ಬೀಜ ಮಾತ್ರವಲ್ಲ ಗೊಬ್ಬರವೂ ನಕಲಿ!

ಗಂಗಾವತಿ -ಮಸ್ಕಿಯಲ್ಲೂ ಗೋಲ್‌ಮಾಲ್‌­ಎರಡು ಕಡೆಗೂ ಪ್ರತ್ಯೇಕ ಪ್ರಕರಣ ದಾಖಲು

Team Udayavani, Jun 24, 2021, 9:30 PM IST

23msk04 (1)

ಮಲ್ಲಿಕಾರ್ಜುನ ಚಿಲ್ಕರಾಗಿ

ಮಸ್ಕಿ: ಕಳಪೆ ಬಿತ್ತನೆ ಬೀಜ ಮಾತ್ರವಲ್ಲ ಈಗ ನಕಲಿ ರಸಗೊಬ್ಬರವೂ ಮಾರುಕಟ್ಟೆ ಪ್ರವೇಶಿಸಿದೆ. ಅತಿ ಕಡಿಮೆ ಬೆಲೆಗೆ ಸಿಗುವ ಕಚ್ಚಾ ವಸ್ತು ಬಳಸಿ ತಯಾರಿಸಿರುವುದನ್ನು ರಸಗೊಬ್ಬರ ಎಂದು ನಂಬಿಸಿ ರೈತರಿಗೆ ಮಾರಾಟ ಮಾಡುವ ಜಾಲ ಬಯಲಾಗಿದೆ.

ಕೃಷಿ ಮತ್ತು ಪೊಲೀಸ್‌ ಅ ಧಿಕಾರಿಗಳ ದಾಳಿಯ ವೇಳೆ ಜೂ.16ರಂದು ಮಸ್ಕಿ ಮತ್ತು ನೆರೆಯ ಗಂಗಾವತಿ ತಾಲೂಕಿನಲ್ಲಿ ಲಕ್ಷಾಂತರ ರೂ. ಮೌಲ್ಯದ ನಕಲಿ ರಸಗೊಬ್ಬರ ಪತ್ತೆಯಾಗಿತ್ತು. ಎರಡೂ ಕಡೆ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಜಾಡು ಹಿಡಿದು ಹೊರಟ ಅಧಿಕಾರಿಗಳಿಗೆ ಇದರ ಬೇರು ಗಟ್ಟಿಯಾಗಿರುವ ಮಾಹಿತಿ ಲಭಿಸಿದೆ. ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿದೆ ಎಂಬ ಆಘಾತಕಾರಿ ಅಂಶ ಪತ್ತೆಯಾಗಿದೆ. ಸಮಗ್ರ ತನಿಖೆ ನಡೆಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಕೊಪ್ಪಳ ಎಸ್‌ಪಿಗೆ ಸೂಚನೆ ನೀಡಿದ್ದಾರೆ.

ಆಗಿದ್ದೇನು?: ಜೂ.16ರಂದು ಖಚಿತ ಮಾಹಿತಿ ಮೇರೆಗೆ ಗಂಗಾವತಿಯ ಕೃಷಿ ಮತ್ತು ಪೊಲೀಸ್‌ ಇಲಾಖೆ ಅ ಧಿಕಾರಿಗಳ ದಾಳಿ ವೇಳೆ ಒಟ್ಟು 3,88,500 ರೂ. ಮೌಲ್ಯದ 200 ಚೀಲ ಮಂಗಲ ಡಿಎಪಿ ಹೆಸರಿನ 100 ಚೀಲ ಕೋರಮಂಡಲ ಇಂಟನ್ಯಾಷನಲ್‌ ಲಿಮಿಟೆಡ್‌ ಕಂಪನಿಯ ಗ್ರೋಪ್ಲಸ್‌ ಹೆಸರಿನ ನಕಲಿ ರಸಗೊಬ್ಬರ ಪತ್ತೆಯಾಗಿತ್ತು. ಪ್ರಾಥಮಿಕ ವಿಚಾರಣೆ ವೇಳೆ ಕೇವಲ 450-600 ರೂ. ಬೆಲೆ ಬಾಳುವ ಸೆಟ್‌ರೈಟ್‌ ಅಂಶವನ್ನು ತುಂಬಿ ಮಂಗಲ ಡಿಎಪಿ ಲೇಬಲ್‌ ಬಳಸಿ 1200 ರೂ. ಗೂ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುತ್ತಿದ್ದರು.

ಕೇವಲ ಗಂಗಾವತಿಯಲ್ಲ ಮಸ್ಕಿ, ಮುದಗಲ್‌ನಲ್ಲೂ ಈ ರಸಗೊಬ್ಬರ ಮಾರಾಟ ಮಾಡಲಾಗಿದೆ ಎನ್ನುವ ಅಂಶವನ್ನು ಆರೋಪಿಗಳು ಬಾಯಿಬಿಟ್ಟಿದ್ದರು. ಆರೋಪಿಗಳ ಹೇಳಿಕೆ ಬಳಿಕ ಮಸ್ಕಿ ತಾಲೂಕಿನ ಕುಣೆಕೆಲ್ಲೂರು, ಮಟ್ಟೂರು ಗ್ರಾಮಗಳಲ್ಲಿ ದಾಸ್ತಾನು ಇಡಲಾಗಿದ್ದ 514 ಚೀಲ ನಕಲಿ ಡಿಎಪಿ ಗೊಬ್ಬರವನ್ನು ಅದೇ ದಿನ ಪತ್ತೆ ಹಚ್ಚಲಾಗಿತ್ತು. ಎರಡು ಕಡೆಗೂ ಪ್ರತ್ಯೇಕ ಪೊಲೀಸ್‌ ಕೇಸ್‌ ದಾಖಲಾಗಿದ್ದು, ಸಿಕ್ಕ ನಕಲಿ ರಸಗೊಬ್ಬರವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಈಗ ಪರೀಕ್ಷೆ ವರದಿಯೂ ಬಂದಿದ್ದು, ಇದು ನಕಲಿ ರಸಗೊಬ್ಬರ ಎನ್ನುವುದು ರುಜುವಾಗಿದೆ. ಆದರೆ ಇದು ಕೇವಲ ಸ್ಥಳೀಯರಿಂದ ನಡೆದ ಕೃತ್ಯವಲ್ಲ; ಇದರ ಹಿಂದೆ ದೊಡ್ಡ ಜಾಲವೇ ಇದೆ ಎನ್ನುವ ಅನುಮಾನ ಹುಟ್ಟಿಕೊಂಡಿವೆ.

ಫ್ಯಾಕ್ಟರಿಯಿಂದ ಆಮದು: ಆರೋಪಿಗಳ ಪ್ರಾಥಮಿಕ ಹೇಳಿಕೆ ಪ್ರಕಾರ ಅಫಜಲಪುರದಲ್ಲಿನ ಸಕ್ಕರೆ ಕಾರ್ಖಾನೆಯೊಂದರಿಂದ ಉತ್ಪತ್ತಿಯಾಗುವ ಮೊಲಾಸಿಸ್‌ ಎನ್ನುವ ತ್ಯಾಜ್ಯದ ಮೂಲಕ ಸಂಸ್ಕರಣೆ ಇಲ್ಲದೇ ಹಾಗೂ ಯಾವುದೇ ರೀತಿ ಮಣ್ಣಿಗೆ ಪೂರಕ ಅಂಶಗಳಿರದೇ (ನೈಟ್ರೋಜನ್‌, ಪ್ರಾಸ್ಪರಸ್‌) ಕಚ್ಚಾ ವಸ್ತುಗಳ ಮೂಲಕ ಗೊಬ್ಬರ ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಇಂತಹ ಗೊಬ್ಬರ ಬಳಸಿದ ರೈತರ ಬೆಳೆಗಳು ಯಾವುದೇ ರೀತಿಯ ಫಲ ನೀಡದು ಎಂದು ತಿಳಿದು ಬಂದಿದೆ. ಇದು ಮೂರ್‍ನಾಲ್ಕು ವರ್ಷಗಳಿಂದ ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದು ಕೇವಲ ಪ್ರಾಥಮಿಕ ವಿಚಾರಣೆ ವೇಳೆ ಬಂದ ಮಾಹಿತಿಯಾಗಿದ್ದು, ಇದರ ಸಂಪೂರ್ಣ ತನಿಖೆ ಇನ್ನೂ ನಡೆದಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.