ಗರ್ಭಿಣಿಯನ್ನು ಆಟೋದಲ್ಲಿ ಕರೆದೊಯ್ದ ಕುಟುಂಬ;ಆ್ಯಂಬುಲೆನ್ಸ್ ವಿಳಂಬ ಕುರಿತು ಗ್ರಾಮಸ್ಥರಆಕ್ರೋಶ
Team Udayavani, Dec 19, 2023, 11:56 AM IST
ಕನಕಗಿರಿ: ಗ್ರಾಮವೊಂದರಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಸರಿಯಾಗಿಲ್ಲದೇ ಗರ್ಭಿಣಿಯೊಬ್ಬರನ್ನು ಆಟೊದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ನಡೆದಿದೆ.
ಕನಕಗಿರಿ ಸಮೀಪದ ಹುಲಿಹೈದರ ಗ್ರಾಮದ ಅಂಬಿಕಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸಹೋದರ ನಾಗರಾಜ ಹೊಸಗುಡ್ಡ ಆ್ಯಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ಸಿಬ್ಬಂದಿ ಹುಲಿಹೈದರ ಗ್ರಾಮಕ್ಕೆ ವಾಹನ ಬರಲು ಒಂದೂವರೆ ಗಂಟೆ ಸಮಯ ಬೇಕಾಗುತ್ತದೆ. ಅಲ್ಲಿಯವರೆಗೆ ಕಾಯಬೇಕು ಅಂತ ಉತ್ತರಿಸಿದ್ದರು.
ಆದರೆ ಅಂಬಿಕಾ ಅವರಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಬೇರೆ ದಾರಿಯಿಲ್ಲದೆ ಕುಟುಂಬದವರು ಆಕೆಯನ್ನು ಆಟೊದಲ್ಲಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಫಟನೆ ಕುರಿತು ಸಹೋದರ ನಾಗರಾಜ ಹೊಸಗುಡ್ಡ ಹೇಳುವಂತೆ ಡಿ. 7ರಂದು ಅಣ್ಣನ ಮಗಳು ಶಿವಲೀಲಾ ಅವರ ಹೆರಿಗೆಗಾಗಿ ಕರೆ ಮಾಡಿದಾಗಲೂ ಸಹ ಆ್ಯಂಬುಲೆನ್ಸ್ ಬರಲಿಲ್ಲ. ಆಗಲೂ ಆಟೊದಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿಸಿದರು.
ಇದು ಬಹುತೇಕ ಗ್ರಾಮಗಳ ಬಡ ಜನರ ನೋವಿನ ಕಥೆ. ತುರ್ತು ವಾಹನ ಸರಿಯಾದ ಸಮಯಕ್ಕೆ ಬರುವುದಿಲ್ಲ ಎಂದು ನೋವು ತೋಡಿಕೊಂಡರು.
ಇತ್ತೀಚೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ರತ್ನಂ ಪಾಂಡೆಯೆ ಗ್ರಾಮಕ್ಕೆ ಭೇಟಿ ನೀಡಿದಾಗ ಆ್ಯಂಬುಲೆನ್ಸ್ ವಿಳಂಬದ ಕುರಿತು ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ