ಶಿವಮೊಗ್ಗ ಘಟನೆಯಲ್ಲಿ ಕೆ.ಎಸ್.ಈಶ್ವರಪ್ಪ ಪಾತ್ರ ಎದ್ದು ಕಾಣುತ್ತಿದೆ: ಮಾಜಿ ಸಚಿವ ಅನ್ಸಾರಿ
Team Udayavani, Feb 21, 2022, 12:27 PM IST
ಗಂಗಾವತಿ: ಶಿವಮೊಗ್ಗ ನಗರದ ಯುವಕ ಹರ್ಷವರ್ಧನ್ ಕೊಲೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ಪಾತ್ರ ಎದ್ದು ಕಾಣುತ್ತಿದ್ದು ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ ಬಂಧಿಸುವಂತೆ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅನ್ಸಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅವರು ಸೋಮವಾರ ಗಂಗಾವತಿಯ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಚಿವ ಈಶ್ವರಪ್ಪನವರ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಭಾರತದ ಹೆಮ್ಮೆಯ ಕೆಂಪುಕೋಟೆ ಮೇಲೆ ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸುವುದಾಗಿ ಹೇಳಿಕೆ ನೀಡಿರುವ ಈಶ್ವರಪ್ಪ ಒಬ್ಬ ದೇಶದ್ರೋಹಿಯಾಗಿದ್ದಾರೆ .ಸರಕಾರ ಅವರ ಪರವಾಗಿ ನಿಂತಿರುವುದು ಖಂಡನೀಯ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು .ಶಿವಮೊಗ್ಗದಲ್ಲಿ ಜರುಗಿದ ಹರ್ಷ ಅವರ ಕೊಲೆ ಪ್ರಕರಣವನ್ನು ನೇರವಾಗಿ ಮುಸಲ್ಮಾನ ಯುವಕರು ಮಾಡಿದ್ದಾರೆಂದು ಹೇಳುವ ಈಶ್ವರಪ್ಪ ಗಂಗಾವತಿಯಲ್ಲಿ ಮುಸ್ಲಿಂ ಯುವಕರಿಗೆ ಬಿಜೆಪಿ ಕಾರ್ಯಕರ್ತರು ಹೊಡಿಬಡಿಮಾಡಿ ಚೂರಿ ಇರಿತ ಮಾಡಿದ್ದಾರೆ ಇದು ಈಶ್ವರಪ್ಪನವರೇ ಕಣ್ಣಿಗೆ ಕಾಣಲಿಲ್ಲವೇ .ಆದ್ದರಿಂದ ಕೂಡಲೇ ರಾಜ್ಯಪಾಲರು ಸಚಿವ ಸಂಪುಟದಿಂದ ವಜಾ ಮಾಡಬೇಕು .ಅವರನ್ನು ಕೊಲೆ ಆರೋಪದಲ್ಲಿ ಬಂಧಿಸುವಂತೆ ಅನ್ಸಾರಿಯವರು ಒತ್ತಾಯಿಸಿದರು .
ಮಾಜಿ ಸಂಸದ ಎಸ್ ಶಿವರಾಮನಗೌಡ ಕಾಂಗ್ರೆಸ್ ಮುಖಂಡರಾದ ಶಾಮೀದ್ ಮನಿಯಾರ್ ,ಬ್ರೇಸ್ ಗೋನಾಳ್ ಮನೋಹರ್ ಸ್ವಾಮಿ ಫಕೀರಪ್ಪ ಯಮಿ ಸಲ್ಮಾ ಬಿಚ್ಗತ್ತಿ, ನೀಲಕಂಠಪ್ಪ ಹೊಸಳ್ಳಿ ,ಕೆ ರಾಘವೇಂದ್ರ, ಎಸ್ ಬಿ ಖಾದ್ರಿ ಅರ್ಜುನ್ ನಾಯಕ, ಸೋಮನಾಥ ಭಂಡಾರಿ ,ಹನುಮಂತಪ್ಪ ವಳಬಳ್ಳಾರಿ ,ಕಮ್ಲಿಬಾಬಾ ,ರೇಣುಕನಗೌಡ, ಅಂಬಿಗೇರ್ ಅಂಜಿನಪ್ಪ ಸೇರಿ ಅನೇಕರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ