ಸಕಾಲ ಅರ್ಜಿ ವಿಳಂಬವಾದ್ರೆ ದಂಡ ಕಡ್ಡಾಯ

ಸಕಾಲದಡಿ 45 ಇಲಾಖೆಗಳ ವಿವಿಧ ಸೇವೆ ; ಅರ್ಜಿಯೊಂದಿಗೆ ಅಗತ್ಯ ದಾಖಲೆ ಲಗತ್ತಿಸಿ

Team Udayavani, Jul 26, 2022, 5:41 PM IST

19

ಕೊಪ್ಪಳ: ಸಕಾಲದಡಿ ಬರುವ ಎಲ್ಲ ಇಲಾಖೆಗಳು ನಿಗದಿಪಡಿಸಿದ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ, ಅನಗತ್ಯ ವಿಳಂಬ ಮಾಡಿದರೆ ನಿಯಮಾನುಸಾರ ಸಂಬಂಧಿಸಿದ ಅಧಿಕಾರಿ, ವಿಷಯ ನಿರ್ವಾಹಕರು ದಂಡ ಪಾವತಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಕಾಲ ಹಾಗೂ ಐಪಿಜಿಆರ್‌ಎಸ್‌ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕಾಲದಡಿ ಒಟ್ಟು 45 ಇಲಾಖೆಗಳು ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಸೇವೆ ಒದಗಿಸುತ್ತವೆ. ಪ್ರತಿ ಇಲಾಖೆಯ ಒಪ್ಪಿಗೆ ಹಾಗೂ ಕಾರ್ಯನಿರ್ವಹಣೆಯ ಅವಧಿಯನುಸಾರ ಪ್ರತಿ ಅರ್ಜಿ ವಿಲೇವಾರಿಗೂ ನಿರ್ದಿಷ್ಟ ಕಾಲಮಿತಿ ನಿಗದಿಪಡಿಸಿದೆ. ಆದಾಗ್ಯೂ ಕೆಲ ಇಲಾಖೆಗಳು ಅರ್ಜಿ ವಿಲೇವಾರಿಗೆ ಹಾಗೂ ಅರ್ಜಿ ತಿರಸ್ಕಾರಕ್ಕೆ ಕೊನೆಯ ದಿನಾಂಕದವರೆಗೆ ಕಾಯುತ್ತವೆ. ಇದರಿಂದ ಅರ್ಜಿದಾರರ ಸಮಯ ವ್ಯರ್ಥವಾಗುವುದರೊಂದಿಗೆ ಜಿಲ್ಲೆಯ ಪ್ರಗತಿಯಲ್ಲೂ ಕುಂಠಿತಗೊಳ್ಳುತ್ತದೆ. ಆದ್ದರಿಂದ ಅರ್ಜಿದಾರರಿಗೆ ಸೇವೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ನೀಡುವಂತೆ ಅರ್ಜಿ ಸ್ವೀಕಾರ ಸಮಯದಲ್ಲಿ ತಿಳಿಸಿ. ಕೊನೆಯ ದಿನಾಂಕದವರೆಗೂ ಕಾದು ದಾಖಲಾತಿಗಳ ಕೊರತೆಯ ಕಾರಣ ನೀಡಿ ಅರ್ಜಿ ತಿರಸ್ಕರಿಸಬೇಡಿ. ಇದರಿಂದ ಅನಗತ್ಯ ವಿಳಂಬ ಉಂಟಾಗಿ, ಅರ್ಜಿದಾರರಿಗೂ ಸಮಸ್ಯೆಯಾಗುವುದರ ಜೊತೆಗೆ ಸಂಬಂಧಿಸಿದ ಅಧಿಕಾರಿ, ವಿಷಯ ನಿರ್ವಾಹಕರು ದಂಡ ಪಾವತಿಸಬೇಕಾಗಬಹುದು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಸಕಾಲ ಯೋಜನೆಯಡಿ ಜಾರಿಯಾಗಿ ಹಲವು ವರ್ಷಗಳೇ ಕಳೆದರು ಇದುವರೆಗೂ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ. ಆದ್ದರಿಂದ ಇನ್ಮುಂದೆ ಸಕಾಲ ನಿರ್ವಹಣೆಗಾಗಿಯೇ ಎಲ್ಲ ಇಲಾಖೆಗಳ ಅಧಿಕಾರಿಗಳು ಒಬ್ಬ ಅಧೀನ ಅಧಿಕಾರಿ ಅಥವಾ ಸಿಬ್ಬಂದಿ ನಿಯೋಜಿಸಿ. ಕಂದಾಯ, ಜಿಪಂನಡಿ ಬರುವ ಎಲ್ಲ ಇಲಾಖೆಗಳು ಅರ್ಜಿಯನ್ನು ಕಡ್ಡಾಯವಾಗಿ ಸ್ವೀಕರಿಸಬೇಕು. ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಯಾವುದೇ ಸೂಕ್ತ ಕಾರಣಗಳಿಲ್ಲದೇ ಅರ್ಜಿ ತಿರಸ್ಕಾರ ಮಾಡುವಂತಿಲ್ಲ. ಸಕಾಲದಲ್ಲಿ ಬರಿ ಅರ್ಜಿ ವಿಲೇವಾರಿಗಳಷ್ಟೇ ಅಲ್ಲ, ಬಾಕಿ ಉಳಿದ, ತಿರಸ್ಕರಿಸಿದ ಅರ್ಜಿಗಳ ಸಂಖ್ಯೆಯನ್ನು ಸಹ ಪರಿಗಣಿಸಲಾಗುವುದರಿಂದ ಜಿಲ್ಲೆಯ ಸೂಚ್ಯಂಕದಲ್ಲಿ ಇದು ಋಣಾತ್ಮಕ ಅಂಶವನ್ನು ತೋರಿಸುತ್ತದೆ. ಆದ್ದರಿಂದ ಸಕಾಲ ಅರ್ಜಿಗಳ ವಿಲೇವಾರಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಸಕಾಲದಂತೆ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕಾಗಿ ಐಪಿಜಿಆರ್‌ಎಸ್‌ ತಂತ್ರಾಂಶವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಇದು ನೇರವಾಗಿ ಸಿಎಂ ಡ್ಯಾಶ್‌ಬೋರ್ಡ್‌ನಲ್ಲಿ ಕಾರ್ಯನಿರ್ವಹಿಸುವುದರಿಂದ ಜಿಲ್ಲೆಯಲ್ಲಿ ಸ್ವೀಕೃತವಾಗುವ ಅರ್ಜಿಗಳು, ಅವುಗಳ ವಿಲೇವಾರಿ ಕುರಿತ ಮಾಹಿತಿಯು ಸಿಎಂ ಗಮನಕ್ಕೆ ಬರುತ್ತದೆ. ಆದ್ದರಿಂದ ಇದರಲ್ಲಿ ಸ್ವೀಕೃತವಾಗುವ ಎಲ್ಲ ಅರ್ಜಿಗಳಿಗೆ ಸೂಕ್ತ ಹಿಂಬರಹದೊಂದಿಗೆ ಅರ್ಜಿಯನ್ನು ಸಂಬಂಧಿ ಸಿದ ಇಲಾಖೆಗೆ ವರ್ಗಾಯಿಸಿ. ಸಕಾಲದಂತೆ ಕಾಲಮಿತಿಯೊಳಗೆ ಕಾರ್ಯನಿರ್ವಹಿಸಿ, ಮುಂದಿನ ಮಾಹೆಯಲ್ಲಿ ಸಕಾಲ ಹಾಗೂ ಐಜಿಪಿಆರ್‌ಎಸ್‌ ಕುರಿತು ಒಂದು ಕಾರ್ಯಾಗಾರ ಆಯೋಜಿಸಲಾಗುತ್ತಿದ್ದು, ಅಷ್ಟರೊಳಗೆ ಸಕಾಲ ನಿರ್ವಹಣೆಗೆ ಎಲ್ಲ ಇಲಾಖೆಗಳು ಸಿಬ್ಬಂದಿ ನಿಯೋಜಿಸಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಸಮೀರ್‌ ಮುಲ್ಲಾ, ಎಸಿ ಬಸವಣಪ್ಪ ಕಲಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಾಣೇಶ, ಸಕಾಲ ಕನ್ಸಲ್ಟೆಂಟ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.