ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಕ್ಕೆ ಕಾಯ್ದೆ ರೂಪಿಸಿ
ತಹಶೀಲ್ದಾರ್ವಿಶ್ವನಾಥ್ ಮುರಡಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
Team Udayavani, Jan 11, 2022, 5:35 PM IST
ಕಾರಟಗಿ: ಆರು ವರ್ಷದೊಳಗಿನ ಮಗುವಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಮಾಡಲು ಪ್ರತ್ಯೇಕ ಕಾಯ್ದೆ ರೂಪಿಸಬೇಕು. ಐಸಿಡಿಎಸ್ ಯೋಜನೆಯನ್ನು ಬಲಪಡಿಸಬೇಕು ಮತ್ತು ಅಂಗನವಾಡಿ ಕೇಂದ್ರಗಳನ್ನು ಗ್ರಾಪಂಗಳಿಗೆ ಕೊಡುವುದನ್ನು ವಿರೋಧಿಸಿ ಪಟ್ಟಣದಲ್ಲಿ ಅಂಗನವಾಡಿ ನೌಕರರ ತಾಲೂಕು ಸಂಘದಿಂದ ಪ್ರತಿಭಟನೆ ನಡೆಯಿತು.
ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ ಸೇರಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರದ ವಿರುದ್ಧಘೋಷಣೆಕೂಗಿ ಗ್ರೇಡ್-2 ತಹಶೀಲ್ದಾರ್ವಿಶ್ವನಾಥ್ ಮುರಡಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ನಂತರ ಅಂಗನವಾಡಿ ನೌಕರರ ಸಂಘದ ತಾಲೂಕಾಧ್ಯಕ್ಷೆ ಅಮರಮ್ಮ ಯರಡೋಣಾ ಮಾತನಾಡಿ, ಅಂಗನವಾಡಿ ಕೇಂದ್ರಗಳನ್ನು ಗ್ರಾಪಂ ಸುಪರ್ದಿಗೆ ವಹಿಸುವುದನ್ನು ಕೈಬಿಡಬೇಕು. ಎಲ್ಕೆಜಿ ಮತ್ತು ಯುಕೆಜಿಯನ್ನು ಪಬ್ಲಿಕ್ ಸ್ಕೂಲ್ನಲ್ಲಿ ಆರಂಭಿಸುವುದನ್ನು ಕೈ ಬಿಟ್ಟು ಐಸಿಡಿಎಸ್ ಯೋಜನೆ ಬಲಪಡಿಸಿ ಅಂಗನವಾಡಿ ಕೇಂದ್ರಗಳಿಗೆ ಶಕ್ತಿ ತುಂಬಬೇಕು. ಇದೇ ಐಸಿಡಿಎಸ್ನ5 ಉದ್ದೇಶಗಳಿಗೆ-ಉಳಿದ ಹೆಚ್ಚುವರಿ ಕೆಲಸ ನಿರ್ಬಂಧಿಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು
ನೀಡಬೇಕು. ಇನ್ನು ಕೊರೊನಾ ಸಂದರ್ಭದಲ್ಲಿ ನಿಧನರಾದ ಕುಟುಂಬದವರಿಗೆ 30 ಲಕ್ಷ ಪರಿಹಾರ ಒದಗಿಸಬೇಕು.
ಕಾರ್ಯಕರ್ತೆಯರಿಗೆ ಕೆಲಸದ ಹೊರೆಯಂತೆ ಗೌರವ ಧನ ಹೆಚ್ಚಿಸಬೇಕು. ಕಾರ್ಯಕರ್ತೆ ಹಾಗೂ ಸಹಾಯಕಿಯರ ವೇನತ ವ್ಯತ್ಯಾಸ ಸರಿಪಡಿಸುವುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗಾಗಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ತಾಲೂಕು ಕಾರ್ಯದರ್ಶಿ ಲಕ್ಷ್ಮೀದೇವಿ ಸಜ್ಜನ್, ಖಜಾಂಚಿ ಅನುಸೂಯಾ ಸಿದ್ದಾಪುರ, ಸುಮಂಗಲಾ ಎಂ., ಅಂಬಮ್ಮ, ಉಮಾದೇವಿ, ರಾಧಾ, ಮಹಾಲಕ್ಷ್ಮೀ, ಜಾಕೀಯಾ, ಸಿದ್ಧಲಿಂಗಮ್ಮ, ರತ್ನಮ್ಮ, ಭಾಗ್ಯಲಕ್ಷ್ಮೀ, ಗಂಗಮ್ಮ, ಶರಣಮ್ಮ, ಸುನೀತಾ, ಗಿರಿಜಾ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ