ಮೆಕ್ಕೆಜೋಳ ಬದಲಾಗಿ ಸಜ್ಜೆ-ತೊಗರಿ ಬೆಳೆದ ರೈತರು
Team Udayavani, Aug 7, 2019, 1:20 PM IST
ಕುಷ್ಟಗಿ: ತಾಲೂಕಿನಲ್ಲಿ ಮುಂಗಾರು ವಿಳಂಬದ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಗಂಭೀರ ಪರಿಸ್ಥಿತಿ ಎದುರಿಸುತ್ತಿದ್ದ ರೈತರಿಗೆ ಸಜ್ಜೆ, ತೊಗರಿ ಬೆಳೆ ಸಮಾಧಾನ ಮೂಡಿಸಿವೆ.
ಆರಂಭಿಕವಾಗಿ ಅಸಮರ್ಪಕ ಮುಂಗಾರು ಮಳೆಗೆ ಬಿತ್ತನೆ ಕ್ಷೇತ್ರ ವಿಸ್ತಾರವಾಗಿರಲಿಲ್ಲ. ಬದಲಾದ ಪರಿಸ್ಥಿತಿಗೆ ಬಹುತೇಕ ರೈತರು ತೊಗರಿ, ಸಜ್ಜೆ ಬಿತ್ತನೆಗೆ ಒಲವು ತೋರಿದ ಹಿನ್ನೆಲೆಯಲ್ಲಿ ಇದೀಗ ರೈತರು ನಿರೀಕ್ಷಿಸಿದಂತೆ ಉತ್ತಮ ಬೆಳೆ ಬಂದಿದ್ದು, ಬರಗಾಲ ಚಿಂತೆಯನ್ನು ಜುಲೈ ತಿಂಗಳ ಮಳೆ ದೂರ ಮಾಡಿದೆ.
ಕೆಲವು ವರ್ಷಗಳಿಂದ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತಿತ್ತು. ಆದರೆ ಕಳೆದ ವರ್ಷ ಹುಸಿ ಸೈನಿಕ ಹುಳುವಿನ ಬಾಧೆ ಕಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಮೆಕ್ಕೆಜೋಳ ಪ್ರದೇಶದಲ್ಲಿ ಸಜ್ಜೆ, ತೊಗರಿ ಬಿತ್ತನೆಯಾಗಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ 59,275 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಆ. 2ರವರೆಗೆ 22,600 ಹೆಕ್ಟೇರ್ ಸಜ್ಜೆ ಬಿತ್ತನೆಯಾಗಿದೆ. ಕುಷ್ಟಗಿ ಹೋಬಳಿಯಲ್ಲಿ 4,540 ಹೆಕ್ಟೇರ್, ತಾವರಗೇರಾ 8,440 ಹೆಕ್ಟೇರ್, ಹನುಮಸಾಗರ 4,740 ಹೆಕ್ಟೇರ್ ಹಾಗೂ ಹನುಮನಾಳದಲ್ಲಿ 4,930 ಹೆಕ್ಟೇರ್ ಬಿತ್ತನೆಯಾಗಿದ್ದು ಸದ್ಯ 40ರಿಂದ 45 ದಿನಗಳ ಬೆಳೆ ಇದೆ.
ಪ್ರಸಕ್ತ ವರ್ಷದಲ್ಲಿ ತೊಗರಿ 9,120 ಹೆಕ್ಟೇರ್ನಲ್ಲಿ ಬಿತ್ತನೆಯಾಗಿದ್ದು, ಕುಷ್ಟಗಿ ಹೋಬಳಿಯಲ್ಲಿ 1905 ಹೆಕ್ಟೇರ್, ತಾವರಗೇರಾ 2,805 ಹೆಕ್ಟೇರ್, ಹನುಮಸಾಗರ ವ್ಯಾಪ್ತಿಯಲ್ಲಿ 2,205 ಹಾಗೂ ಹನುಮನಾಳದಲ್ಲಿ 2,205ರಷ್ಟು ಬಿತ್ತನೆಯಾಗಿದೆ.
ವಾಡಿಕೆಯಷ್ಟೇ ಮಳೆ: ಜೂನ್ ತಿಂಗಳ 75.25 ಮಿ.ಮೀ. ವಾಡಿಕೆ ಮಳೆಯಲ್ಲಿ 89.75 ಮಿ.ಮೀ. ಮಳೆಯಾಗಿದೆ. ಜುಲೈ ತಿಂಗಳಲ್ಲಿ 73.05 ಮಿ.ಮೀ. ವಾಡಿಕೆ ಮಳೆಯಲ್ಲಿ 81.75ರಷ್ಟು ಮಳೆಯಾಗಿದೆ. ಆ. 5ಕ್ಕೆ ಈ ವರ್ಷದ ಒಟ್ಟು ಸರಾಸರಿ 255 ಮಿ.ಮೀ. ವಾಡಿಕೆ ಮಳೆಯಷ್ಟೇ 255 ಮಿ.ಮೀ. ಮಳೆಯಾಗಿದೆ. ಕಳೆದ ಜುಲೈ ತಿಂಗಳಲ್ಲಿ ಮಳೆ ಪ್ರಮಾಣದಲ್ಲಿ ಸುಧಾರಣೆ ಕಂಡಿರುವುದು ಬೆಳೆಯ ಪರಿಸ್ಥಿತಿ ಸುಧಾರಣೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು