12 ಗ್ರಾಮಗಳಲ್ಲಿ ವಿದ್ಯುತ್‌ ಅದಾಲತ್‌

ಕೊಪ್ಪಳ ಡಿವಿಜನ್‌-74, ಗಂಗಾವತಿ-76 ಅರ್ಜಿ ; 22 ಅರ್ಜಿ ಸ್ಥಳದಲ್ಲೇ ಇತ್ಯರ್ಥ, 128 ಅರ್ಜಿ ಬಾಕಿ

Team Udayavani, Jun 20, 2022, 4:57 PM IST

16

ಕೊಪ್ಪಳ: ಜಿಲ್ಲಾದ್ಯಂತ ಮೊಟ್ಟ ಮೊದಲ ಬಾರಿಗೆ ಜೆಸ್ಕಾಂ ಎರಡು ಡಿವಿಜನ್‌ಗಳಿಂದ 12 ಗ್ರಾಮಗಳಲ್ಲಿ ವಿದ್ಯುತ್‌ ಅದಾಲತ್‌ ಕಾರ್ಯಕ್ರಮ ನಡೆಯಿತು. ರೈತರು ಟ್ರಾನ್ಸ್‌ಫಾರ್ಮರ್‌, ವಿದ್ಯುತ್‌ ತಂತಿ ಬದಲಾವಣೆ ಸೇರಿದಂತೆ ವಿವಿಧ ಅರ್ಜಿಗಳನ್ನು ಸಲ್ಲಿಸಿ ತಮ್ಮ ಅಹವಾಲು ಅಧಿಕಾರಿಗಳ ಗಮನಕ್ಕೆ ತಂದರು. ಸ್ಥಳದಲ್ಲೇ 22 ಅರ್ಜಿ ಇತ್ಯರ್ಥ ಮಾಡಲಾಯಿತು.

ರಾಜ್ಯ ಸರ್ಕಾರವು ಮೊಟ್ಟ ಮೊದಲ ಬಾರಿಗೆ ಇಂಧನ ಇಲಾಖೆಯಿಂದ ಮೊದಲ ಬಾರಿಗೆ ವಿದ್ಯುತ್‌ ಅದಾಲತ್‌ ಕಾರ್ಯಕ್ರಮವನ್ನು ರೂಪಿಸಿ ಶನಿವಾರ ಜಾರಿ ಮಾಡಲಾಯಿತು.

ಇಲ್ಲಿ ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳ ಸಮಸ್ಯೆ, ವಿದ್ಯುತ್‌ ತಂತಿಗಳ ಬದಲಾವಣೆ, ಕಂಬಗಳ ದುರಸ್ತಿ ಸೇರಿದಂತೆ ಗ್ರಾಮೀಣ, ನಗರದಲ್ಲಿನ ವಿದ್ಯುತ್‌ ಲೈನ್‌ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ದೂರುಗಳಿದ್ದರೂ ಅದಾಲತ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಇತ್ಯರ್ಥಕ್ಕೆ ಸರ್ಕಾರ ಮುಂದಾಗಿದೆ.

ಈ ಮೊದಲು ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ರೈತರು ಸೇರಿದಂತೆ ಗ್ರಾಹಕರು ತುಂಬಾ ಸಮಸ್ಯೆ ಎದುರಿಸುವಂತಾಗುತ್ತಿತ್ತು. ಅರ್ಜಿ ಕೊಟ್ಟು ಹತ್ತಾರು ಬಾರಿ ಇಲಾಖೆಗೆ ಸುತ್ತಿದರೂ ಸಹ ಸಮಸ್ಯೆ ಬಗೆಹರಿಯುತ್ತಿರಲಿಲ್ಲ, ಇದರಿಂದ ಬೇಸತ್ತಿದ್ದರು. ಇದನ್ನು ವೇಗವಾಗಿ ಇತ್ಯರ್ಥ ಮಾಡಲು ಹೊಸ ಆಯಾಮ ಕೊಡಲು ಎಲ್ಲ ಇಲಾಖೆಗಳಲ್ಲಿ ಅದಾಲತ್‌ ಮಾಡಿದಂತೆ ಇಂಧನ ಇಲಾಖೆಯಲ್ಲಿ ವಿದ್ಯುತ್‌ ಅದಾಲತ್‌ ಆರಂಭಿಸಿದ್ದು, ಶನಿವಾರ ನಡೆದ ಮೊದಲ ಅದಾಲತ್‌ನಲ್ಲಿ ಕೊಪ್ಪಳ ಡಿವಿಜನ್‌ನ ಆರು ಉಪ ವಿಭಾಗಗಳಲ್ಲಿನ ಹಿರೇಬಗನಾಳ, ಗಾಣದಾಳ, ಆಚಾರ್‌ ನರಸಾಪುರ, ಹಿರೇಸುಳಿಕೇರಿ, ಗಿಣಗೇರಿ, ಗುನ್ನಾಳ ಗ್ರಾಮಗಳಲ್ಲಿ ಅದಾಲತ್‌ ನಡೆದವು.

ಇಲ್ಲಿ 74 ಅರ್ಜಿಗಳು ಸಲ್ಲಿಕೆಯಾದರೆ 11 ಅರ್ಜಿ ಇತ್ಯರ್ಥವಾಗಿ 63 ಅರ್ಜಿಗಳು ಬಾಕಿ ಉಳಿದವು. ಇನ್ನು ಗಂಗಾವತಿ ಡಿವಿಜನ್‌ನಲ್ಲಿ ಉಪ ವಿಭಾಗಕ್ಕೆ ಎರಡು ಗ್ರಾಮಗಳಂತೆ ಹೇಮಗುಡ್ಡ, ರಾಮದುರ್ಗ, ಹಿರೇಖೇಡ, ಸೋಮನಾಳ, ವಕ್ಕಂದುರ್ಗ, ಕ್ಯಾದಿಗುಪ್ಪಾ ಗ್ರಾಮದಲ್ಲಿ ಅದಾಲತ್‌ ನಡೆದಿದ್ದು, 76 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 11 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡಲಾಗಿ, 65 ಅರ್ಜಿಗಳು ಬಾಕಿ ಉಳಿದವು. ಒಟ್ಟಾರೆ ಜಿಲ್ಲೆಯಲ್ಲಿನ ಎರಡೂ ಡಿವಿಜನ್‌ಗಳಲ್ಲಿನ 12 ಗ್ರಾಮಗಳಲ್ಲಿ ನಡೆದ ವಿದ್ಯುತ್‌ ಅದಾಲತ್‌ನಲ್ಲಿ 150 ಅರ್ಜಿಗಳು ಸಲ್ಲಿಕೆಯಾಗಿದ್ದು, 22 ಅರ್ಜಿಗಳು ಇತ್ಯರ್ಥವಾಗಿ 128 ಅರ್ಜಿ ಬಾಕಿ ಉಳಿದು ಅವುಗಳನ್ನು ಮುಂದಿನ ಹಂತದಲ್ಲಿ ಅಧಿಕಾರಿಗಳು ಇತ್ಯರ್ಥ ಪಡಿಸುವ ಭರವಸೆ ನೀಡಿದ್ದಾರೆ.

ಜಿಲ್ಲೆಯ ಎರಡು ಡಿವಿಜನ್‌ ಗಳ 12 ಗ್ರಾಮಗಳಲ್ಲಿ ವಿದ್ಯುತ್‌ ಅದಾಲತ್‌ ಕಾರ್ಯಕ್ರಮ ನಡೆಸಲಾಯಿತು. ಎರಡೂ ವಿಭಾಗದಿಂದ 150 ಅರ್ಜಿಗಳು ಸಲ್ಲಿಕೆಯಾಗಿದ್ದು, 22 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡಿದ್ದು, ಉಳಿದ ಅರ್ಜಿಗಳನ್ನು ಮುಂದಿನ ಹಂತದ ಪಕ್ರಿಯೆ ಯಲ್ಲಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜೇಶ, ಜೆಸ್ಕಾಂ ಇಇ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.