ಕುಷ್ಟಗಿ: ಡಿಎಪಿ ಹೆಸರಿನಲ್ಲಿ ಸಾವಯವ ಗೊಬ್ಬರ ಮಾರಾಟ ಮಾಡಿ ವಂಚನೆ ; 70 ಚೀಲಗಳು ವಶಕ್ಕೆ
Team Udayavani, May 23, 2022, 7:47 PM IST
ಕುಷ್ಟಗಿ: ಡಿಎಪಿ ಹೆಸರಿನಲ್ಲಿ ಸಾವಯವ ಗೊಬ್ಬರ ಮಾರಾಟ ಮಾಡಿ ರೈತರನ್ನು ವಂಚಿಸುತ್ತಿದ್ದ ರಸ ಗೊಬ್ಬರ ಹಾಗೂ ಕೀಟನಾಶಕ ಮಳಿಗೆಯ ಮೇಲೆ ಕೃಷಿ ಇಲಾಖೆ ಜಾಗೃತ ದಳ ದಾಳಿ ನಡೆಸಿ, 70 ಚೀಲಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಇಲ್ಲಿನ ಬಸವೇಶ್ವರ ವೃತ್ತದ ಶ್ರೀ ಚಂದಾಲಿಂಗೇಶ್ವರ ಎಂಟರ್ ಪ್ರೈಸಸ್ ಈ ಮಳಿಗೆಗೆ ಕೃಷಿ ಇಲಾಖೆಯ ಜಾಗೃತ ದಳದ ತಂಡ ರಸ ಗೊಬ್ಬರ ಸ್ಟಾಕ್ ಪರಿಶೀಲನೆ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.
ಡಿಎಪಿ ಹೆಸರಿನಲ್ಲಿ ಸಾವಯವ ಗೊಬ್ಬರ ಮಾರಾಟ ಮಾಡಲಾಗುತ್ತಿತ್ತು. ಡಿಎಪಿ ಬೆಲೆ 1350 ರೂ. ಪ್ರತಿ ಚೀಲ (50 ಕೆ.ಜಿ) ಇದೆ. ಆದರೆ ಇಲ್ಲಿ ಸಾವಯವ ಗೊಬ್ಬರವನ್ನು ಇದೇ ಡಿಎಪಿ ಎಂದು 800 ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ಸಾವಯವ ಗೊಬ್ಬರದ ಚೀಲದ ಮೇಲೆ 50 ಕೆ.ಜಿ.ಯ ಪ್ರತಿ ಚೀಲಕ್ಕೆ 1,200 ರೂ.ಎಂ.ಆರ್.ಪಿ. ನಮೂದಿಸಲಾಗಿದೆ. ಸದರಿ ಚಂದಾಲಿಂಗೇಶ್ವರ ಎಂಟರ್ ಪ್ರೈಸಸ್ ನವರು ಯಾವುದೇ ಬಿಲ್ ಹಾಕದೇ ಮಾರಾಟ ಮಾಡುತ್ತಿದ್ದರು. ದಾಳಿಯ ವೇಳೆ ಡಿಎಪಿ ಹೆಸರಿನಲ್ಲಿ ಗೊಬ್ಬರ ಮಾರಾಟ ಮಾಡಿದ ಬಗ್ಗೆ ಬಿಲ್ ದಾಖಲಾತಿಗಳು ಲಭ್ಯವಾಗಿಲ್ಲ ಎಂದು ಕೃಷಿ ಇಲಾಖೆ ಜಾಗೃತ ದಳದ ಸಹಾಯಕ ನಿರ್ದೇಶಕ ನಿಂಗಪ್ಪ ಮಾಹಿತಿ ನೀಡಿದರು.
ರೈತರನ್ನು ವಂಚಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಶ್ರೀ ಚಂದಾಲಿಂಗೇಶ್ವರ ಎಂಟರ್ ಪ್ರೈಸಸ್ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ 50 ಕೆ.ಜಿಯ 70 ಚೀಲ ವಶಕ್ಕೆ ತೆಗೆದುಕೊಳ್ಳಲಾಗಿದ್ದು ಇದರ ಮೌಲ್ಯ 89,600 ರೂ. ಅಂದಾಜಿಸಲಾಗಿದೆ.
ಈ ದಾಳಿಯಲ್ಲಿ ಜಾಗೃತ ದಳದ ಸಹಾಯಕ ಕೃಷಿ ನಿರ್ದೇಶಕ ನಿಂಗಪ್ಪ, ಕುಮಾರಸ್ವಾಮಿ, ಕುಷ್ಟಗಿ ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ, ಸಹಾಯಕ ಕೃಷಿ ಅಧಿಕಾರಿ ಪ್ರಮೋದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ