ಚಿನ್ನಕ್ಕಿಂತ ಅನ್ನ-ನೀರು ಮುಖ್ಯ


Team Udayavani, May 4, 2019, 3:53 PM IST

kopp-4

ಸಿರುಗುಪ್ಪ: ಜೀವನದಲ್ಲಿ ಮಾನ ಉಳಿಸಲು ಒಳ್ಳೆಯ ಮಾತುಗಳು, ಪ್ರಾಣ ಉಳಿಸಲು ನೀರು ಬೇಕು. ಹಸಿವಾದಾಗ, ಬಾಯಾರಿದಾಗ ನಮಗೆ ಬಂಗಾರ, ವಜ್ರ, ವೈಡೂರ್ಯಗಳು ಉಪಯೋಗಕ್ಕೆ ಬರುವುದಿಲ್ಲ ಎಂದು ಚೀಕಲಕಪರ್ವಿ ಮಠದ ರುದ್ರಮುನಿ ಸ್ವಾಮಿಗಳು ಹೇಳಿದರು.

ತಾಲೂಕಿನ ಹೆರಕಲ್ಲು ಬಳಗನೂರು ಮರಿ ಶಿವಯೋಗಿಗಳ ಮಠದಲ್ಲಿ ನಡೆದ‌ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಆಹಾರ ಮತ್ತು ನೀರಿನ ಸೇವನೆಯಿಂದ ಮಾತ್ರ ಹಸಿವು ನೀಗುತ್ತದೆ. ಅದ್ದರಿಂದ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅನ್ನ, ನೀರು, ಸುಭಾಷಿತ ಈ ಮೂರು ಅಂಶ ಅಳವಡಿಸಿಕೊಳ್ಳಬೇಕು. ಬಂಗಾರದಂತಹ ಲೋಹದ ಮೇಲೆ ವ್ಯಾಮೋಹಗೊಳ್ಳದೇ ನಮ್ಮ ಬದುಕನ್ನೇ ಬಂಗಾರ ಮಾಡಿಕೊಳ್ಳುವತ್ತ ಗಮನ ನೀಡಬೇಕು ಎಂದರು.

ಸಮಾಜದಲ್ಲಿ ಯಾವ ರೀತಿ ಬಾಳಬೇಕು. ಗುರು ಹಿರಿಯರೊಂದಿಗೆ, ಮಾತ-ಪಿತೃಗಳಿಗೆ ಹೇಗೆ ಗೌರವ ನೀಡಬೇಕೆಂದು ತಿಳಿಸಿಕೊಡುವುದೇ ಪುರಾಣ ಪ್ರವಚನಗಳು. ಹಾಲ್ವಿಯ ಮಹಾಂತ ಸ್ವಾಮಿಗಳು ಮೂರು ವರ್ಷದ 6 ತಿಂಗಳ ಕಾಲ ಬಸವ ಪುರಾಣ ಹೇಳಿಸುವ ಮೂಲಕ 150 ವರ್ಷಗಳ ಹಿಂದೆಯೇ ಬಸವ ತತ್ವವನ್ನು ನಾಡಿನಾದ್ಯಂತ ಸಾರಿದರು. ಮನುಷ್ಯ ಮನುಷ್ಯರಾಗಿ ಬಾಳುವುದನ್ನು ಅನ್ನದಾಸೋಹ, ಅಕ್ಷರದಾಸೋಹ, ಮಾನಸಿಕ ನೆಮ್ಮದಿಯನ್ನು ಮಠಗಳು, ಸ್ವಾಮಿಗಳು ನೀಡುತ್ತಾ ಬಂದಿದ್ದಾರೆ. ಭಕ್ತರ ಕಷ್ಟ, ಸುಖಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಂಡುಕೊಡುವ ಮಠದಲ್ಲಿನ ಜೀವಂತ ದೇವರುಗಳೆಂದರೆ ಸ್ವಾಮಿಗಳಾಗಿದ್ದಾರೆ ಎಂದು ತಿಳಿಸಿದರು. ಹಗರಿಬೊಮ್ಮನಹಳ್ಳಿಯ ಹಾಲ ಶಂಕರ ಮಠದ ಹಾಲ ಶಂಕರಸ್ವಾಮೀಜಿ, ಕುಷ್ಟಗಿಯ ಮದ್ದಾನ ಮಠದ ಕರಿಬಸವ ಸ್ವಾಮೀಜಿ, ಹೆರಕಲ್ಲಿನ ಮರಿಶಿವಯೋಗಿಗಳ ಮಠದ ಚಿದಾನಂದ ತಾತನವರು ಆಶೀರ್ವಚನ ನೀಡಿದರು.

ವಟುಗಳಿಗೆ ಅಯ್ನಾಚಾರ ದೀಕ್ಷೆ
ಸಿರುಗುಪ್ಪ: ನಾವು ಮಾಡಿರುವ ಜನ್ಮ ಜನ್ಮಗಳ ಪಾಪ ಪರಿಹಾರವಾಗಿ ಜನ್ಮದಿಂದಲೇ ಮಾನವರಿಗೆ ಅಂಟಿದ ಮಲತ್ರಯಾದಿ ದೋಷಗಳನ್ನು ತೊಡೆದು ಮಾಂಸ ಪಿಂಡವನ್ನು ಮಂತ್ರ ಪಿಂಡವನ್ನಾಗಿಸಿ ಜಂಗಮ ಮೂರ್ತಿಯನ್ನಾಗಿ ಮಾಡುವುದೇ ಅಯ್ನಾಚಾರ ದೀಕ್ಷೆಯ ಉದ್ದೇಶ ಎಂದು ಶಾನವಾಸಪುರ ಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು. ಹಳೇಕೋಟೆ ಗ್ರಾಮದ ಬಳಗನೂರು ಮರಿಶಿವಯೋಗಿಗಳ ಮಠದಲ್ಲಿ 110ನೇ ಪುಣ್ಯಾರಾಧನೆ ಅಂಗವಾಗಿ ಜಂಗಮ ವಟುಗಳಿಗೆ ಅಯ್ನಾಚಾರ ದೀಕ್ಷೆ ನೀಡಿ ಪಂಚಾಕ್ಷರಿ ಶಿವಮಂತ್ರೋಪದೇಶ ನೀಡಿ, ಧರ್ಮೋಪದೇಶ ಮಾಡಿದ ಅವರು, ಯೋಗ್ಯ ಗುರುಗಳಿಂದ ಮಂತ್ರ ದೀಕ್ಷೆ ಪಡೆದ ವಟುಗಳು ಶಿವನ ಸ್ವರೂಪಿಗಳಾಗಿ ಲಿಂಗ, ಪಾದೋದಕ, ರುದ್ರಾಕ್ಷಿ, ಮಂತ್ರ, ಭಸ್ಮ ಸೇರಿದಂತೆ ಅಷ್ಟಾವರಣ, ಪಂಚಾವರ್ಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಜಂಗಮ ಸಮಾಜದವರು ಪ್ರಾಚೀನ ಕಾಲದಿಂದಲೂ ಪರಂಪರೆಯಾಗಿ ಬಂದಿರುವ ದೀಕ್ಷೆಯನ್ನು ತಮ್ಮ ಮಕ್ಕಳಿಗೆ ನೀಡುವ ಮೂಲಕ ಧರ್ಮದ ಹಾದಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು. ಸಿದ್ಧಬಸವ ಸ್ವಾಮೀಜಿ, ಚನ್ನಬಸಯ್ಯ ಶಾಸ್ತ್ರಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.