ಕಣ್ಮರೆಯಾಗುತ್ತಿರುವ ಜನಪದ ಉಳಿವಿಗಾಗಿ ಶ್ರಮಿಸಬೇಕಾಗಿದೆ; ಜೀವನಸಾಬ್ ಬಿನ್ನಾಳ


Team Udayavani, Nov 28, 2022, 10:01 AM IST

5

ದೋಟಿಹಾಳ: ಜೀವನದ ಮೌಲ್ಯಗಳನ್ನು ಒಬ್ಬರಿಂದ ಮತ್ತೊಬ್ಬರಿಗೆ ಪಸರುವಂತೆ ಮಾಡುತ್ತಿದ್ದ ಜಾನಪದ ಕಲೆ ಮತ್ತು ಗೀತೆಗಳು ಇಂದಿನ ಜಾಗತೀಕರಣದ ಪ್ರಭಾವದಿಂದಾಗಿ ಕಣ್ಮರೆಯಾಗುತ್ತಿವೆ ಎಂದು ಜಾನಪದ ಗಾಯಕ ಜೀವನಸಾಬ್ ವಾಲಿಕರ್ ಬೇಸರ ವ್ಯಕ್ತಪಡಿಸಿದರು.

ಇತ್ತೀಚಿಗೆ ಗೋತಗಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಅಲ್ಲಿಯ ಜನಪದ ಹಾಗೂ ಒಡವು ಹೇಳುವ ಮಹಿಳೆಯರನ್ನು ಸೇರಿಸಿ ಅವರಿಂದ ನಶಿಸಿ ಹೋಗುವ ಜನಪದ ಗೀತೆಗಳನ್ನು ಹಾಗೂ ಒಡಪುಗಳನ್ನು ಸಂಗ್ರಹಿಸಿಕೊಂಡರು. ಈ ವೇಳೆ ಗ್ರಾಮದ ಮಹಿಳೆಯರು ತಮ್ಮ ಹಳ್ಳಿಯ ಜನಪದ ಗೀತೆಗಳನ್ನು ಹಾಗೂ ಒಡಪುಗಳನ್ನು ಹೇಳಿ ತಮ್ಮ ಮುಂದಿನ ಪೀಳಿಗೆಗಳಿಗೆ ಇವು ಉಪಯುಕ್ತವಾಗಲೆಂದು ತಿಳಿಸಿದರು.

ದೂರದರ್ಶನ, ರೇಡಿಯೊ, ಎಫ್.ಎಂ. ಮುಂತಾದ ಮಾಧ್ಯಮಗಳಲ್ಲಿ ಪಾಶ್ಚಿಮಾತ್ಯ ಸಂಗೀತ, ಚಲನಚಿತ್ರ ಗೀತೆಗಳು, ಧಾರಾವಾಹಿಗಳೇ ಹೆಚ್ಚು ಪ್ರಸಾರವಾಗುತ್ತಿವೆ. ಇವುಗಳ ನಡುವೆ ನಮ್ಮ ಮೂಲ ಸಂಸ್ಕೃತಿಯಾದ ಜಾನಪದ ಗೀತೆಗಳು ಕ್ಷೀಣಿಸುತ್ತಿವೆ. ಸಂಘ ಸಂಸ್ಥೆಗಳ ಸದಸ್ಯರು ಜಾನಪದ ಗೀತೆಗಳ ಕಲಾವಿದರನ್ನು ಗೌರವಿಸಿದಾಗ ಜಾನಪದ ಸಂಪತ್ತು ಉಳಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಜಾನಪದ ಕಲೆಯನ್ನು ಕಲಿತು ಹಾಡು, ಕುಣಿತ ಮಾಡುವುದರಿಂದ ಉಳಿಸಬಹುದು. ಕಲಿಯುವುದು ಕಷ್ಟ ಎಂಬ ಭಾವನೆ ಇದ್ದರೆ ಜಾನಪದ ಗೀತೆಗಳು ಉಳಿಯುವುದಿಲ್ಲ. ಯುವಕರು ಆಸಕ್ತಿಯಿಂದ ಜಾನಪದ ಸಾಹಿತ್ಯ ಹಾಗೂ ಗೀತೆಗಳನ್ನು ಕಲಿತು ಮುಂದಿನ ಜನಾಂಗಕ್ಕೆ ವರ್ಗಾಯಿಸಬೇಕಾಗಿದೆ ಎಂದರು.

ಭಾವಗೀತೆಗಳು ಕವಿ ಹಾಗೂ ಸಾಹಿತಿಗಳ ಮನಸ್ಸಿನ ಅಂತರಾಳದ ಭಾವನೆಗಳಿಂದ ಹುಟ್ಟಿದರೆ, ಜನಪದ ಗೀತೆಗಳು ಗ್ರಾಮೀಣ ಪ್ರದೇಶದ ಜನಪದ ಸಾಹಿತ್ಯಗಳಿಂದ ಹುಟ್ಟುತ್ತವೆ. ಗ್ರಾಮೀಣ ಪ್ರದೇಶದ ಜಾನಪದ ಸೊಬಗನ್ನು ಜನರಲ್ಲಿ ಪರಿಚಯಿಸುತ್ತದೆ. ಹಾಗಾಗಿ ಹೆಚ್ಚು ಹೆಚ್ಚು ಜನಪದ ಹಾಡುಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ದೃಶ್ಯ ಮಾಧ್ಯಮಗಳ ಅಳಿವಿನಿಂದಾಗಿ ನಮ್ಮ ಕಲೆ, ಸಂಸ್ಕೃತಿ ಬಿಂಬಿಸುವಂತರಹ ಜನಪದ ಗೀತೆಗಳು ಕಣ್ಮರೆಯಾಗುತ್ತಿವೆ. ಹಾಗಾಗಿ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿ ಉಳಿಸಬೇಕೆನ್ನುವ ಉದ್ದೇಶದಿಂದ ಕಳೆದ 3-4 ವರ್ಷಗಳಿಂದಲೂ ಅನೇಕ ಜಿಲ್ಲೆಗಳಲ್ಲಿ ಇರುವ ಇಂತಹ ಜನಪದ ಕಲಾವಿದರು ಹುಡುಕಿ ಅವರಿಂದ ಜನಪದ ಸಂಗ್ರಹವನ್ನು ಮಾಡುವ ಕಾರ್ಯವನ್ನು ಮಾಡುತ್ತಿದ್ದೇನೆ. ಈಗಾಗಲೇ ಸುಮಾರು ಸಾವಿರಕ್ಕೂ ಹೆಚ್ಚು ಜಾನಪದಗಳ ಹಾಗೂ ಒಡಪುಗಳ ಸಂಗ್ರಹವನ್ನು ಮಾಡಿದ್ದು, ಜನಪದ ಕಲೆಯಲ್ಲಿ ಪಿ.ಎಚ್.ಡಿ. ಅಧ್ಯಯನ ಮಾಡುತ್ತಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.