇತನ ಪಾವತಿಯಾಗುತ್ತಿರಲಿಲ್ಲ. 

ಸರಕಾರದ ಖಜಾನೆಯಿಂದ ನೇರವಾಗಿ ವೇತನ ಪಾವತಿ ಮಾಡುವಂತೆ ಅಂಗನವಾಡಿ ನೌಕರರು ಹಲವು ಬಾರಿ ಹೋರಾಟ ಮಾಡಿದ್ದರಿಂದ ಸರಕಾರ ಖಜಾನೆ -02ರಿಂದ ವೇತನ ಪಾವತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಫ್ಟ್‌ವೇರ್‌ ಸಿದ್ಧತೆ ಮತ್ತು ಕಳೆದ ವರ್ಷ ಮಾಜಿ ಸಿಎಂ ಸಿದ್ದರಾಮಯ್ಯ ಮಂಡನೆ ಮಾಡಿದ ಬಜೆಟ್‌ನಲ್ಲಿ 2 ಸಾವಿರ ವೇತನ ಹೆಚ್ಚಳ ಮಾಡಿ ಹಣ ಮೀಸಲಿರಸದೇ ಇಲಾಖೆಯಲ್ಲಿ ಸರಿದೂಗಿಸುವಂತೆ ಸೂಚನೆ ನೀಡಿ¨ª‌ರಿಂದಾಗಿ ವೇತನ ಪಾವತಿ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.

ನೌಕರರ ವೇತನ ವಿಳಂಬದಿಂದ ಅವರ ಕುಟುಂಬಕ್ಕೆ ಮಾತ್ರ ಸಂಕಷ್ಟ ಎದುರಾಗಿಲ್ಲ, ಬದಲಿಗೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿಗಳ ಮಾಲೀಕರು ಬಾಡಿಗೆ ಪಾವತಿಸುವಂತೆ ಪ್ರತಿದಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಒತ್ತಡ ಹಾಕುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಮೊಟ್ಟೆ ಮತ್ತು ಗ್ಯಾಸ್‌ ಸಿಲಿಂಡರ್‌ಗಳಿಗೆ ಹಣ ಪಾವತಿಸಿಲ್ಲದ ಕಾರಣ ಪೂರೈಕೆ ನಿಲುಗಡೆ ಮಾಡಲು ಟೆಂಡರ್‌ ಪಡೆದವರು ಯೋಚಿಸುತ್ತಿದ್ದಾರೆ. ಮಹತ್ವದ ಮಾತೃ ಪೂರ್ಣಯೋಜನೆಗೆ ಸಾಲ ಮಾಡಿ ತರಕಾರಿ ಮತ್ತು ಇತರೆ ಸರಕು ಖರೀದಿಸಿರುವ ಕಾರಣ ಅಂಗಡಿಯವರಿಗೆ ಪ್ರತಿ ದಿನ ಸುಳ್ಳು ಹೇಳುವ ಸ್ಥಿತಿಯುಂಟಾಗಿದೆ. 

ಇನ್ನೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ವೇತನ ಇಲ್ಲದ ಕಾರಣ ಕುಟುಂಬ ನಿರ್ವಹಣೆ, ಮಕ್ಕಳ ಶಾಲಾ-ಕಾಲೇಜು ಶುಲ್ಕ, ಹಾಲು, ತರಕಾರಿ, ಆಹಾರ ಪದಾರ್ಥಗಳಿಗೆ ಪಾವತಿಸಲು ಹಣದ ತೊಂದರೆಯಿಂದ ಕಷ್ಟವಾಗಿದೆ.

ಸರಕಾರದ ಖಜಾನೆಯಿಂದ ನೇರವಾಗಿ ಪಾವತಿ ಮಾಡುವ ನೆಪದಲ್ಲಿ 8 ತಿಂಗಳಿಂದ ವೇತನವನ್ನು ವೇತನ ಬಿಡುಗಡೆ ಮಾಡಿಲ್ಲ. ಕುಟುಂಬ ನಿರ್ವಹಣೆಗೆ ಹಣವಿಲ್ಲ. ಕೆಲವೆಡೆ ಬಾಡಿಗೆ ಕಟ್ಟಡದಲ್ಲಿ ನಡೆಯುವ ಕೇಂದ್ರಗಳಿಗೆ ಬಾಡಿಗೆ ಕೊಡಲು ಹಣವಿಲ್ಲ ಕಟ್ಟಡ ಮಾಲೀಕರ ಒತ್ತಡಕ್ಕೆ ಸಾಕಾಗಿ ಹೋಗಿದೆ.
ಹೆಸರೇಳಲಿಚ್ಛಿಸದ ಅಂಗನವಾಡಿ ಕಾರ್ಯಕರ್ತೆ

ವೇತನ ನೇರಪಾವತಿ ಮತ್ತು ವೇತನ ಹೆಚ್ಚಳ ಮಾಡುವ ತಾಂತ್ರಿಕ ನೆಪವೊಡ್ಡಿ ಸರಕಾರ 8 ತಿಂಗಳ ವೇತನ ಬಾಕಿ ಉಳಿಸಿಕೊಂಡಿದ್ದು, ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕುಟುಂಬ ನಿರ್ವಾಹಣೆಗೆ ತೊಂದರೆಯಾಗಿದೆ. ಅನೇಕ ಹೋರಾಟ ಮಾಡಿದ್ದರೂ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಕೂಡಲೇ ಬಾಕಿ ವೇತನ ಪಾವತಿಸದಿದ್ದರೆ ರಾಜ್ಯಮಟ್ಟದಲ್ಲಿ ಅಂಗನವಾಡಿ ನೌಕರರ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿದೆ.
ವರಲಕ್ಷ್ಮೀ 
ರಾಜ್ಯಾಧ್ಯಕ್ಷರು ಸಿಐಟಿಯು ಸಂಘಟನೆ.

ಕೆ.ನಿಂಗಜ್ಜ 

ಟಾಪ್ ನ್ಯೂಸ್

Modi (2)

ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.