ತುಂಗಭದ್ರೆ ಒಡಲು ಖಾಲಿ ಖಾಲಿ

•ಮಳೆಯಬ್ಬರಕ್ಕೆ ರಾಜ್ಯದ ಹಲವು ಡ್ಯಾಂ ಭರ್ತಿ•ಅರ್ಧ ಕೂಡ ಭರ್ತಿಯಾಗಿಲ್ಲ ತುಂಗಭದ್ರಾ ಡ್ಯಾಂ

Team Udayavani, Aug 7, 2019, 1:11 PM IST

kopala-tdy-1

ಕೊಪ್ಪಳ: ಮಹಾರಾಷ್ಟ್ರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ವರುಣನ ಅಬ್ಬರಕ್ಕೆ ಹಲವು ಡ್ಯಾಂಗಳು ಭರ್ತಿಯಾಗಿವೆ. ಆದರೆ ತುಂಗಭದ್ರಾ ಜಲಾಶಯಕ್ಕೆ ಇನ್ನೂ ನಿರೀಕ್ಷಿತ ಪ್ರಮಾಣದ ನೀರು ಹರಿದು ಬರುತ್ತಿಲ್ಲ. ಮಂಗಳವಾರ 36 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಭತ್ತದ ನಾಡಿನ ರೈತರು ಡ್ಯಾಂ ಭರ್ತಿಯಾಗಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಹರಿದು ಬಂದಿದೆ.

ಕಳೆದ ವರ್ಷ ಮಲೆನಾಡು, ಕರಾವಳಿ ಪ್ರದೇಶ ಸೇರಿದಂತೆ ಶಿವಮೊಗ್ಗ ಭಾಗದಲ್ಲಿ ಉತ್ತಮ ಮಳೆ ಸುರಿದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಅತ್ಯಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿತ್ತು. ಜುಲೈ ಅಂತ್ಯಕ್ಕೆ ಜಲಾಶಯ ಭರ್ತಿಯಾಗಿ ರೈತರಿಗೆ ಖುಷಿ ತಂದಿತ್ತು. ಆದರೆ ಕಳೆದ ಬಾರಿ ಅಧಿಕಾರಿಗಳ ಅವೈಜ್ಞಾನಿಕ ನೀರು ನಿರ್ವಹಣೆಯ ನೀತಿಯಿಂದ ಎರಡನೇ ಬೆಳೆಗೆ ಪರಿಪೂರ್ಣ ನೀರು ಸಿಗಲೇ ಇಲ್ಲದಂತ ಸ್ಥಿತಿ ಎದುರಾಯಿತು.

ರಾಜ್ಯದೆಲ್ಲೆಡೆ ಮಳೆ ಅಬ್ಬರ: ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಹಲವು ಡ್ಯಾಂಗಳು ಭರ್ತಿಯಾಗಿವೆ. ಲಕ್ಷಾಂತರ ಕ್ಯೂಸೆಕ್‌ನಷ್ಟು ನೀರನ್ನು ಡ್ಯಾಂನಿಂದ ಹರಿ ಬಿಡಲಾಗಿದೆ. ಆದರೆ ಜುಲೈ ಕಳೆದರೂ ಜಲಾಶಯದ ಒಡಲಲ್ಲಿ ಕೇವಲ 36 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಮಂಗಳವಾರ ಒಳ ಹರಿವಿನ ಪ್ರಮಾಣ 23,051 ಕ್ಯೂಸೆಕ್‌ನಷ್ಟಿದ್ದು ನಿರೀಕ್ಷೆಯನ್ನಿಡಲಾಗಿದೆ.

ರೈತರಲ್ಲಿ ನಿರೀಕ್ಷೆ: ಲಕ್ಷಾಂತರ ರೈತರು ಡ್ಯಾಂ ನೀರನ್ನೇ ನೆಚ್ಚಿ ಜೀವನ ಸಾಗಿಸುತ್ತಿದ್ದಾರೆ. ಸದ್ಯ 36 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ಭತ್ತ ನಾಟಿಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಕಾಲುವೆಗೆ ನೀರು ಹರಿಸುವುದನ್ನೇ ಕಾಯುತ್ತಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ಡ್ಯಾಂ ಭರ್ತಿಯಾಗಿ ನಮ್ಮ ಬದುಕು ಸಾಗಲಿ ಎಂದೆನ್ನುತ್ತಿದ್ದಾರೆ. ಕಳೆದ ವರ್ಷ ಡ್ಯಾಂ ಭರ್ತಿಯಾಗಿದ್ದರೂ ಎರಡನೇ ಬೆಳೆಗೆ ನೀರು ಸಂಪೂರ್ಣ ಲಭಿಸಲಿಲ್ಲ. ನೀರಾವರಿ ಇಲಾಖೆಯ ಅಧಿಕಾರಿಗಳ ಅವೈಜ್ಞಾನಿಕ ನಿರ್ವಹಣೆಯಿಂದ ಹೀಗಾಗಿದೆ. ಈ ವರ್ಷವಾದರೂ ಎಚ್ಚರಿಕೆಯಿಂದ ನೀರು ನಿರ್ವಹಣೆ ಮಾಡಲಿ ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ನೀರು ಹರಿಸಲು ಸೂಚನೆ: ಚಡ್ಯಾಂನಲ್ಲಿ 36 ಅಡಿ ನೀರು ಸಂಗ್ರಹವಾಗುತ್ತಿದ್ದಂತೆ ಈ ಭಾಗದ ಬಿಜೆಪಿ ಶಾಸಕರಾದ ಪರಣ್ಣ ಮುನವಳ್ಳಿ, ಶಾಸಕ ಬಸವರಾಜ ದಢೇಸುಗೂರು ಸೇರಿ ಇತರೆ ಶಾಸಕರು ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿಎಂ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಕಾಲುವೆಗಳಿಗೆ ನೀರು ಹರಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಕಾಲುವೆಗೆ ಹಂತ ಹಂತವಾಗಿ ನೀರು ಹರಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಏನೇ ಆಗಲಿ, ಎಲ್ಲ ಡ್ಯಾಂಗಳಂತೆ ತುಂಗಭದ್ರಾ ಜಲಾಶಯಕ್ಕೂ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿ, ಡ್ಯಾಂ ಭರ್ತಿಯಾಗಲಿ. ಅನ್ನದಾತನ ಬಾಳು ಬೆಳಕಾಗಲಿ, ನೀರಾವರಿ ಅಧಿಕಾರಿಗಳು ಸರಿಯಾಗಿ ನೀರು ನಿರ್ವಹಣೆ ಮಾಡಲಿ ಎನ್ನುವ ಮಾತು ಅಚ್ಚುಕಟ್ಟು ಪ್ರದೇಶದ ರೈತಾಪಿ ವಲಯದಿಂದ ಕೇಳಿ ಬಂದಿದೆ.

ಐಸಿಸಿ ಇಲ್ಲದ ಕಾರಣ ಕಾಲುವೆಗೆ ನೀರು ಹರಿಸುವ ಕುರಿತಂತೆ ಕಾರ್ಯದರ್ಶಿಗಳಿಂದ ಅನುಮತಿ ಪಡೆಯುತ್ತಿದ್ದೇವೆ. ನಾನು ಬೆಂಗಳೂರಿನಲ್ಲಿಯೇ ಇದ್ದು ಅನುಮತಿಗಾಗಿ ಕಾಯುತ್ತಿದ್ದೇನೆ. ಇನ್ನೂ ಕಾಲುವೆಗೆ ನೀರು ಹರಿಸಿಲ್ಲ. ಸದ್ಯ ಡ್ಯಾಂನಲ್ಲಿ 36 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.•ಮಂಜಪ್ಪ, ಸಿಇ ತುಂಗಭದ್ರಾ ಡ್ಯಾಂ

 

•ದತ್ತು ಕಮ್ಮಾರ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.