ನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಖಂಡಿಸಿ ಅಭಿಮಾನಿಗಳ ಪ್ರತಿಭಟನೆ
Team Udayavani, Dec 29, 2022, 7:30 PM IST
ಗಂಗಾವತಿ: ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದಿರುವುದನ್ನು ಖಂಡಿಸಿ, ಕರುನಾಡ ಕಲಾರತ್ನ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದಿಂದ ನಗರ ದ ಕೃಷ್ಣದೇವರಾಯ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಜಿಲ್ಲಾಧ್ಯಕ್ಷ ಮಂಜುನಾಥ ಗಜ ಮಾತನಾಡಿ, ಹೊಸಪೇಟೆ ನ ಗರದಲ್ಲಿ ಕ್ರಾಂತಿ ಚಲನಚಿತ್ರದ ಧ್ವನಿ ಸುರಳಿ ಬಿಡುಗಡೆ ಕಾ ರ್ಯಕ್ರಮದಲ್ಲಿ ದರ್ಶನ್ ಮೇಲೆ ಕೆಲ ಕಿಡಿಗೇಡಿಗಳು ಚಪ್ಪಲಿ ಎಸೆದಿದ್ದು ಖಂಡನೀಯ.ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರನ್ನು ಬಂಧಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಾಂ ತ ಧರಣಿ, ಪ್ರತಿಭಟನೆ, ಹೋರಾಟ ನಡೆಸಲಾಗುತ್ತದೆ ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.
ಇದಕ್ಕು ಮುನ್ನ ಕರುನಾಡ ಕಲಾರತ್ನ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದ ಸದಸ್ಯರು ಸಿಬಿಎಸ್ ವೃತ್ತದಿಂದ ಮಹಾವೀರ, ಗಾಂಧಿ, ಬಸವಣ್ಣ, ಕಲ್ಮಠ ವೃತ್ತ ಮಾರ್ಗವಾಗಿ ಕೃಷ್ಣದೇವರಾಯ ವೃತ್ತದವರೆಗೆ ರ್ಯಾಲಿ ಮಾಡಲಾಯಿತು. ದರ್ಶನ್ ಅಭಿಮಾನಿಗಳಾದ ರಮೇಶ, ಚೌಡಪ್ಪ, ದುರ್ಗೇಶ, ಸುಭಾಷ್, ಮೈಬೂ, ಶರಣಪ್ಪ, ಹುಲ್ಲೇಶ, ವಿಜಯ ಮಹಾಂತೇಶ ಸೇರಿ ಅಭಿಮಾನಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ