ಬದುಕಿನ ಪ್ರತಿ ಸಮಸ್ಯೆಗೂ ವಿಜ್ಞಾನದಲ್ಲಿದೆ ಪರಿಹಾರ; ಕೆ.ಎಸ್‌. ಗುರುಮಠ

ವಿದ್ಯಾರ್ಥಿಗಳು ಏನನ್ನೇ ಕಲಿತರು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು.

Team Udayavani, Mar 2, 2023, 6:19 PM IST

ಬದುಕಿನ ಪ್ರತಿ ಸಮಸ್ಯೆಗೂ ವಿಜ್ಞಾನದಲ್ಲಿದೆ ಪರಿಹಾರ; ಕೆ.ಎಸ್‌. ಗುರುಮಠ

ಕಾರಟಗಿ: ವಿಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಹಾಗೂ ದೇಶದ ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆಗಳನ್ನು ಗುರುತಿಸಲು ಪ್ರತಿವರ್ಷ ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತಿದೆ ಎಂದು ಕಮ್ಮಾವಾರಿ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಕೆ.ಎಸ್‌. ಗುರುಮಠ ಹೇಳಿದರು.

ತಾಲೂಕಿನ ಮರ್ಲಾನಹಳ್ಳಿಯ ನವನಗರದ ರಡ್ಡಿ ವೀರಣ ಸಂಜೀವಪ್ಪ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ವಿಜ್ಞಾನ ದಿನವು ಭಾರತದಲ್ಲಿ ಮಹತ್ವದ ಕಾರ್ಯಕ್ರಮವಾಗಿದೆ. ಫೆ. 28ರಂದು ಭಾರತೀಯ ಭೌತಶಾಸ್ತ್ರಜ್ಞ ಸರ್‌| ಸಿ.ವಿ. ರಾಮನ್‌ ಅವರು 1928ರ ಫೆ. 28ರಂದು ರಾಮನ್‌ ಪರಿಣಾಮದ ಅವಿಷ್ಕಾರವನ್ನು ಗುರುತಿಸಲು ಆಚರಿಸಲಾಗುತ್ತದೆ.

ಬದುಕಿನ ಪ್ರತಿ ಸಮಸ್ಯೆಗೂ ವಿಜ್ಞಾನದಲ್ಲಿ ಪರಿಹಾರವಿದೆ. ಆದ್ದರಿಂದ ಮಕ್ಕಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದಲೇ ಗಣಿತ ಮತ್ತು ವಿಜ್ಞಾನಗಳ ಬಗ್ಗೆ ಒಲವು ಮೂಡಿಸಬೇಕು. ವಿದ್ಯಾರ್ಥಿಗಳು ಏನನ್ನೇ ಕಲಿತರು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು. ಜೊತೆಗೆ ವಿಜ್ಞಾನವು ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು.ತಂತ್ರಜ್ಞಾನದ ಮೇಲಿನ ಅವಲಂಬನೆ ಇಂದಿನ ಅನಿವಾರ್ಯ.

ಇಂದಿನ ಮಕ್ಕಳನ್ನು ಭಿನ್ನವಾಗಿ ರೂಪಿಸುತ್ತಿರುವುದು ಆನ್‌ಲೈನ್‌ ಸಂಪನ್ಮೂಲಗಳು. ವಿಜ್ಞಾನ, ತಂತ್ರಜ್ಞಾನ ಹಾಗೂ ಅನ್ವೇಷಣೆಯ ಭವಿಷ್ಯ ವಿದ್ಯಾಭ್ಯಾಸದ ಕೌಶಲಗಳು ಹಾಗೂ ವೃತ್ತಿಯ ಮೇಲಿನ ಪರಿಣಾಮಗಳು ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ ಎಂದರು.

ಶಿಕ್ಷಕ ಗುರುರಾಜ ಜೋಶಿ ಮಾತನಾಡಿ, ಜಾಗತಿಕ ಯೋಗಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನ ಎಂಬ ವಿಷಯವು ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ವಿಶ್ವಾದ್ಯಂತ ಯೋಗಕ್ಷೇಮ ಉತ್ತೇಜಿಸುವಲ್ಲಿ ವಿಜ್ಞಾನದ ಪ್ರಾಮುಖ್ಯತೆ ಪ್ರತಿಬಿಂಬಿಸುತ್ತದೆ. ಭೌತಶಾಸ್ತ್ರಜ್ಞ ಚಂದ್ರಶೇಖರ ವೆಂಕಟರಾಮನ್‌ ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ಒಂದು ಪ್ರಮುಖ ಅವಿಷ್ಕಾರ ಮಾಡಿದರು. ಅದನ್ನ ರಾಮನ್‌ ಎಫೆಕ್ಟ್ ಎಂದು ಹೆಸರಿಸಲಾಯಿತು. ಸಮಾಜದ ಅಭಿವೃದ್ಧಿಗೆ ವಿಜ್ಞಾನ ಬಳಕೆಯಾಗಬೇಕು. ಈ ದಿನವನ್ನು ದೇಶದ ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆಗಳನ್ನು ಗುರುತಿಸಲು ನೆನೆಯಲು ಆಚರಿಸಲಾಗುತ್ತದೆ ಎಂದರು.ವಿದ್ಯಾರ್ಥಿನಿ ಮಂಜೀರಾ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರು, ಶಿಕ್ಷಕಿಯರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.