ಖಾಲಿ ನಿವೇಶನ; ನಗರಸಭೆ ಹೊಸ ಪ್ಲ್ಯಾನ್


Team Udayavani, Oct 29, 2019, 1:07 PM IST

kopala-tdy-2

ಕೊಪ್ಪಳ: ನಗರ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರಲು ನಗರಸಭೆಯು ಹೊಸದೊಂದು ಪ್ಲ್ಯಾನ್ ಮಾಡಿದೆ. 30 ದಿನದಲ್ಲಿ ಖಾಲಿ ನಿವೇಶನ ಸ್ವಚ್ಛ ಮಾಡದೇ ಇದ್ದರೆ ಮಾಲೀಕರಿಗೆ ದಂಡದ ಜೊತೆಗೆ ಬಡ್ಡಿ, ಚಕ್ರಬಡ್ಡಿ ಹಾಕಿ ವಸೂಲಿ ಮಾಡುವ ಎಚ್ಚರಿಕೆ ನೀಡಿದೆ.

ಹೌದು.. ನಗರ ವ್ಯಾಪ್ತಿಯಲ್ಲಿ ದಶಕಗಳಿಂದಲೂ ನೂರಾರು ಲೇಔಟ್‌ ನಿರ್ಮಾಣವಾಗಿವೆ. ಆದರೆ ಉಳ್ಳವರು ನಿವೇಶನಗಳನ್ನು ಖರೀದಿ ಮಾಡಿ ಮನೆಗಳನ್ನು ನಿರ್ಮಿಸದೇ ಹಾಗೆ ಖಾಲಿ ಬಿಟ್ಟಿದ್ದಾರೆ. ಇದರಿಂದ ನಿವೇಶನದಲ್ಲಿ ಮಳೆ, ಚರಂಡಿ ನೀರು ನಿಂತು, ಜಾಲಿಗಿಡ, ಮುಳ್ಳಿನ ಪೊದೆಗಳು ಬೆಳೆದು ಸುತ್ತಲಿನ ಪರಿಸರ ಹಾಳು ಮಾಡಿ, ಸ್ಥಳೀಯರಿಗೆ ಕಿರಿಕಿರಿಯಾಗುತ್ತಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡಿವೆ. ಮಳೆಯ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆ ಹೇಳುತ್ತಿದ್ದರೂ ಖಾಲಿ ನಿವೇಶನಗಳಲ್ಲಿ ಸೊಳ್ಳೆಗಳು ಹೆಚ್ಚುತ್ತಿವೆ.

ಇದರಿಂದ ವೃದ್ಧರು, ಗರ್ಭಿಣಿಯರು ಮಕ್ಕಳಿಗೆ ನಿತ್ಯವೂ ಒಂದಿಲ್ಲೊಂದು ಜ್ವರ ಬಾಧೆ ಕಾಣಿಸಿಕೊಂಡು ಆಸ್ಪತ್ರೆ ಸೇರುತ್ತಿದ್ದಾರೆ. ಈ ಕುರಿತು ಹಲವು ವಾರ್ಡ್‌ ನಿವಾಸಿಗಳು ನಗರಸಭೆಗೆ ಮನವಿ ಮಾಡಿ ಚರಂಡಿ, ಖಾಲಿ ನಿವೇಶನಗಳ ಸ್ವತ್ಛತೆಗೆ ದಿಟ್ಟ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಒತ್ತಾಯಿಸಿವೆ. ಈ ಹಿಂದೆ ನಗರಸಭೆ ಖಾಲಿ ನಿವೇಶನಗಳ ಮಾಲೀಕರಿಗೆ ಹಲವು ಬಾರಿ ನೋಟಿಸ್‌ ಕೊಟ್ಟರೂ ಅವರು ಕ್ಯಾರೇ ಎಂದಿಲ್ಲ. ಇದರಿಂದ ಬೇಸತ್ತ ನಗರಸಭೆ ಪರ್ಯಾಯ ಮಾರ್ಗಕ್ಕೆ ಮುಂದಾಗಿದೆ.

ಸ್ವಚ್ಛಗೊಳಿಸದಿದ್ದರೆ ಬಡ್ಡಿ+ಚಕ್ರಬಡ್ಡಿ: ನಗರ ವ್ಯಾಪ್ತಿಯಲ್ಲಿ ಮನೆಗಳು ಇರುವ ಸುತ್ತಮುತ್ತ ಖಾಲಿ ನಿವೇಶನಗಳನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳದೇ ಇರುವ ನಿವೇಶನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಗರಸಭೆ ದಂಡ ವಸೂಲಿ ಜೊತೆಗೆ ಬಡ್ಡಿ+ಚಕ್ರ ಬಡ್ಡಿ ದಾಳ ಉರುಳಿಸಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 248ರ ಪ್ರಕಾರ ಖಾಲಿ ನಿವೇಶನಗಳನ್ನು ಗುರುತಿಸಿ ನಗರಸಭೆಯಿಂದಲೇ ಅವುಗಳನ್ನು ಸ್ವಚ್ಛಗೊಳಿಸಿ, ಸ್ವತ್ಛತಾ ಕಾರ್ಯಕ್ಕೆ ತಗುಲುವ ವೆಚ್ಚವನ್ನು ಲೆಕ್ಕ ಮಾಡಿ ಅದನ್ನು ನಿವೇಶನಗಳ ಮಾಲೀಕರಿಂದ ವಸೂಲಿ ಮಾಡುವ ಜೊತೆಗೆ ಆ ಹಣ ನೀಡದಿದ್ದರೆ ಲೆಕ್ಕಾಚಾರದ ಪ್ರಕಾರ ವರ್ಷಕ್ಕೆ ಇಂತಿಷ್ಟು ಬಡ್ಡಿ ಎಂದು ನಿಗದಿ  ಮಾಡುವುದು. ವೆಚ್ಚ ಕಟ್ಟದಿದ್ದರೆ ಬಡ್ಡಿ ಹಾಗೂ ಚಕ್ರ ಬಡ್ಡಿ ಹಾಕಿ ವಸೂಲಿ ಮಾಡುವುದಾಗಿ ಎಚ್ಚರಿಕೆ ನೀಡಿದೆ.

14230 ನಿವೇಶನ: ನಗರ ವ್ಯಾಪ್ತಿಯಲ್ಲಿ 14230 ಖಾಲಿ ನಿವೇಶನಗಳಿವೆ. ಇದರಲ್ಲಿ ಎಲ್ಲ ಲೇಔಟ್‌ ಗಳ ನಿವೇಶನವೂ ಒಳಗೊಂಡಿವೆ. ಆದರೆ ಕನಿಷ್ಟ 6-7 ಸಾವಿರ ಖಾಲಿ ನಿವೇಶನಗಳಲ್ಲಿ ಬೆಳೆದು ನಿಂತ ಮುಳ್ಳಿನ ಪೊದೆ, ತ್ಯಾಜ್ಯ, ಚರಂಡಿ ನೀರನ್ನು ತೆರವು ಮಾಡಿ ಸಾಂಕ್ರಾಮಿಕರೋಗ ನಿಯಂತ್ರಣ ಮಾಡಲೇಬೇಕಿದೆ ಎಂದು ಆರೋಗ್ಯ ಇಲಾಖೆ ನಿರಂತರವಾಗಿ ಹೇಳುತ್ತಿದೆ. ಆದರೆ ನಿವೇಶನಗಳ ಮಾಲೀಕರು ಇದ್ಯಾವುದನ್ನು ಕಿವಿಗೆ ಹಾಕಿಕೊಂಡಿಲ್ಲ. ಹಾಗಾಗಿ ನಗರಸಭೆ ಬಡ್ಡಿ, ಚಕ್ರಬಡ್ಡಿಯ ದಾಳಕ್ಕೆ ಮುಂದಾಗಿದೆ.

ನಗರಸಭೆ 30 ದಿನದೊಳಗೆ ಖಾಲಿ ನಿವೇಶನ ಸ್ವಚ್ಛತೆಗೆ ಮಾಲಿಕರಿಗೆ ನೋಟಿಸ್  ನೀಡುತ್ತದೆ. ಅಷ್ಟರೊಳಗೆ ಸ್ವಚ್ಛಗೊಳಿಸದಿದ್ದರೆ ಮತ್ತೆ 15 ದಿನ ಸಮಯ ನೀಡುತ್ತದೆ. ಅದಕ್ಕೂ ಸ್ಪಂದಿಸದಿದ್ದರೆ ನಗರಸಭೆಯೇ ನಿವೇಶನ ಸ್ವಚ್ಛ ಮಾಡುವ ವೆಚ್ಚದ ಯೋಜನೆ ರೂಪಿಸಿ ಸ್ವತ್ಛ ಮಾಡಿ ನೋಟಿಸ್‌ ಹೊರಡಿಸುತ್ತದೆ. ಸ್ವಚ್ಛ ಮಾಡಿದ ಹಣವನ್ನು ನಿವೇಶನ ಮಾಲೀಕರಿಂದ ಬಡ್ಡಿ, ಚಕ್ರಬಡ್ಡಿ ಸಮೇತ ವಸೂಲಿಗೆ ಯೋಜನೆ ಹಾಕಿದೆ. ಜೊತೆಗೆ ಜೊತೆಗೆ ನಿವೇಶನಗಳಲ್ಲಿ ಭೋಜಾ ಕೂಡಿಸುವ ಪ್ರಯತ್ನಕ್ಕೂ ನಗರಸಭೆ ಮುಂದಾಗಿದೆ.

ಒಟ್ಟಿನಲ್ಲಿ ನಗರವನ್ನು ಸುಂದರವನ್ನಾಗಿಡಲು ಕೊಪ್ಪಳ ನಗರಸಭೆಯು ನೂರೆಂಟು ಪ್ರಯತ್ನ ಮಾಡುತ್ತಿದೆ. ಆದರೆ ಇದಲ್ಲಿ ಏಷ್ಟರ ಮಟ್ಟಿಗೆ ಯಶಸ್ವಿ ಕಾಣಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ನಿವೇಶನ ಮಾಲೀಕರು ಇದಕ್ಕೆ ಸ್ಪಂದಿಸುತ್ತಾ ಎನ್ನುವುದನ್ನು ಕಾಯದು ನೋಡಬೇಕಿದೆ.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.