ಮೇವು ಸಂಗ್ರಹಕ್ಕಾಗಿ ಮಳೆ ಆಶ್ರಿತ ರೈತರ ಹರಸಾಹಸ


Team Udayavani, Nov 17, 2018, 4:45 PM IST

17-november-20.gif

ಕನಕಗಿರಿ: ಒಣ ಬೇಸಾಯ ಪ್ರದೇಶವಾಗಿರುವ ತಾಲೂಕಿನಲ್ಲಿ ಮಳೆ ಬಂದರೆ ಮಾತ್ರ ಬೆಳೆ, ಇಲ್ಲವಾದರೇ ದೇವರೇ ಗತಿ ಎನ್ನುವಂತಹ ಪರಿಸ್ಥಿತಿ ಇದೆ. ಈ ಬಾರಿ ಮುಂಗಾರು, ಹಿಂಗಾರು ಮಳೆಗಳು ಸಂಪೂರ್ಣವಾಗಿ ಕೈಕೊಟ್ಟಿದರಿಂದ ಹುಲಿಹೈದರ್‌, ನವಲಿ, ಮುಸಲಾಪುರ, ಕನಕಗಿರಿ ಭಾಗದ ರೈತರು ಕಂಗಾಲಾಗಿದ್ದಾರೆ. ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳುವುದರ ಜೊತೆಗೆ ಜಾನುವಾರುಗಳಿಗೆ ಮೇವು ಸಂಗ್ರಹಿಸುವುದೇ ರೈತರಿಗೆ ಸವಾಲಿನ ಕೆಲಸವಾಗಿದೆ.

ಕನಕಗಿರಿ ತಾಲೂಕು ಒಣ ಬೇಸಾಯ ಪ್ರದೇಶವಾಗಿದ್ದು, ಈ ಭಾಗದ ರೈತರು ಜಾನುವಾರಗಳಿಗೆ ಮೇವು ಸಂಗ್ರಹಿಸಲು ನೀರಾವರಿ ಭಾಗವಾದ ಗಂಗಾವತಿ, ಕಾರಟಗಿಯತ್ತ ಅಲೆದಾಡುತ್ತಿದ್ದಾರೆ. ನೀರಾವರಿ ಭಾಗದಲ್ಲಿ ಬಿತ್ತನೆ ಮಾಡಿದ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಭತ್ತದ ಮೇವು ಸಂಗ್ರಹಿಸಲು ಮುಂದಾಗಿದ್ದಾರೆ. ನೀರಾವರಿ ಭಾಗದಲ್ಲಿ ಬೇಸಿಗೆ ಬೆಳೆಗೆ ನೀರು ಹರಿಸುವ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ. ಆದ್ದರಿಂದ ನೀರಾವರಿ ಆಶ್ರಿತ ರೈತರ ತಮ್ಮ ಜಾನುವಾರಗಳಿಗೆ ಮೇವು ಬೇಕೆಂದು ಮಾರಾಟಕ್ಕೆ ಮುಂದಾಗುತ್ತಿಲ್ಲ. ಇನ್ನು ಒಣ ಬೇಸಾಯ ಪ್ರದೇಶದ ರೈತರು ಒಂದು ಟ್ರ್ಯಾಕ್ಟರ್‌ ಮೇವಿಗೆ 4ರಿಂದ 5 ಸಾವಿರ ರೂ. ನೀಡಿ ಖರೀದಿ ಮಾಡುತ್ತಿದ್ದಾರೆ.

ಗೋಶಾಲೆ ಪ್ರಾರಂಭಿಸಿಲ್ಲ: ಕನಕಗಿರಿ ತಾಲೂಕನ್ನು ಬರಪೀಡಿತ ತಾಲೂಕೆಂದು ಸರ್ಕಾರ ಘೋಷಿಸಿದೆ. ಆದರೆ ಇವರೆಗೂ ಯಾವುದೇ ಬರ ಕಾಮಗಾರಿ, ಗೋ ಶಾಲೆಯನ್ನೂ ಪ್ರಾರಂಭಿಸಿಲ್ಲ. ಕೆಲ ರೈತರು ಮೇವು ಇಲ್ಲದಿರುವ ಕಾರಣ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ. ಗೋ ಶಾಲೆಯನ್ನು ಪ್ರಾರಂಭಿಸುವಂತೆ ಈ ಭಾಗದ ರೈತರು ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಕನಕಗಿರಿ, ಹುಲಿಹೈದರ್‌, ನವಲಿ ಭಾಗದಲ್ಲಿ ಗೋ ಶಾಲೆಯನ್ನು ಪ್ರಾರಂಭಿಸಬೇಕೆಂಬುವುದು ರೈತರ ಒತ್ತಾಯಿಸುತ್ತಿದ್ದಾರೆ.

ಮೇವಿನ ಕೊರತೆ ಇರುವ ರೈತರಿಗೆ ಪಶು ಸಂಗೋಪನೆ ಇಲಾಖೆಯಿಂದ ಮೇವಿನ ಬೀಜಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಮೇವಿನ ಬೀಜಗಳು ಬಿತ್ತನೆ ಮಾಡಿ 40 ದಿನಗಳಲ್ಲಿ ಮೇವು ಕಟಾವು ಮಾಡಬಹುದು. ಈ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಳ್ಳಬಹುದು.
. ಡಾ| ಮಲ್ಲಯ್ಯ ತಾಲೂಕು ಪಶು ವೈದ್ಯಾಧಿಕಾರಿ.

ಕನಕಗಿರಿ, ಹುಲಿಹೈದರ್‌, ನವಲಿ ಭಾಗದಲ್ಲಿ ಗೋ ಶಾಲೆ ಪ್ರಾರಂಭಿಸುವಂತೆ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜಾನುವಾರುಗಳನ್ನು ಉಳಿಸಿಕೊಳ್ಳಲು ಹಣ ನೀಡಿ ಮೇವು ಖರೀದಿ ಮಾಡುತ್ತಿದ್ದೇವೆ.
. ರಾಘವೇಂದ್ರ, ರೈತ

ಗೋ ಶಾಲೆಯನ್ನು ಪ್ರಾರಂಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಗೋ ಶಾಲೆ ಪ್ರಾರಂಭವಾಗಲು 1 ತಿಂಗಳ ಆಗಬಹುದು. ಮೇವಿನ ಅವಶ್ಯಕತೆ ಇರುವ ರೈತರು ಟ್ಯಾಕ್ಟರ್‌ ತೆಗೆದುಕೊಂಡು ಬಂದರೆ ನಾನೇ ಮೇವು ಖರೀದಿ ಮಾಡಿಕೊಡುತ್ತೇನೆ.
.ಬಸವರಾಜ ದಢೇಸುಗೂರು, ಶಾಸಕ.

„ಶರಣಪ್ಪ ಗೋಡಿನಾಳ 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.