ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಿ;ಪತ್ರಕರ್ತ ಶರಣಪ್ಪ ಬಾಚಲಾಪುರ

ಮಕ್ಕಳಿಗೆ ಕೂಡಾ ಮದುವೆ ಪ್ರೋತ್ಸಾಹಧನ ಬಿಟ್ಟರೆ ಯಾವುದೇ ಸೌಲಭ್ಯಗಳು ಇಲ್ಲ

Team Udayavani, Mar 18, 2022, 6:29 PM IST

ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಿ;ಪತ್ರಕರ್ತ ಶರಣಪ್ಪ ಬಾಚಲಾಪುರ

ಕೊಪ್ಪಳ: ಸಮಾಜದಲ್ಲಿ ಬೇರೂರಿರುವ ಅನಿಷ್ಟ ದೇವದಾಸಿ ಪದ್ಧತಿ ನಿರ್ಮೂಲನೆಗೆ ಮಾಧ್ಯಮ ಸದಾ ಸಹಕಾರ ನೀಡುತ್ತಾ ಬಂದಿದ್ದು, ಈ ವರ್ತುಲದಲ್ಲಿ ಇರುವ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕಿದೆ ಎಂದು ಹಿರಿಯ ಪತ್ರಕರ್ತ ಶರಣಪ್ಪ ಬಾಚಲಾಪುರ ಮನವಿ ಮಾಡಿದರು.

ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಸ್ನೇಹ ಸಂಸ್ಥೆ ಮಂಗಳವಾರ ಹಮ್ಮಿಕೊಂಡಿದ್ದ “ವಿಮುಕ್ತ ದೇವದಾಸಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆ’ ಕುರಿತ ಮಾಧ್ಯಮ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವದಾಸಿ ಮಹಿಳೆಯರು ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಮತ್ತೂಮ್ಮೆ ಸರ್ಕಾರ ಸಮೀಕ್ಷೆ ನಡೆಸಿ, ಸೌಲಭ್ಯಗಳಿಂದ ವಂಚಿತರಾದ ದೇವದಾಸಿ ಮಹಿಳೆಯರನ್ನು ಗುರುತಿಸಿ ಸಹಾಯ ಮಾಡಬೇಕಾದ ಜವಾಬ್ದಾರಿ ಇಲಾಖೆ ಮೇಲೆ ಇದೆ ಎಂದರು. ಕಳೆದ 20 ವರ್ಷಗಳಿಂದ ಈ ಸಮುದಾಯವನ್ನು ಹತ್ತಿರದಿಂದ ನೋಡುತ್ತಾ ಬಂದಿರುವ ನಾವು ಸಹಾಯ, ಅನುಕಂಪ, ಆಮಿಷಕ್ಕೆ ಒಳಗಾಗಿ ಮೋಸ ಹೋದವರೆ ಹೆಚ್ಚು. ಈ ಕುರಿತು ಸಮಾಜದಲ್ಲಿ ಹೆಚ್ಚಿನ ಕಾನೂನು ರಕ್ಷಣೆ ಇದ್ದರೂ ಭಯವಿಲ್ಲವಾಗಿದೆ. ಅಲ್ಲೊಂದು, ಇಲ್ಲೊಂದು ಪ್ರಕರಣ ನಡೆದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದರು.

ಮಹಿಳಾ ಅಭಿವೃದ್ಧಿ ನಿಗಮದ ದೇವದಾಸಿ ಪುನರ್ವಸತಿ ಯೋಜನೆಯ ಅನುಷ್ಠಾನ ಅಧಿಕಾರಿ, ದಾದೇಸಾಬ್‌ ಹಿರೇಮನಿ ಮಾತನಾಡಿ, 1991 ಮತ್ತು 98ರಲ್ಲಿ ಎರಡು ಬಾರಿ ಸಮೀಕ್ಷೆ ನಡೆಸಿ ಜಿಲ್ಲೆಯಲ್ಲಿ 6 ಸಾವಿರ ದೇವದಾಸಿಯರನ್ನು ಗುರುತಿಸಿ ಅವರು ವಿಮುಕ್ತ ದೇವದಾಸಿ ಎಂದು ಮಾಸಾಶನ, ಆಶ್ರಯ ಮನೆ, ಸಾಲ ವಿತರಿಸಲಾಗಿದೆ. ಆದರೆ ಇನ್ನೂ ಕೆಲವು ಮಹಿಳೆಯರು ಕೆಲವು ತಾಂತ್ರಿಕ ಮತ್ತು ಭಾವನಾತ್ಮಕ ಕಾರಣದಿಂದ ಸೌಲಭ್ಯ ಪಡೆಯದೇ ವಂಚಿತರಾಗಿದ್ದಾರೆ
ಎಂದು ವಿಷಾದಿಸಿದರು.

ಈಗ ಸರ್ಕಾರದ ಮಟ್ಟದಲ್ಲಿ ಮತ್ತೆ ಸಮೀಕ್ಷೆ ಮಾಡಬೇಕು. ಅಲ್ಲಿಯವರೆಗೆ ಇಲಾಖೆ ಯಾವುದೇ ಸೌಲಭ್ಯ ಕೊಡದೆ ಅಸಹಾಯಕವಾಗಿದೆ. ವಿಮುಕ್ತ ದೇವದಾಸಿ ಮಕ್ಕಳಿಗೆ ಕೂಡಾ ಮದುವೆ ಪ್ರೋತ್ಸಾಹಧನ ಬಿಟ್ಟರೆ ಯಾವುದೇ ಸೌಲಭ್ಯಗಳು ಇಲ್ಲ ಎಂದರು. ಕಿಶೋರಿ ಸಂಘದ ಸಂಘದ ಹುಲಿಗೆಮ್ಮ ಮಾತನಾಡಿದರು. ಸ್ನೇಹ ಸಂಸ್ಥೆಯ ಶೋಭಾ ಸಂಸ್ಥೆಯ ಕಾರ್ಯ ಚಟುವಟಿಕೆ ವಿವರಿಸಿದರು.

ದೇವದಾಸಿ ವಿಮೋಚನಾ ವೇದಿಕೆ ಶಶಿಕಲಾ ಮಾತನಾಡಿ, ವಿಮುಕ್ತ ದೇವದಾಸಿ ಮಹಿಳೆಯರಿಗೆ 5 ಸಾವಿರ ಮಾಸಾಶನ ನೀಡಬೇಕು. ಹಿರೇಸಿಂದೋಗಿ ಗ್ರಾಮದಲ್ಲಿನ 22 ವಿಮುಕ್ತ ದೇವದಾಸಿ ಕುಟುಂಬಗಳಿಗೆ ಸ್ವಂತ ಮನೆಗಳಿಲ್ಲ ಎಂದು ಸಮಸ್ಯೆ ಹೇಳಿಕೊಂಡರು. ಸ್ನೇಹ ಸಂಸ್ಥೆಯ ಗಾಯತ್ರಿ, ಪತ್ರಕರ್ತರಾದ ಸಿದ್ದನಗೌಡ ಪಾಟೀಲ್‌, ರವೀಂದ್ರ ವಿ.ಕೆ. ಅನಿಲ, ಗಂಗಾಧರ್‌, ಮೌಲಾಹುಸೇನ್‌, ಶಿವರಾಜ ಮುಂತಾದವರು ಇದ್ದರು.

ಶಾಲೆ, ಕಾಲೇಜುಗಳಲ್ಲಿ ದೇವದಾಸಿ ಮಕ್ಕಳಿಗೆ ಕಿರಿಕಿರಿ ದೇವದಾಸಿ ಪದ್ಧತಿ ಮುಂದುವರೆಸುವ ಇರಾದೇ ನಮಗೂ ಇಲ್ಲ. ಹೇಳಿಕೊಳ್ಳಲು ಮುಜುಗರ ಆಗುತ್ತದೆ. ಅನಿಷ್ಟ ಪದ್ಧತಿಗೆ ನಮ್ಮ ಮಕ್ಕಳನ್ನು ದೂಡುವುದಿಲ್ಲ. ಸಮಾಜದಲ್ಲಿ ಜಾಗೃತಿ ಮೂಡಿಸಲಾಗುತ್ತದೆ.
ಶಶಿಕಲಾ, ವಿಮುಕ್ತ ದೇವದಾಸಿ

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.