ರಸಗೊಬ್ಬರ ದರ ಏರಿಕೆ ಖಂಡಿಸಿ ಭತ್ತದ ಗದ್ದೆಯಲ್ಲಿ ಗೊಬ್ಬರದ ಚೀಲವಿಟ್ಟು ರೈತರ ಪ್ರತಿಭಟನೆ
Team Udayavani, Jan 29, 2022, 5:47 PM IST
ಗಂಗಾವತಿ : ಭತ್ತದ ಗದ್ದೆಗಳಲ್ಲಿ ರಸಗೊಬ್ಬರದ ಚೀಲವಿಟ್ಟು ರೈತರು ತಾಲ್ಲೂಕಿನ ಆಜಾದ್ ನರಸಾಪುರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ನಿರ್ದೇಶಕ ರೆಡ್ಡಿ ಮಾತನಾಡಿ,ಕಳೆದ 2 3 ತಿಂಗಳ ಇಂದೆ 50 ಕೆ.ಜಿ. ಪೊಟ್ಯಾಷ್ಗೆ 950-1050 ರೂ. ಇದ್ದ ದರ ಇದೀಗ 1,700 ರೂ.ಗೆ ಏರಿಕೆಯಾಗಿದೆ. ಜತೆಗೆ ಮಾರುಕಟ್ಟೆಯಲ್ಲಿ ಕೊರತೆಯೂ ಉಂಟಾಗಿದ್ದು, ಪೊಟ್ಯಾಷ್ ಬಳಸಬೇಕಾಗಿರುವ ಬೆಳೆಗಾರರು ಗೊಬ್ಬರ ಸಿಗದೆ ಕಂಗಾಲಾಗಿದ್ದಾರೆ.ಕಳೆದ ತಿಂಗಳಲ್ಲಿ 50 ಕೆ.ಜಿ. ಪೊಟ್ಯಾಷ್ಗೆ 950-1050 ರೂ. ಇತ್ತು. ಅದೀಗ 1,700 ರೂ.ಗೆ ಏರಿಕೆಯಾಗಿದೆ. ಒಂದೆಡೆ ಕೃಷಿ ಇಲಾಖೆಯು ರಸಗೊಬ್ಬರದ ಕೊರತೆಯಿಲ್ಲ ಎನ್ನುತ್ತಿದೆ. ಆದರೆ ಮಾರಾಟಗಾರರು, ‘ಪೊಟ್ಯಾಷ್ ಸ್ಟಾಕ್ ಇಲ್ಲ. ಪೊಟ್ಯಾಷ್ ಮೊದಲಾದ ರಸಗೊಬ್ಬರಗಳ ಬೆಲೆಯಲ್ಲಿ ಶೇ. 30ರಷ್ಟು ದರ ಏರಿಕೆ ಮಾಡಲಾಗಿತ್ತು. ದರ ಏರಿಕೆಯನ್ನು ಸುಧಾರಿಸಿಕೊಳ್ಳುವ ಮುನ್ನವೇ ಪೊಟ್ಯಾಷ್ ದರ ಮತ್ತೆ ಏರಿಕೆ ಮಾಡಲಾಗಿದೆ.”ವರ್ಷಕ್ಕೆ ಎರಡು ಮೂರು ಬಾರಿ ರಸಗೊಬ್ಬರಗಳ ದರ ಹೆಚ್ಚಿಸಿದರೆ ರೈತರು ಏನು ಮಾಡಬೇಕೆಂದು ರೈತ ಮುಖಂಡರು ಪ್ರಶ್ನಿಸುತ್ತಿದ್ದಾರೆ.ಜಿಲ್ಲಾ ಸಚಿವರಾಗಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ದಡೇಸೊಗೂರು ಬಸವರಾಜ್ ರೈತರಿಗೆ ಆಗುವ ತೊಂದರೆಗಳ ಬಗ್ಗೆ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಶಾಸಕರಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದರು.
ಕೇವಲ ಮುಖ್ಯಮಂತ್ರಿ ಜೊತೆ ಫೋಟೋ ಫೋಸ್ ಮಾತ್ರ ಕೊಡುತ್ತಾರೆ. ರೈತರಿಗಾಗಿ ಉಪಯೋಗವಾಗುವಂತಹ ಉತ್ತಮ ಯೋಜನೆಗಳನ್ನು ನೀಡುವುದರಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.ಇಂತಹ ಸರ್ಕಾರದಿಂದ ರೈತರು ಸಾರ್ವಜನಿಕರು ಬೇಸತ್ತು ಹೋಗಿದ್ದಾರೆ.ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ. ರೈತ ಸಾಯುವ ಸ್ಥಿತಿಯಲ್ಲಿದ್ದಾನೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು.ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಬೇಕು. ರಸಗೊಬ್ಬರ ಬೆಲೆ ಇಳಿಸಬೇಕು. ಒಂದು ವೇಳೆ ರಸಗೊಬ್ಬರ ಬೆಲೆ ಇಳಿಕೆಯಾಗದಿದ್ದರೆ.ಮುಂದಿನ ದಿನದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಈ ವೇಳೆ ರೈತ ಮುಖಂಡರಾದ ತಾಳೂರು ರುದ್ರಪ್ಪ ನರಸಾಪುರ. ದ್ಯಾಮಣ್ಣ ಬರಗೂರು. ವೀರಪ್ಪ ನಾಯಕ್.ಸೋಮಪ್ಪ ನಾಯಕ್. ಹುಲುಗಪ್ಪ ನರಸಾಪುರ.ವೀರೇಶ. ಡಿ ಕೊಂಡಯ್ಯ. ವೈ ಶ್ರೀನಿವಾಸ್. ರಾಜ. ರಾಕೇಶ್. ಶಾಂತಪ್ಪ ಹಾಗೂ ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ