ಸುಗ್ರೀವಾಜ್ಞೆ ಹಿಂಪಡೆಯಿರಿ


Team Udayavani, Sep 11, 2020, 5:00 PM IST

ಸುಗ್ರೀವಾಜ್ಞೆ ಹಿಂಪಡೆಯಿರಿ

ಕೊಪ್ಪಳ: ಸರ್ಕಾರವು ಭೂ ಸುಧಾರಣಾ ಕಾಯ್ದೆ, ಸ್ವಾಧೀನ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿ ಹಲವು ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದು, ಇದರಿಂದ ರೈತರಿಗೆ ಗಂಡಾಂತರವಾಗಿದೆ. ಇದನ್ನು ಖಂಡಿಸಿ ವಿಧಾನಸೌಧ ಮುತ್ತಿಗೆ ಹಾಕುವ ಜೊತೆಗೆ ದೊಡ್ಡ ಮಟ್ಟದ ಹೋರಾಟ ಮಾಡಲಿದ್ದೇವೆ ಎಂದು ಹಸಿರು ಸೇನೆ ಹಾಗೂ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

ನಗರದ ಎಪಿಎಂಸಿ ಆವರಣದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಕಾಯ್ದೆಗಳ ವಿಚಾರ ಸಂಕಿರಣದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಸರ್ಕಾರವು ರೈತರಿಗೆ ಗಂಡಾಂತರವಾದ ಕಾಯ್ದೆ ಬಂದಿವೆ. ರೈತರು ಕಾಯ್ದೆ ತಿದ್ದುಪಡಿಯಿಂದ ಆಗುವಂತಹ ಅನಾಹುತವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರಿಗೆ ರೈತರ ಸಂಕಷ್ಟ ಗೊತ್ತಿಲ್ಲ. ಅವರು ಚಹಾ ಮಾರಾಟ ಮಾಡಿದವರು. ಆದರೆ ನಾನು ರೈತನ ಮಗನೆಂದು, ಹಸಿರು ಶಾಲು ಹೆಗಲಿಗೆ ಹಾಕಿಕೊಂಡು ರೈತರ ಹೆಸರಲ್ಲಿ ಪ್ರಮಾಣ ಮಾಡಿ ಅಧಿಕಾರ ನಡೆಸುತ್ತಿರುವ ಬಿ.ಎಸ್‌. ಯಡಿಯೂರಪ್ಪ ಅವರು ರೈತರ ಹಿತ ಕಾಯಬೇಕೇ ಹೊರತು ಅವರ ಜೀವಕ್ಕೆ ಕುತ್ತು ತರುವಂತ ಕೆಲಸ ಮಾಡಬಾರದು. ಸರ್ಕಾರವು ಕೋವಿಡ್ ಹೆಸರಲ್ಲಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುತ್ತಿದೆ. ಇದನ್ನುರೈತರು ತಿಳಿಯಬೇಕು. ರೈತರನ್ನು ದಿವಾಳಿ ಮಾಡುವ ಉದ್ದೇಶದಿಂದ ಮೋದಿಹಾಗೂ ಯಡಿಯೂರಪ್ಪ ಸರ್ಕಾರಗಳು ಕಾಯ್ದೆ ಜಾರಿ ಮಾಡುತ್ತಿವೆ. ಮೊದಲೇ ಕೋವಿಡ್‌ ಹೆಸರಲ್ಲಿ ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೀರಿ. ಈಗ ಎಪಿಎಂಸಿಯಲ್ಲೂ ಕಾರ್ಪೋರೆಟ್‌ ಕಂಪನಿಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ವರ್ತಕ ವ್ಯಾಪಾರಸ್ಥರಿಗೂ ಅವಕಾಶ ಇಲ್ಲದಂತಾಗುತ್ತಿದೆ. ಬಿಎಸ್‌ವೈ ಅವರು ಯಡಿಯೂರಪ್ಪ ರೈತ ವಿರೋ ಧಿ ಎಂಬ ಪಟ್ಟ ಬರಬಾರದು ಎಂದೆದಿದ್ದರೆ ಸುಗ್ರೀವಾಜ್ಞೆ ರದ್ದು ಪಡಿಸಬೇಕೆಂದರು.

ಸರ್ಕಾರಗಳು ರೈತರ ಅನುಮತಿ ಇಲ್ಲದೇ ಇದ್ದರೂ ಸ್ವಾ ಧೀನ ಮಾಡಿಕೊಳ್ಳುವ ಕಾಯ್ದೆ ತಂದಿದೆ. ಇದರಿಂದ ರೈತರಿಗೆ ದೊಡ್ಡ ಅನ್ಯಾಯ ಆಗುತ್ತಿದೆ. 2013ರಲ್ಲಿ ಮನಮೋಹನ್‌ ಸಿಂಗ್‌ ಸರ್ಕಾರವು ಕಾಯ್ದೆ ಜಾರಿ ಮಾಡಿತ್ತು. ಆ ಕಾಯ್ದೆಯಡಿ ಶೇ.80 ರೈತರ ಒಪ್ಪಿಗೆ ಇರಬೇಕು. ಈಗ ಸುಗ್ರೀವಾಜ್ಞೆ ತಂದು ಎಲ್ಲವನ್ನೂ ಹಾಳು ಮಾಡಿದೆ ಎಂದರು. ಇನ್ನು ಯೂರಿಯಾ ಕೊರತೆ ರಾಜ್ಯದೆಲ್ಲೆಡೆ ಕೇಳಿ ಬಂದಿದೆ. ಆದರೆ ಸರ್ಕಾರವು ಸಿನಿಮಾ ನಟನಾದ ಬಿ.ಸಿ. ಪಾಟೀಲ್‌ ಅವರನ್ನು ಕರೆ ತಂದು ಮಂತ್ರಿ ಮಾಡಿದ್ದಾರೆ. ಅವರು ಮಾಧ್ಯಮದ ಮುಂದೆ ಪೋಜು ಕೊಟ್ಟು ದಿನಕ್ಕೊಂದು ಹೇಳಿಕೆ ನೀಡುತ್ತಾ ಸುತ್ತಾಡುತ್ತಿದ್ದಾರೆ. ರೈತರ ಹಿತ ಕಾಯುವ ಕೆಲಸ ಮಾಡಿಲ್ಲ. ಯೂರಿಯಾ ಕೊರತೆ ನೀಗಿಸಿಲ್ಲ. ದುಪ್ಪಟ್ಟು ಬೆಲೆಗೆ ಗೊಬ್ಬರ ಮಾಡುವ ವ್ಯಕ್ತಿಗಳ ಮೇಲೆ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದರು.

ಎಪಿಎಂಸಿ ಅಧ್ಯಕ್ಷ ನಾಗರಾಜ ಚಳ್ಳೂಳ್ಳಿ, ಹನುಮಂತಪ್ಪ ಹೊಳೆಯಾಚೆ, ನಜೀರಸಾಬ್‌ ಮೂಲಿಮನಿ, ಇಸ್ಮಾಯಿಲ್‌ ನಾಲಬಂದ, ದೊಡ್ಡಪ್ಪ ಸಜ್ಜಲಗುಡ್ಡ, ಮಹಾಂತಮ್ಮ ಪಾಟೀಲ್‌, ಶಂಕ್ರಗೌಡ ಬೀಳಗಿ ಉಪಸ್ಥಿತರಿದ್ದರು.

ಗಾಂಜಾದಲ್ಲಿ ಕೆಲವು ಔಷಧೀಯ ಗುಣವಿದ್ದರೂ ಅದನ್ನು ಲೀಗಲ್‌ ಮಾಡಬಾರದು. ಇದರಿಂದ ಭವಿಷ್ಯದ ಮಕ್ಕಳಿಗೆ ದೊಡ್ಡ ಪೆಟ್ಟು ಬೀಳಲಿದೆ. ಯಾವುದನ್ನೋ ದಿಕ್ಕು ತಪ್ಪಿಸಲು ಗಾಂಜಾ ಚರ್ಚೆಗೆ ಬಂದಿದೆ. ಗಾಂಜಾ ದಂಧೆ ಎಲ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಲ್ಲರಿಗೂ ಈ ಇದಕ್ಕೊಂದು ವಿಶೇಷ ಅಧಿಕಾರಿ ನೇಮಿಸಿ ಕ್ರಮ ಕೈಗೊಳ್ಳಿ ಎಂದರು. ಕೋಡಿಹಳ್ಳಿ ಚಂದ್ರಶೇಖರ, ಹಸಿರು ಸೇನೆ, ರೈತ ಮುಖಂಡ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.