
Gangavathi ಕೋತಿ ಕಡಿದು ಐವರಿಗೆ ತೀವ್ರ ಗಾಯ
ಅರಣ್ಯ ಇಲಾಖೆಗೆ ದೂರು ನೀಡಿದರೂ ನಿರ್ಲಕ್ಷ್ಯ
Team Udayavani, May 31, 2023, 7:20 PM IST

ಗಂಗಾವತಿ :ತಾಲೂಕಿನ ಹನುಮನಹಳ್ಳಿಯಲ್ಲಿ ಕಳೆದ 20 ದಿನಗಳಿಂದ ಕೋತಿಯೊಂದು ಒದೆಯುವುದು ಮತ್ತು ಏಕಾಏಕಿ ಮೇಲೆರಗುತ್ತಿದ್ದು ಐವರನ್ನು ತೀವ್ರಗಾಯಗೊಳಿಸಿದೆ.
ಹನುಮನಹಳ್ಳಿ ಸುತ್ತಮುತ್ತ ಕೋತಿ ಹಾವಳಿ ಹೆಚ್ಚಾಗಿದ್ದು ಕೋತಿ ದಾಳಿ ಘಟನೆಯಲ್ಲಿ ಒಬ್ಬರ ಕೈ ಮುರಿದಿದ್ದು ಉಳಿದವರಿಗೆ ಕೈ,ಕಾಲು ಮತ್ತು ತೊಡೆ ಭಾಗದಲ್ಲಿ ಕಚ್ಚಿ ಗಾಯಗೊಳಿಸಿದೆ.
ಹನುಮನಹಳ್ಳಿ ಗ್ರಾಮದ ಮಲ್ಲಮ್ಮ ಸಣ್ಣಲಿಂಗಪ್ಪ(50 ) ಹೊಲದಲ್ಲಿ ಮೇವು ಕೊಯ್ಯುವ ಸಂದರ್ಭದಲ್ಲಿ ಹಿಂದಿನಿಂದ ಕೋತಿ ಆಗಮಿಸಿ ಒದ್ದ ಪರಿಣಾಮ ಬಲಗೈ ಮುರಿದಿದ್ದು ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಮುರಿದ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಪುನಃ ಬುಧವಾರ ಮಧ್ಯಾಹ್ನ ಆಟವಾಡುತ್ತಿದ್ದ ಸಾಗರ್ (12) ಮೀನಾಕ್ಷಿ ನಾಗರಾಜ (23) ಕೋತಿ ಇವರ ಬೆನ್ನು ಬಿದ್ದು ಮನಸೋ ಇಚ್ಛೆ ಕಡಿದ ಪರಿಣಾಮ ಕೈ,ಕಾಲು ಮತ್ತು ತೊಡೆ ಭಾಗದಲ್ಲಿ ಕಚ್ಚಿ ತೀವ್ರ ಗಾಯಗಳಾಗಿವೆ.ಗಾಯಳುಗಳನ್ನು ಗಂಗಾವತಿ ಖಾಸಗಿ ಆಸ್ಪತ್ರೆ ಮತ್ತು ಆನೆಗೊಂದಿ ಸರಕಾರಿ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯ
ಹನುಮನಹಳ್ಳಿ ಸುತ್ತಮುತ್ತ ಗ್ರಾಮಗಳ ಜನತೆಗೆ ಕೋತಿಯೊಂದು ಕಾಟಕೊಡುತ್ತಿದ್ದು ಕಳೆದ 20 ದಿನಗಳಲ್ಲಿ ಐವರು ಜನರಿಗೆ ಕಡಿದಿದ್ದು ಇವರಲ್ಲಿ ಮೂರು ಜನರಿಗೆ ತೀವ್ರ ಗಾಯಗಳಾಗಿವೆ.ಈ ಕುರಿತು ಹನುಮನಹಳ್ಳಿಯ ಗ್ರಾಮಸ್ಥರು ತಾಲೂಕು ಆಡಳಿತ ,ಸಾಣಾಪೂರ ಗ್ರಾ.ಪಂ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರೂ ಅಧಿಕಾರಿಗಳು ಕ್ರಮಕೈಗೊಂಡು ಕೋತಿ ಸೆರೆ ಹಿಡಿಯುವಲ್ಲಿ ವಿಫಲವಾಗಿದ್ದಾರೆ.ಕೂಡಲೇ ಕೋತಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kishkindha ಜಿಲ್ಲೆ ಘೋಷಣೆ ಅಸಾಧ್ಯ,ಆದರೂ ಹೋರಾಟ ಅಗತ್ಯ: ಜನಾರ್ದನ ರೆಡ್ಡಿ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Kustagi: ವಿದ್ಯುತ್ ಸಂಪರ್ಕದ ವೇಳೆ ಎಡವಟ್ಟು: ಹಲವು ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿ

Gangavathi ಕೊಲೆ ಆರೋಪ- ಪತ್ನಿಯನ್ನು ಕಾಲುವೆಗೆ ತಳ್ಳಿದ ಪತಿ: ದೂರು ದಾಖಲು
MUST WATCH
ಹೊಸ ಸೇರ್ಪಡೆ

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ