ಚುನಾವಣಾ ಆಯೋಗದ ವೈಖರಿಗೆ ಎಚ್ಡಿಕೆ ಗರಂ
Team Udayavani, Apr 12, 2018, 6:35 AM IST
ಕೊಪ್ಪಳ: “ಚುನಾವಣಾ ಆಯೋಗದ ಅಧಿಕಾರಿಗಳು ಸುಮ್ಮನೆ ಎಲ್ಲೆಂದರಲ್ಲಿ ವಾಹನ ಹಿಡಿದು ತಪಾಸಣೆ ಮಾಡಿ ಜಪ್ತಿ ಮಾಡುತ್ತಿದ್ದಾರೆ. ನಾವು ಚುನಾವಣೆ ಮಾಡಬೇಕೋ? ಬೇಡವೋ? ಇದು ಯಾವ ನೀತಿ ಸಂಹಿತೆ’ ಎನ್ನುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಯೋಗದ ಕಾರ್ಯ ವೈಖರಿಯನ್ನು ಟೀಕಿಸಿದರು.
ಯಲಬುರ್ಗಾದಲ್ಲಿ ಮಾತನಾಡಿ, ಆಯೋಗದ ಅಧಿಕಾರಿಗಳು ಸಮಾವೇಶ, ಪ್ರಚಾರ ನಡೆಸಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಹನ ಚಾಲಕರಿಗೆ ವೇತನ ಕೊಟ್ಟಿದ್ದೇವೆ. ಆ ಹಣವನ್ನೂ ಜಪ್ತಿ ಮಾಡಿ, ಇದಕ್ಕೆ ದಾಖಲೆ ಕೊಡಿ ಎನ್ನುತ್ತಿದ್ದಾರೆ. ಕೂಡ್ಲಗಿಯಲ್ಲಿ ನಮ್ಮ ಪ್ರಚಾರಕ್ಕೂ ಅವಕಾಶ ಕೊಡುತ್ತಿಲ್ಲ. ಆಯೋಗದ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ನಾನು ಫೋನ್ ಮಾಡಿ ಕೇಳಿದರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಮಾತನ್ನಾಡುತ್ತಿದ್ದಾರೆ. ಅಧಿಕಾರಿಗಳಿಗೆ ನಾನೇಕೆ ಬೆದರಿಕೆ ಹಾಕಲಿ. ಅವರಿಗೆ ಮನವಿ ಮಾಡಿದ್ದೇನೆ ಎಂದರು.
ಅಧಿಕಾರಿಗಳು ಜನರ ರಕ್ತ ಹೀರಿ ಬದುಕುತ್ತಿದ್ದೀರಿ. ನೀವೇನು ಸಾಚಾನಾ? ಜಿಲ್ಲಾ ಮಂತ್ರಿ,ಶಾಸಕ ಹೇಳಿದಂತೆ ನಡೆದುಕೊಳ್ಳಬಾರದು. ಅಧಿಕಾರ ಶಾಶ್ವತವಲ್ಲ. ನೋಡೋಣ ಎಷ್ಟು ದಿನ ಅಂತ ಇದೇ ರೀತಿ ವರ್ತಿಸುತ್ತೀರಿ ಎಂದು ಗುಡುಗಿದರು. ಹಾಸನ ಡಿಸಿ ರೋಹಿಣಿ ಸಿಂಧೂರಿ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ ಕಾನೂನಿನ ರಕ್ಷಣೆಯಿದೆ. ಯಾವುದೇ ಪಕ್ಷದ ರಕ್ಷಣೆಯಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ