ಹತ್ತು ಸಾವಿರ ರೈತರಿಂದ ಹೆದ್ದಾರಿ ಬಂದ್
Team Udayavani, Aug 17, 2017, 7:50 AM IST
ಗಂಗಾವತಿ: ಕೊಪ್ಪಳ-ರಾಯಚೂರು ಜಿಲ್ಲೆಯ ತುಂಗಭದ್ರಾ ಎಡದಂಡೆ ಕಾಲುವೆಗೆ ಕೂಡಲೇ ನೀರು ಹರಿಸಲು ಆಗ್ರಹಿಸಿ 10 ಸಾವಿರಕ್ಕೂ ಹೆಚ್ಚು ರೈತರು ಬುಧವಾರ 8 ತಾಸಿಗೂ ಅಧಿಕ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ
ನಡೆಸಿದರು.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 50 ಟಿಎಂಸಿ ನೀರಿದ್ದರೂ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ನಿರ್ಣಯಿಸಿರುವುದು ಅವೈಜ್ಞಾನಿ. ಕಳೆದ ವರ್ಷ 39 ಟಿಎಂಸಿ ನೀರಿದ್ದ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಹರಿಸಲಾಗಿತ್ತು.
ಈಗ 50 ಟಿಎಂಸಿ ನೀರಿದ್ದರೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಸಂತೋಷ ಲಾಡ್ ಮತ್ತು ಸಚಿವ ಬಸವರಾಜ ರಾಯರಡ್ಡಿ ಕುತಂತ್ರ ನಡೆಸಿ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ರೈತರು ನೀರು ಬಿಡಿಸಲು ಹಲವು ಸಲ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರಲ್ಲದೇ ಈಗಲಾದರೂ ಕಾಲುವೆಗೆ ನೀರು ಹರಿಸುವಂತೆ ರೈತ ಮುಖಂಡರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಗಂಗಾವತಿ ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ ಮಾತನಾಡಿ, ಸರಕಾರ ರೈತರ ಜೀವನದೊಂದಿಗೆ ಚೆಲ್ಲಾಟವಾಡಬಾರದು.ನೀರಿದ್ದರೂ ಕಾಲುವೆಗೆ ನೀರು ಹರಿಸದೆ ರೈತರನ್ನು ದಾರಿ ತಪ್ಪಿಸಲು ಅ ಧಿಕಾರಿಗಳು ಸಿದಟಛಿತೆ ನಡೆಸಿದ್ದಾರೆ. ಸುಳ್ಳು ಲೆಕ್ಕ ಹೇಳುವ ಮೂಲಕ ನೀರನ್ನು ಕಾರ್ಖಾನೆಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕಮಲ-ಕೈ ಕಾರ್ಯಕರ್ತರ ನೂಕಾಟ
ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರಿಂದ ತಳ್ಳಾಟ-ನೂಕಾಟ ನಡೆದಿದ್ದರಿಂದ ಕೆಲ ಹೊತ್ತು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಹೋರಾಟದಲ್ಲಿ ಪಾಲ್ಗೊಂಡ ಕನಕಗಿರಿ ಶಾಸಕ ಶಿವರಾಜ್ತಂಗಡಗಿ ಪ್ರತಿಭಟನಾ ನಿರತ ರೈತರನ್ನುದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ ಕನಕಗಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ-ಜೆಡಿಎಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಪರಿಣಾಮ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ