ಅಗ್ನಿ ಅವಘಡದಿಂದ ಹೊತ್ತಿ ಉರಿದ ರೆಸಾರ್ಟ್; ಅಪಾರ ಹಾನಿ
Team Udayavani, Jul 18, 2021, 12:14 PM IST
ಗಂಗಾವತಿ: ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ತಾಲ್ಲೂಕಿನ ಅಂಜಿನಳ್ಳಿಯ ಹತ್ತಿರವಿರುವ ರೆಸಾರ್ಟ್ ಹೊತ್ತಿ ಉರಿದು ಅಪಾರ ಹಾನಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆದ ಬಗ್ಗೆ ವರದಿಯಾಗಿಲ್ಲ.
ರೆಸಾರ್ಟಿನ ಅಡುಗೆ ಮನೆಯಲ್ಲಿ ಆಹಾರ ಬೇಯಿಸುವ ಸಂದರ್ಭದಲ್ಲಿ ಬೆಂಕಿ ಅವಘಡ ನಡೆದಿದೆ. ಇದರಿಂದಾಗಿ ರೆಸಾರ್ಟ್ ನ ಅಡುಗೆಮನೆ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅದೃಷ್ಟವಶಾತ್ ಅಡುಗೆ ಸಿಲಿಂಡರನ್ನು ರೆಸಾರ್ಟ್ ನ ಹೊರಗೆ ಇರಿಸಲಾಗಿತ್ತು ಇದರಿಂದಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಇದನ್ನೂ ಓದಿ:ಗಂಗಾವತಿ: ಸೂಪರ್ ಮಾರ್ಕೆಟ್ ನ ಬಾಗಿಲು ಮುರಿದು ಲಕ್ಷಾಂತರ ರೂ. ಕಳವು
ಆನೆಗೊಂದಿ ಗ್ರಾಮದ ಹನಮಂತ ತಳವಾರ ಎಂಬುವರಿಗೆ ಸೇರಿದ ಈ ರೆಸಾರ್ಟ್ ಕಳೆದ 3 ವರ್ಷಗಳ ಹಿಂದೆ ಇಲ್ಲಿ ಆರಂಭಿಸಲಾಗಿದೆ. ವೀಕೆಂಡ್ ಇರುವುದರಿಂದ ಬೆಂಗಳೂರು ಹುಬ್ಬಳ್ಳಿ ಇತರೆ ಭಾಗಗಳಿಂದ ಶುಕ್ರವಾರ ಪ್ರವಾಸಿಗರು ಅಂಜನಾದ್ರಿ ಕಿಷ್ಕಿಂದ ಪರ್ವತ, ಪಂಪಾ ಸರೋವರ ಸೇರಿದಂತೆ ಸುತ್ತಲಿನ ಪ್ರವಾಸಿ ತಾಣಗಳನ್ನು ವೀಕ್ಷಣೆ ಮಾಡಲು ಇಲ್ಲಿಗೆ ಆಗಮಿಸಿ ಸುತ್ತಲಿನಲ್ಲಿರುವ ರೆಸಾರ್ಟ್ ಗಳಲ್ಲಿ ತಂಗುತ್ತಾರೆ. ಬೆಂಕಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ರೆಸಾರ್ಟ್ ನಲ್ಲಿ ಪ್ರವಾಸಿಗರು ಇರಲಿಲ್ಲ ಎನ್ನಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆಯವರು ಮತ್ತು ಸುತ್ತಲಿನ ಗ್ರಾಮಗಳ ಗ್ರಾಮಸ್ಥರು ತೆರಳಿ ಬೆಂಕಿ ನಂದಿಸುವಲ್ಲಿ ನೆರವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್