ಸಲಹಾ ಕೇಂದ್ರಗಳಲ್ಲಿ ಎಲ್ಲರಿಗೂ ಉಚಿತ ಕಾನೂನು ನೆರವು
Team Udayavani, Mar 2, 2020, 4:18 PM IST
ಕುಷ್ಟಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ತಾಲೂಕು ಕಾನೂನು ಸಲಹಾ ಕೇಂದ್ರವನ್ನು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧಿಧೀಶರಾದ ಬಿ.ಎಸ್. ಹೊನ್ನುಸ್ವಾಮಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದನ್ವಯ ಕಾನೂನು ಸಲಹಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರಿಗೆ ನೇರವಾಗಿ ಕೋರ್ಟ್ಗೆ ಆಗಮಿಸುವುದಕ್ಕೆ ಭಯ ಇರುತ್ತದೆ. ಕಾನೂನು ಸಲಹೆ ಪಡೆಯಲಿಚ್ಛಿಸುವವರಿಗೆ ಅರ್ಜಿ ಅಗತ್ಯವಿಲ್ಲ. ನೇರವಾಗಿ ಕಾನೂನು ಸಲಹಾ ಕೇಂದ್ರಗಳನ್ನು ಸಂಪರ್ಕಿಸಬೇಕು. ಹೀಗಾಗಿ ಈ ಸಲಹಾ ಕೇಂದ್ರಗಳಲ್ಲಿ ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದಾಗಿದೆ.
ಅಪಘಾತದ ಪ್ರಕರಣಗಳಲ್ಲೂ ಪರಿಹಾರದ ವಿಚಾರವಾಗಿ ನೆರವು ಪಡೆಬಹುದಾಗಿದೆ. ಆರೋಪಿಗಳಿಗೆ ಕಾನೂನು ಅರಿವು ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಕಾನೂನು ಸಲಹಾ ಕೇಂದ್ರ ಅಂತಹವರಿಗೆ ಅರಿವು, ನೆರವು ನೀಡಲಿದೆ. ಆರೋಪಿಗಳಿಗೆ ಕಾನೂನು ನೆರವು ಪಡೆಯಲಿಚ್ಛಿಸುವವರಿಗೆ ಸೂಕ್ತ ಸಲಹೆ ನೀಡಲಿದೆ. ಈ ಸಲಹೆ ಕೇಂದ್ರಕ್ಕೆ ನ್ಯಾಯವಾದಿಯೊಬ್ಬರನ್ನು ನೇಮಿಸಲಿದೆ. ನಮ್ಮ ಸಮಾಜದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಕೌಟುಂಬಿಕ ದೌರ್ಜನ್ಯ ನಡೆಯದಂತೆ ತಡೆಯುವುದು ಬಹು ಮುಖ್ಯವಾಗಿದೆ. ಇತ್ತೀಚಿನ ದಿನಮಾನದಲ್ಲಿ ಕುಟುಂಬದ ಸದಸ್ಯರ ನಡುವೆ ಪ್ರೀತಿ, ವಿಶ್ವಾಸ ಹೊಂದಾಣಿಕೆ ಮನೋಭಾವ ಕಡಿಮೆಯಾಗುತ್ತಿದೆ. ಜನರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ ಕಾನೂನಿನ ಅರಿವು ಮೂಡಿಸುವುದಾಗಿದೆ ಎಂದರು. ಹೆಚ್ಚುವರಿ ನ್ಯಾಯಾಧಿಧೀಶರಾದ ರಫೀಕ್ ಅಹ್ಮದ್, ಸಿಪಿಐ ಜಿ. ಚಂದ್ರಶೇಖರ, ಕೋರ್ಟ್ ಪಿಸಿ ಮಂಜುನಾಥ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ