ಡ್ಯಾಂ ಇದ್ದರೂ ನೀರಿಗೆ ಹಾಹಾಕಾರ


Team Udayavani, May 17, 2019, 5:31 PM IST

kopala-tdy-1…

ಕೊಪ್ಪಳ: ತುಂಗಭದ್ರಾ ಜಲಾಶಯ ಜಿಲ್ಲೆಯಲ್ಲೇ ಇದ್ದರೂ 282ಕ್ಕೂ ಹೆಚ್ಚು ಹಳ್ಳಿಗಳು ಇಂದಿಗೂ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಪ್ರತಿ ಬೇಸಿಗೆಯಲ್ಲಿ ಜನರ ಗೋಳಾಟ, ಪರಿಪಾಟಲು ಯಾರಿಗೂ ಹೇಳತೀರದಂತ ಸ್ಥಿತಿಯಿದೆ. ಜಿಲ್ಲಾಡಳಿತ ಪ್ರತಿ ವರ್ಷ ಕೋಟ್ಯಂತರ ರೂ. ಹಣ ವೆಚ್ಚ ಮಾಡಿದರೂ ಜನರು ನೀರಿಗೆ ಬಿಕ್ಕುವ ಸ್ಥಿತಿ ತಪ್ಪಿಲ್ಲ.

ಜಿಲ್ಲೆ ಮೊದಲೇ ಬರಪೀಡಿತ ಎಂಬ ಹಣೆಪಟ್ಟಿ ಹೊತ್ತಿದೆ. ಮಳೆಯ ಅಭಾವದಿಂದ ಈ ಭಾಗದಲ್ಲಿ ಅಂತರ್ಜಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಕೆರೆ, ಬಾವಿ ನೀರಿನ ಮೂಲಗಳನ್ನೇ ನಂಬಿ ಜೀವನ ನಡೆಸುವ ಜನತೆ ಕೊಡ ನೀರಿಗೆ ತೋಟ, ಗದ್ದೆಗಳಿಗೆ ಅಲೆದಾಡುತ್ತಿದ್ದಾರೆ.

•ಜಿಲ್ಲೆಯಲ್ಲಿ ನೀರಿಗೆ ಬಾಯ್ದೆರೆದ 282 ಹಳ್ಳಿಗಳು

•ತುಂಗಭದ್ರೆ ಪಕ್ಕದಲ್ಲೇ ಇದ್ದರೂ ಬಿಕ್ಕುವ ಜನ

•13 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು

•ಕೋಟಿ ಕೋಟಿ ಬಂದರೂ, ಸಮಸ್ಯೆ ಕಗ್ಗಂಟು

ಜಿಲ್ಲೆಯ 737 ಜನವಸತಿ ಪ್ರದೇಶಗಳಲ್ಲಿ 282 ಗ್ರಾಮಗಳು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳೆಂದು ಜಿಲ್ಲಾಡಳಿತದ ವರದಿಯೇ ಹೇಳುತ್ತದೆ. ಪ್ರತಿ ಬೇಸಿಗೆಯಲ್ಲಿ ಏಪ್ರಿಲ್, ಮೇನಲ್ಲಿ ಸಮಸ್ಯಾತ್ಮಕ ಹಳ್ಳಿಗಳ ಸಂಖ್ಯೆ 330ರ ಗಡಿದಾಟುತ್ತದೆ. ನೀರಿನ ಹಾಹಾಕಾರ ಉಲ್ಭಣಿಸಿದಾಗ ಮಾತ್ರ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು ಎದ್ದು ಬಿದ್ದು ಕ್ರಿಯಾಯೋಜನೆ ರೂಪಿಸಲು ಓಡಾಡುತ್ತಿರುತ್ತಾರೆ. ಆದರೆ ಪೂರ್ವ ಯೋಜನೆ ಅವರಲ್ಲಿ ಕಾಣಲ್ಲ.

ವಿಶೇಷವೆಂಬಂತೆ, ತುಂಗಭದ್ರಾ ಡ್ಯಾಂ ಜಿಲ್ಲೆಯಲ್ಲೇ ಇದ್ದರೂ ನೀರಿನ ಬವಣೆ ಮಾತ್ರ ನೀಗಿಲ್ಲ. ಕಳೆದ ವರ್ಷ ಡ್ಯಾಂ ಭರ್ತಿಯಾದರೂ ಜಿಲ್ಲೆಯ ಜನ ತೋಟ, ಗದ್ದೆ, ಕೆರೆ, ಬಾವಿಗಳಲ್ಲಿ ನಿಂತ ನೀರನ್ನೇ ಬಳಸುತ್ತಿದ್ದಾರೆ. ಪರ ಊರುಗಳಿಂದ ಜನರು ನೀರು ತಂದು ಜೀವನ ನಡೆಸುವಂತಹ ಸ್ಥಿತಿಯಿದೆ. ಇಲ್ಲಿನ ಶಾಸಕ, ಸಂಸದರು ಶಾಶ್ವತ ಯೋಜನೆ ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ.

ಕ್ರಿಯಾಯೋಜನೆ: ಪ್ರಸಕ್ತ ಬೇಸಿಗೆಯಲ್ಲಿ ನೀರಿನ ಬವಣೆ ನಿವಾರಿಸಲು ಸರ್ಕಾರ ಜಿಪಂನ ಟಾಸ್ಕ್ ಫೋರ್ಸ್‌ನಡಿ 3.75 ಕೋಟಿ, ಎಸ್‌ಡಿಆರ್‌ಎಫ್‌ನಡಿ 1.30 ಕೋಟಿ, ಜಿಲ್ಲಾಧಿಕಾರಿ ಬರ ಪರಿಹಾರದಲ್ಲಿ 3.43 ಕೋಟಿ ಸೇರಿದಂತೆ ಒಟ್ಟು ಕುಡಿಯುವ ನೀರು ಪೈಪ್‌ಲೈನ್‌ ದುರಸ್ತಿ, ಕೊಳವೆ ಬಾವಿ ಬಾಡಿಗೆ, ಕೊಳವೆಬಾವಿ ಕೊರೆಯಿಸುವುದು ಸೇರಿ ಜನರಿಗೆ ನೀರು ಪೂರೈಕೆಗೆ 8.48 ಕೋಟಿ ರೂ.ನಲ್ಲಿ ಕ್ರಿಯಾಯೋಜನೆ ರೂಪಿಸಿ ಬಿಡುಗಡೆಯನ್ನೂ ಮಾಡಿದೆ. ಆದರೆ ಜಿಲ್ಲೆಯ 110 ಗ್ರಾಮಗಳಲ್ಲಿ 138 ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸುವಂತಹ ಸ್ಥಿತಿಯಿದೆ. ಇನ್ನೂ ಕುಷ್ಟಗಿ ತಾಲೂಕಿನ ಗುಡ್ಡದ ದೇವಲಾಪುರ, ಹನುಮನಾಳ, ಸಾಸ್ವಿಹಾಳ, ಅಡವಿಬಾವಿ, ರ್ಯಾವಣಕಿ, ಚಂದ್ರಗಿರಿ ಸೇರಿ ಜಿಲ್ಲೆಯ 13 ಹಳ್ಳಿಗಳಲ್ಲಿ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದ್ದು, ಮೇ ಕೊನೆಯಲ್ಲಿ ಈ ಹಳ್ಳಿಗಳ ಸಂಖ್ಯೆ 40ರ ಗಡಿ ದಾಟಬಹುದು ಎಂದು ಜಿಲ್ಲಾಡಳಿತ ಲೆಕ್ಕಾಚಾರ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಹಲವು ಕಡೆ ಕೆಟ್ಟಿವೆ. ದುರಸ್ತಿಗೆ ಗ್ರಾಪಂಗಳು ನರಳಾಡುತ್ತಿದ್ದರೆ, ಸಂಘ-ಸಂಸ್ಥೆಗಳ ಆಶ್ರಯದಲ್ಲಿರುವ ಘಟಕಗಳು ಸರಿಯಾಗಿವೆ. ಹಲವೆಡೆ ಘಟಕಗಳಿಗೆ ನೀರಿಗೆ ಬರ ಬಂದಿದೆ. ಪ್ರತಿ ವರ್ಷ ಕುಡಿಯುವ ನೀರಿಗೆ ಕೋಟಿ ಕೋಟಿ ಅನುದಾನ ಬಂದರೂ ಸಮಸ್ಯೆ ಕಗ್ಗಂಟಾಗುತ್ತಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.