ಡ್ಯಾಂ ಇದ್ದರೂ ನೀರಿಗೆ ಹಾಹಾಕಾರ


Team Udayavani, May 17, 2019, 5:31 PM IST

kopala-tdy-1…

ಕೊಪ್ಪಳ: ತುಂಗಭದ್ರಾ ಜಲಾಶಯ ಜಿಲ್ಲೆಯಲ್ಲೇ ಇದ್ದರೂ 282ಕ್ಕೂ ಹೆಚ್ಚು ಹಳ್ಳಿಗಳು ಇಂದಿಗೂ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಪ್ರತಿ ಬೇಸಿಗೆಯಲ್ಲಿ ಜನರ ಗೋಳಾಟ, ಪರಿಪಾಟಲು ಯಾರಿಗೂ ಹೇಳತೀರದಂತ ಸ್ಥಿತಿಯಿದೆ. ಜಿಲ್ಲಾಡಳಿತ ಪ್ರತಿ ವರ್ಷ ಕೋಟ್ಯಂತರ ರೂ. ಹಣ ವೆಚ್ಚ ಮಾಡಿದರೂ ಜನರು ನೀರಿಗೆ ಬಿಕ್ಕುವ ಸ್ಥಿತಿ ತಪ್ಪಿಲ್ಲ.

ಜಿಲ್ಲೆ ಮೊದಲೇ ಬರಪೀಡಿತ ಎಂಬ ಹಣೆಪಟ್ಟಿ ಹೊತ್ತಿದೆ. ಮಳೆಯ ಅಭಾವದಿಂದ ಈ ಭಾಗದಲ್ಲಿ ಅಂತರ್ಜಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಕೆರೆ, ಬಾವಿ ನೀರಿನ ಮೂಲಗಳನ್ನೇ ನಂಬಿ ಜೀವನ ನಡೆಸುವ ಜನತೆ ಕೊಡ ನೀರಿಗೆ ತೋಟ, ಗದ್ದೆಗಳಿಗೆ ಅಲೆದಾಡುತ್ತಿದ್ದಾರೆ.

•ಜಿಲ್ಲೆಯಲ್ಲಿ ನೀರಿಗೆ ಬಾಯ್ದೆರೆದ 282 ಹಳ್ಳಿಗಳು

•ತುಂಗಭದ್ರೆ ಪಕ್ಕದಲ್ಲೇ ಇದ್ದರೂ ಬಿಕ್ಕುವ ಜನ

•13 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು

•ಕೋಟಿ ಕೋಟಿ ಬಂದರೂ, ಸಮಸ್ಯೆ ಕಗ್ಗಂಟು

ಜಿಲ್ಲೆಯ 737 ಜನವಸತಿ ಪ್ರದೇಶಗಳಲ್ಲಿ 282 ಗ್ರಾಮಗಳು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳೆಂದು ಜಿಲ್ಲಾಡಳಿತದ ವರದಿಯೇ ಹೇಳುತ್ತದೆ. ಪ್ರತಿ ಬೇಸಿಗೆಯಲ್ಲಿ ಏಪ್ರಿಲ್, ಮೇನಲ್ಲಿ ಸಮಸ್ಯಾತ್ಮಕ ಹಳ್ಳಿಗಳ ಸಂಖ್ಯೆ 330ರ ಗಡಿದಾಟುತ್ತದೆ. ನೀರಿನ ಹಾಹಾಕಾರ ಉಲ್ಭಣಿಸಿದಾಗ ಮಾತ್ರ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು ಎದ್ದು ಬಿದ್ದು ಕ್ರಿಯಾಯೋಜನೆ ರೂಪಿಸಲು ಓಡಾಡುತ್ತಿರುತ್ತಾರೆ. ಆದರೆ ಪೂರ್ವ ಯೋಜನೆ ಅವರಲ್ಲಿ ಕಾಣಲ್ಲ.

ವಿಶೇಷವೆಂಬಂತೆ, ತುಂಗಭದ್ರಾ ಡ್ಯಾಂ ಜಿಲ್ಲೆಯಲ್ಲೇ ಇದ್ದರೂ ನೀರಿನ ಬವಣೆ ಮಾತ್ರ ನೀಗಿಲ್ಲ. ಕಳೆದ ವರ್ಷ ಡ್ಯಾಂ ಭರ್ತಿಯಾದರೂ ಜಿಲ್ಲೆಯ ಜನ ತೋಟ, ಗದ್ದೆ, ಕೆರೆ, ಬಾವಿಗಳಲ್ಲಿ ನಿಂತ ನೀರನ್ನೇ ಬಳಸುತ್ತಿದ್ದಾರೆ. ಪರ ಊರುಗಳಿಂದ ಜನರು ನೀರು ತಂದು ಜೀವನ ನಡೆಸುವಂತಹ ಸ್ಥಿತಿಯಿದೆ. ಇಲ್ಲಿನ ಶಾಸಕ, ಸಂಸದರು ಶಾಶ್ವತ ಯೋಜನೆ ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ.

ಕ್ರಿಯಾಯೋಜನೆ: ಪ್ರಸಕ್ತ ಬೇಸಿಗೆಯಲ್ಲಿ ನೀರಿನ ಬವಣೆ ನಿವಾರಿಸಲು ಸರ್ಕಾರ ಜಿಪಂನ ಟಾಸ್ಕ್ ಫೋರ್ಸ್‌ನಡಿ 3.75 ಕೋಟಿ, ಎಸ್‌ಡಿಆರ್‌ಎಫ್‌ನಡಿ 1.30 ಕೋಟಿ, ಜಿಲ್ಲಾಧಿಕಾರಿ ಬರ ಪರಿಹಾರದಲ್ಲಿ 3.43 ಕೋಟಿ ಸೇರಿದಂತೆ ಒಟ್ಟು ಕುಡಿಯುವ ನೀರು ಪೈಪ್‌ಲೈನ್‌ ದುರಸ್ತಿ, ಕೊಳವೆ ಬಾವಿ ಬಾಡಿಗೆ, ಕೊಳವೆಬಾವಿ ಕೊರೆಯಿಸುವುದು ಸೇರಿ ಜನರಿಗೆ ನೀರು ಪೂರೈಕೆಗೆ 8.48 ಕೋಟಿ ರೂ.ನಲ್ಲಿ ಕ್ರಿಯಾಯೋಜನೆ ರೂಪಿಸಿ ಬಿಡುಗಡೆಯನ್ನೂ ಮಾಡಿದೆ. ಆದರೆ ಜಿಲ್ಲೆಯ 110 ಗ್ರಾಮಗಳಲ್ಲಿ 138 ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸುವಂತಹ ಸ್ಥಿತಿಯಿದೆ. ಇನ್ನೂ ಕುಷ್ಟಗಿ ತಾಲೂಕಿನ ಗುಡ್ಡದ ದೇವಲಾಪುರ, ಹನುಮನಾಳ, ಸಾಸ್ವಿಹಾಳ, ಅಡವಿಬಾವಿ, ರ್ಯಾವಣಕಿ, ಚಂದ್ರಗಿರಿ ಸೇರಿ ಜಿಲ್ಲೆಯ 13 ಹಳ್ಳಿಗಳಲ್ಲಿ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದ್ದು, ಮೇ ಕೊನೆಯಲ್ಲಿ ಈ ಹಳ್ಳಿಗಳ ಸಂಖ್ಯೆ 40ರ ಗಡಿ ದಾಟಬಹುದು ಎಂದು ಜಿಲ್ಲಾಡಳಿತ ಲೆಕ್ಕಾಚಾರ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಹಲವು ಕಡೆ ಕೆಟ್ಟಿವೆ. ದುರಸ್ತಿಗೆ ಗ್ರಾಪಂಗಳು ನರಳಾಡುತ್ತಿದ್ದರೆ, ಸಂಘ-ಸಂಸ್ಥೆಗಳ ಆಶ್ರಯದಲ್ಲಿರುವ ಘಟಕಗಳು ಸರಿಯಾಗಿವೆ. ಹಲವೆಡೆ ಘಟಕಗಳಿಗೆ ನೀರಿಗೆ ಬರ ಬಂದಿದೆ. ಪ್ರತಿ ವರ್ಷ ಕುಡಿಯುವ ನೀರಿಗೆ ಕೋಟಿ ಕೋಟಿ ಅನುದಾನ ಬಂದರೂ ಸಮಸ್ಯೆ ಕಗ್ಗಂಟಾಗುತ್ತಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.