ರಸ್ತೆ ಸಂಚಾರಕ್ಕೆ ರೈತರ ನಿರ್ಬಂಧ: ನಿವಾಸಿಗಳ ಆಕ್ರೋಶ
Team Udayavani, Sep 5, 2018, 4:32 PM IST
ಕುಷ್ಟಗಿ: ಹಿರೇಮನ್ನಾಪುರ ಗ್ರಾಮದ ಬಳಿ ಇರುವ ಏಕಲವ್ಯ ಕಾಲೋನಿಗೆ ಸರ್ಕಾರ ನಿರ್ಮಿಸುತ್ತಿರುವ ರಸ್ತೆಗೆ ಕೆಲವು ಜಮೀನು ಮಾಲೀಕರು ಕ್ಯಾತೆ ತೆಗೆದು ಕಾಮಗಾರಿ ಬಂದ್ ಮಾಡಿಸಿ, ರಸ್ತೆ ಸಂಚಾರ ನಿರ್ಬಂಧಿ ಸಿದ ಹಿನ್ನೆಲೆಯಲ್ಲಿ ಹಿರೇಮನ್ನಾಪುರ ಏಕಲವ್ಯ ಕಾಲೋನಿ ಗ್ರಾಮಸ್ಥರು ಇಲ್ಲಿನ ತಹಶೀಲ್ದಾರ್, ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮನವಿ ಸಲ್ಲಿಸಿದರು.
ಹಿರೇಮನ್ನಾಪುರ ಗ್ರಾಮದಿಂದ 3 ಕಿಮೀ ದೂರದಲ್ಲಿರುವ ಏಕಲವ್ಯ ನಗರಕ್ಕೆ ಹಿರೇಮನ್ನಾಪುರ-ನೀರಲೂಟಿ ಸಂಪರ್ಕ ರಸ್ತೆಯಿಂದ ಎರಡೂವರೆ ಕಿಮೀ ರಸ್ತೆ ನಿರ್ಮಾಣಕ್ಕೆ ಸರ್ಕಾರ 80 ಲಕ್ಷ ರೂ. ಬಿಡುಗಡೆಗೊಳಿಸಿದೆ. ಈಗಾಗಲೇ ರಸ್ತೆ ಕಾಮಗಾರಿ ಕೈಗೆತ್ತಿಕ್ಕೊಳ್ಳಲಾಗಿದ್ದು ಶೇ.50 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗಾರಿಗೆ ರಸ್ತೆಯ ಅಂಚಿನ ಜಮೀನಿನ ಮಾಲೀಕರು ಕ್ಯಾತೆ ತೆಗೆದು ರಸ್ತೆ ಕಾಮಗಾರಿ ತಡೆ ಹಿಡಿದಿದ್ದರೆ. ರಸ್ತೆ ನಿರ್ಮಿಸುವ ಪೂರ್ವದಲ್ಲಿ ಗುತ್ತಿಗೆದಾರ ಡಿ.ಎಸ್. ಕಂದಕೂರು ಹಾಗೂ ಸಂಬಂಧಿಸಿದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಸದರಿ ರಸ್ತೆ ಮಾರ್ಗ ಉದ್ದ, ಅಗಲದ ವ್ಯಾಪ್ತಿ ಗುರುತಿಸಿ ಒಪ್ಪಿಗೆ ಪಡೆದೇ ಕಾಮಗಾರಿ ಆರಂಭಿಸಲಾಗಿದ್ದರೂ ಏಕಲವ್ಯ ನಗರದ ಜನರು ಈ ರಸ್ತೆಯಲ್ಲಿ ಸಂಚರಿಸದಂತೆ ಮುಳ್ಳು ಕಂಟಿಗಳನ್ನು ಹಾಕಿ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇದರಿಂದ ಏಕಲವ್ಯ ನಗರದ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು, ಏಕಲವ್ಯ ನಗರದ ವಾಹನ ಬೈಕ್ ಸಂಚರಿಸದಂತೆ ನಿರ್ಬಂಧ ಹೇರಿದ್ದಾರೆ.
ಹಿರೇಮನ್ನಾಪುರ, ಕುಷ್ಟಗಿ ತಾಲೂಕು ಕೇಂದ್ರಕ್ಕೆ ಹೋಗಿ ಬರಲು ಏಕೈಕ ಮಾರ್ಗ ಇದಾಗಿದ್ದು, ಈ ರಸ್ತೆಯಲ್ಲಿ ಸಂಚರಿಸಿದರೆ ಜಮೀನು ಮಾಲೀಕರಿಂದ ಅವಾಚ್ಯವಾಗಿ ಬೈಸಿಕೊಳ್ಳಬೇಕಿದೆ. ಈ ತೊಂದರೆ ಕುಷ್ಟಗಿ ಠಾಣೆಯ ಪಿಎಸೈ ವಿಶ್ವನಾಥ ಹಿರೇಗೌಡ್ರು ಅವರ ಬಳಿ ನಿವೇದಿಸಿಕೊಂಡರು ಏಕಲವ್ಯ ನಗರದ ಕಿರಿಕಿರಿ ಮುಂದುವರಿಸಿದ್ದಾರೆ. ಇವರ ಬೈಗುಳಕ್ಕೆ ಹೆದರಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹಿಂಜರಿಯುತ್ತಿದ್ದಾರೆ. ಏಕಲವ್ಯ ಕಾಲೋನಿಯಲ್ಲಿ ಜನರ ಆರೋಗ್ಯದಲ್ಲಿ ಏರುಪೇರಾದರೂ ಅರೆ ಬರೆ ನಿರ್ಮಾಣದ
ರಸ್ತೆಯಲ್ಲಿ ಸಂಚರಿಸಲು ದಾರಿ ಇಲ್ಲವಾಗಿದೆ. ಈ ಕಾಲೋನಿಗೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಬರಲು ತೊಂದರೆಯಾಗಿದೆ ಎಂದು ಕಾಲೋನಿಯ ನಿವಾಸಿಗಳು ಅಳಲು ತೋಡಿಕೊಂಡರು.
ಏಕಲವ್ಯ ಕಾಲೋನಿಯ ನಿವಾಸಿಗಳ ಮನವಿ ಸ್ವೀಕರಿಸಿದ ಪಿಎಸೈ ವಿಶ್ವಾನಾಥ ಹಿರೇಗೌಡ್ರು ಅವರು, ಈ ರಸ್ತೆಯಿಂದ ಜಮೀನು ಮಾಲೀಕರಿಗೆ ಹೆಚ್ಚು ಅನುಕೂಲ ಸಿಗಲಿದೆ. ಈ ಅನುಕೂಲತೆ ಅರಿಯದೇ ಏಕಲವ್ಯ ನಿವಾಸಿಗಳೊಂದಿಗೆ ಕ್ಯಾತೆ ತೆಗೆದಿರುವುದು ಸರಿ ಅಲ್ಲ. ಸರ್ಕಾರ ನಿರ್ಮಿಸಿರುವ ರಸ್ತೆಗೆ ಅಡ್ಡಿ ಪಡಿಸುವುದು, ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧಿಸುವುದು ಕಾನೂನಿಗೆ ವಿರುದ್ಧವಾಗಿದ್ದು, ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಇತ್ಯರ್ಥಗೊಳಿಸುವ ಭರವಸೆ ನೀಡಿದರು.
ಈ ವೇಳೆ ದೇವಪ್ಪ ನೆರೆಬೆಂಚಿ, ದೊಡ್ಡಪ್ಪ ಹುಂಚಗೇರಿ, ದುರುಗಪ್ಪ ಹುಂಚಗೇರಿ, ಪರಸಪ್ಪ ಹುಂಚಗೇರಿ, ನಿರುಪಾದೆಪ್ಪ ಓತಗೇರಿ, ಹಿರೇಪರಸಪ್ಪ ಹುಂಚಗೇರಿ, ಕಳಕಪ್ಪ ಗಡಾದ, ಯಮನಪ್ಪ ಜಬ್ಲಿದ್, ಹನಮಂತ ಹುಂಚಗೇರಿ, ನಿರುಪಾದೆಪ್ಪ ಹುಂಚಗೇರಿ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ