ಗ್ರಾ.ಪಂ. ಚುನಾವಣೆ: ನಿಯೋಜಿತ ಸಿಬ್ಬಂದಿಗೆ ವಾಹನ ವ್ಯವಸ್ಥೆ ಇಲ್ಲದೇ ಪರದಾಟ!
Team Udayavani, Dec 26, 2020, 10:01 AM IST
ಗಂಗಾವತಿ: ಗ್ರಾಮ ಪಂಚಾಯತ್ ಚುನಾವಣೆಗಾಗಿ ಕುಷ್ಟಗಿ ತಾಲೂಕಿಗೆ ನಿಯೋಜನೆಗೊಂಡಿರುವ ಗಂಗಾವತಿ ತಾಲೂಕಿನ ಅನುದಾನಿತ ಶಾಲೆಗಳ ಶಿಕ್ಷಕರು ಶಿಕ್ಷಕಿಯರು ಕುಷ್ಟಗಿಗೆ ತೆರಳಲು ಜಿಲ್ಲಾಡಳಿತ ಬಸ್ ವ್ಯವಸ್ಥೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಚುನಾವಣೆ ಕಾರ್ಯಕ್ಕೆ ತೆರಳಲು ಸಿಬ್ಬಂದಿ ಪರದಾಡಿದ ಘಟನೆ ನಡೆದಿದೆ.
ಗ್ರಾ.ಪಂ. ಚುನಾವಣೆಗೆ ಗಂಗಾವತಿಯಿಂದ ಸುಮಾರು 70 ಜನ ಅನುದಾನಿತ ಶಾಲೆಗಳ ಶಿಕ್ಷಕ ಶಿಕ್ಷಕಿಯರನ್ನು ಕುಷ್ಟಗಿ ತಾಲೂಕಿಗೆ ನಿಯೋಜನೆ ಮಾಡಲಾಗಿದೆ. ಆದರೆ ಇವರನ್ನು ನಿಯೋಜಿತ ಸ್ಥಳಗಳಿಗೆ ಕರೆದುಕೊಂಡು ಹೋಗಿ ಬರುವ ವ್ಯವಸ್ಥೆ ಮಾಡದೇ ಇರುವ ಕುರಿತು ಸಿಬ್ಬಂದಿಗಳು ಪತ್ರಿಕಾ ಮಾಧ್ಯಮದವರ ಗಮನಕ್ಕೆ ತಂದಿದ್ದರು.
ಇದನ್ನೂ ಓದಿ:ಸುರೇಶ್ ಅಂಗಡಿ ಪುತ್ರಿ, ಜಗದೀಶ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್ ರಾಜಕೀಯಕ್ಕೆ ಎಂಟ್ರಿ!
ತಕ್ಷಣ ಎಚ್ಚೆತ್ತ ಕುಷ್ಟಗಿ ತಹಸೀಲ್ದಾರ್ ಸಿದ್ದೇಶ್ ಹಾಗೂ ಗಂಗಾವತಿ ತಹಸೀಲ್ದಾರ್ ಎಂ.ರೇಣುಕಾ ಅವರನ್ನು ಸಂಪರ್ಕಿಸಿ ಕೆಎಸ್ಆರ್ ಟಿಸಿ ಡಿಪೋ ಮ್ಯಾನೇಜರ್ ಅವರನ್ನು ಸಂಪರ್ಕಿಸಿ ಕೂಡಲೇ ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಮಧ್ಯೆ ಅನುದಾನಿತ ಶಾಲೆಗಳ ಶಿಕ್ಷಕ ಶಿಕ್ಷಕಿಯರನ್ನು ಸ್ಥಳೀಯವಾಗಿ ಚುನಾವಣೆ ಗೆ ನಿಯೋಜನೆ ಮಾಡುವಂತೆ ಒತ್ತಾಯ ಕೇಳಿಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?