ಮುಂದೆ ಶುದ್ಧ ಗಾಳಿಗೂ ಹಣ ನೀಡುವ ಸ್ಥಿತಿ: ಮಂಜುನಾಥ
ಪ್ರತಿಯೊಬ್ಬರು ಮನೆಗಳ ಮುಂದೆ ಮರ ಬೆಳೆಸಬೇಕು ; ಪರಿಸರ ನಾಶದಿಂದ ಪ್ರಕೃತಿ ವಿಕೋಪಗಳು ಸಂಭವ
Team Udayavani, Jun 17, 2022, 5:23 PM IST
ದೋಟಿಹಾಳ: ಮಾನವ ತನಗೆ ತಿಳಿಯದೇ ಪರಿಸರ ಹಾಳು ಮಾಡುತ್ತಿದ್ದಾನೆ. ಇದರಿಂದ ನಮ್ಮ ಮೇಲೆ ಕೆಟ್ಟ ಪರಿಣಾಮಗಳು ಉಂಟಾಗುತ್ತಿದ್ದು, ಮುಂದೊಂದು ದಿನ ಶುದ್ಧ ಗಾಳಿಯನ್ನೂ ಹಣ ನೀಡಿ ಪಡೆಯುವ ಕಾಲ ಬಂದರೂ ಅಚ್ಚರ ಇಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಸಂಘದ ಮೇಲ್ವಿಚಾರಕ ಮಂಜುನಾಥ ಅವರು ಹೇಳಿದರು.
ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಷ್ಟಗಿ ಅವರು ಹಮ್ಮಿಕೊಂಡಿದ್ದ ಪರಿಸರ ಮಾಹಿತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದು ಸಸಿಗಳನ್ನು ನೆಡುವ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಜಗತ್ತಿನಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡಲು ಪ್ರತಿಯೊಬ್ಬರು ಮನೆಗಳ ಮುಂದೆ ಒಂದು ಮರ ಬೆಳಸಬೇಕು. ಹಾಗದರೆ ಮಾತ್ರ ಕಾಲಕಾಲಕ್ಕೆ ಮಳೆ ಬರುವುದರ ಜೊತೆಗೆ ಶುದ್ಧ ಗಾಳಿ ಸಿಗುತ್ತದೆ. ಇಲ್ಲದಿದ್ದರೆ ಈಗ ಶುದ್ಧಿ ನೀರಿಗೆ ಹಣ ನೀಡುತ್ತಿದೇವೆ. ಇದೇ ರೀತಿ ಮುಂದೊಂದು ದಿನ ಶುದ್ಧ ಗಾಳಿಯನ್ನೂ ಹಣಕೊಟ್ಟು ಕೊಂಡುಕೊಳ್ಳುವ ಕಾಲ ಬಂದೇ ಬರುತ್ತದೆ ಎಂದರು.
ಶಿಕ್ಷಕಿ ಹನುಮವ್ವ ಕೊಡಕಲ್ಲ ಅವರು ಮಾತನಾಡಿ, ಸರಕಾರಿ ಶಾಲೆ ಹಾಗೂ ಕಚೇರಿಗಳ ಆವರಣದಲ್ಲಿ ಸಸಿ ನೆಡುವುದರಿಂದ ಪರಿಸರ ಪರಿಪೂರಕ ವಾತಾವರಣ ಸೃಷ್ಟಿಯಾಗುತ್ತದೆ. ಸಾರ್ವಜನಿಕರು ನಿಮ್ಮ ಸುತ್ತಲಿನ ಖಾಲಿ ಜಾಗಗಳಲ್ಲಿ ಗಿಡಗಳನ್ನು ಬೆಳೆಸಬೇಕು. ಸಮಾಜದಲ್ಲಿ ಉತ್ತಮ ವಾತಾವರಣ ಸೃಷ್ಟಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಶಾಲಾ ಮುಖ್ಯಶಿಕ್ಷಕ ಸಿದ್ರಾಮಪ್ಪ ಅಮರಾವತಿ ಅವರು ಮಾತನಾಡಿ, ಪರಿಸರ ನಾಶದಿಂದ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಮಾನವ ಸೇರಿದಂತೆ ಎಲ್ಲ ಜೀವಿಗಳು ವಿನಾಶದ ಅಂಚಿಗೆ ತಲುಪುವ ಸ್ಥಿತಿ ಎದುರಾಗಿದೆ. ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ಈ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕಾಗಿದೆ. ಪರಿಸರ ಸಂರಕ್ಷಣೆ ಎಲ್ಲರ ಹೊಣೆ. ಗಿಡ-ಮರ ಬೆಳೆಸುವುದರಿಂದ ಸಕಾಲಕ್ಕೆ ಮಳೆ, ಶುದ್ಧ ಗಾಳಿ ಸಿಗುವ ಜತೆಗೆ ಭೂಮಿಯ ಉಷ್ಣತೆ ಸಮತೋಲನವಾಗುತ್ತದೆ. ಆದ್ದರಿಂದ ಪರಿಸರ ರಕ್ಷಣೆ ಎಲ್ಲರ ಕರ್ತವ್ಯವಾಗಲಿ ಎಂದರು.
ಶಿಕ್ಷಕ ಅಲ್ಲಾಸಾಬ್ ಗೋತಗಿ ಅವರು ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷೆ ವಿರುಪಮ್ಮ ಶೇಖಪ್ಪ ದೊಡ್ಡಮನಿ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಸೇವಾ ಪ್ರತಿನಿಧಿ ಗ್ಯಾನಪ್ಪ ಮನ್ನಾಪುರ, ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು, ಗ್ರಾಮದ ಮಹಿಳೆಯರು, ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ