ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ
Team Udayavani, Sep 26, 2020, 9:02 AM IST
ಗಂಗಾವತಿ: ಕಳೆದ ರಾತ್ರಿ ಸುರಿದ ಮಳೆಗಾಳಿಗೆ ಆನೆಗೊಂದಿ ಹಳೆ ಮಂಡಲ ವ್ಯಾಪ್ತಿಯ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ನೆಲಕ್ಕುರುಳಿ ಲಕ್ಷಾಂತರ ರೂ.ನಷ್ಟವಾಗಿದೆ.
ಶುಕ್ರವಾರ ಮಧ್ಯರಾತ್ರಿಯಿಂದ ಆರಂಭವಾಗಿರುವ ಮಳೆ ಬಿಟ್ಟು ಬಿಡದೇ ಸುರಿಯುತ್ತಿದೆ. ಆನೆಗೊಂದಿ, ಸಂಗಾಪೂರ, ಸಾಣಾಪೂರ,ಹನುಮನಹಳ್ಳಿ, ಜಂಗ್ಲಿ ರಂಗಾಪೂರ, ವಿರುಪಾಪೂರಗಡ್ಡಿ ಮತ್ತು ತಿರುಮಲಾಪೂರ ಗ್ರಾಮಗಳ ವ್ಯಾಪ್ತಿಯಲ್ಲಿ ಮುಂಗಡವಾಗಿ ನಾಟಿ ಮಾಡಲಾಗಿದ್ದ ಸೋನಾ ಮಸೂರಿ ಭತ್ತದ ಬೆಳೆ ಕಾಳುಕಟ್ಟುವ ಹಂತದಲ್ಲಿದ್ದು ಶುಕ್ರವಾರದ ಮಳೆ ನೂರಾರು ಎಕರೆಯ ಭತ್ತ ಸಂಪೂರ್ಣವಾಗಿ ನೆಲಕ್ಕುರುಳಿದ್ದು ರೈತರಿಗೆ ಲಕ್ಷಾಂತರ ರೂ.ನಷ್ಟವಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್ವೈ-ಎಚ್ಡಿಕೆ ಭೇಟಿ: JDS ಬೆಂಬಲ ಯಾರಿಗೆ?
ಕಳೆದ ವರ್ಷದ ಭತ್ತದ ಬೆಳೆಗೆ ಸರಿಯಾದ ದರ ಸಿಗದೇ ಬಹುತೇಕ ಭತ್ತವನ್ನು ಮಾರಾಟ ಮಾಡದೇ ಸಂಗ್ರಹ ಮಾಡಿದ್ದು ಪುನಹ ಪ್ರಕೃತಿ ವಿಕೋಪದ ಕಾರಣಕ್ಕಾಗಿ ಮಳೆಗಾಳಿಗೆ ಭತ್ತ ನೆಲಕ್ಕುರುಳಿ ನಷ್ಟವುಂಟಾಗಿದೆ.
ರೈತರ ನೆರವಿಗೆ ಮನವಿ: ಮಳೆಗಾಳಿಗೆ ನೆಲಕ್ಕೆ ಬಿದ್ದಿರುವ ಭತ್ತದ ಬೆಳೆಗೆ ಸಾವಿರಾರು ರೂ. ಖರ್ಚು ಮಾಡಿದ್ದು ಮಳೆಯಿಂದ ನಷ್ಟವಾಗಿದೆ. ಕೂಡಲೇ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೇ ನಡೆಸಿ ನಷ್ಟಪರಿಹಾರ ದೊರಕಿಸಬೇಕು. ಸರಕಾರ ರೈತರ ನೆರವಿಗೆ ಬರಬೇಕೆಂದು ನಷ್ಟಗೊಂಡಿರುವ ರೈತರ ಪರವಾಗಿ ಶರೀಪ್ ಪಟವಾರಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್