Kushtagi: ವಿದ್ಯುತ್ ಶಾರ್ಟ್ ಸರ್ಕ್ಯೂಟ್; 1 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಹಾನಿ
Team Udayavani, Jan 25, 2024, 1:02 PM IST
ಕುಷ್ಟಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನಿವೃತ್ತ ತಹಶೀಲ್ದಾರ ಸಿ.ಎಂ.ಹಿರೇಮಠ ಅವರ ಮನೆಯಲ್ಲಿ ಜ.25ರ ಗುರುವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಹಾನಿ ಸಂಭವಿಸಿದೆ.
ಪಟ್ಟಣದ ಬುತ್ತಿ ಬಸವೇಶ್ವರ ನಗರದ ಪೊಲೀಸ್ ಠಾಣೆಯ ಹಿಂಭಾಗದ ಮಹಾಂತ ನಿವಾಸದಲ್ಲಿ ಸಿ.ಎಂ. ಹಿರೇಮಠ ಅವರು ಸ್ನಾನ ಮಾಡುವ ಸಂದರ್ಭ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಸಿಎಂ ಹಿರೇಮಠ ಕುಟುಂಬದವರು ಹೊರಗೆ ದೌಡಾಯಿಸಿದ್ದಾರೆ.
ಮನೆಯ ಮೇಲಂತಸ್ತಿನಲ್ಲಿ ಎಂಟು ಬಾಡಿಗೆ ಮನೆಯವರು ದಟ್ಟ ಹೊಗೆ, ಗದ್ದಲಕ್ಕೆ ಹೆದರಿ ಅವರೆಲ್ಲರೂ ಕೆಳಗೆ ದೌಡಾಯಿಸಿದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಕಟ್ಟಡದೊಳಗೆ ಬೆಂಕಿ ಧಗ ಧಗಿಸಲಾರಂಭಿಸಿದ್ದರಿಂದ ಅಲ್ಲಿ ಸಂಗ್ರಹಿಸಿಟ್ಟಿದ್ದ ಡ್ರಿಪ್ ಪೈಪ್ ಬಂಡಲ್ ಗಳಿಗೆ ಬೆಂಕಿ ವ್ಯಾಪಿಸಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಲು ಕಾರಣವಾಯಿತು.
ನೋಡು ನೋಡುತ್ತಿದ್ದಂತೆ ಇಡೀ ಮನೆಯೊಳಗಿನಿಂದ ಹೊಗೆ ದಟ್ಟವಾಗಿ ಆವರಿಸಿದೆ. ಸ್ಥಳೀಯರು ಬಕೆಟ್, ಕೊಡಗಳಿಂದ ಬೆಂಕಿ ನಂದಿಸುವ ಹರಸಹಾಸಕ್ಕಿಳಿದರು. ದಟ್ಟ ಹೊಗೆಯಿಂದ ನಿಯಂತ್ರಣ ಸಾದ್ಯವಾಗಲಿಲ್ಲ, ನಂತರ ಕುಷ್ಟಗಿ ಅಗ್ನಿ ಶಾಮಕ ವಾಹನದ ಮೂಲಕ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದರಿಂದ ಬೆಂಕಿ ನಿಯಂತ್ರಿಸಲು ಸಾಧ್ಯವಾಯಿತು.
ಡ್ರಿಪ್ ಬಂಡಲ್, ಟಿವಿ, ಫ್ರಿಡ್ಜ್, ಪೀಠೋಪಕರಣ ಸಾಮಾಗ್ರಿ, ದಾಖಲೆಗಳು ಸುಟ್ಟು ಕರಕಲಾಗಿದ್ದು, ಸೇರಿದಂತೆ 1 ಕೋಟಿಗೂ ಅಧಿಕ ಹಾನಿ ಅಂದಾಜಿಸಲಾಗಿದೆ. ಅಲ್ಮೆರಾದಲ್ಲಿದ್ದ ನಗದು, ಬೆಳ್ಳಿ ಬಂಗಾರಕ್ಕೆ ಏನೂ ಆಗಿಲ್ಲ.
ಘಟನಾ ಸ್ಥಳಕ್ಕೆ ಸಿಪಿಐ ಯಶವಂತ ಬಿಸನಳ್ಳಿ, ಕ್ರೈಂ ಪಿಎಸೈ ಮಾನಪ್ಪ ವಾಲ್ಮೀಕಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ