ಮುಸ್ಲಿಂ ಯುವಕನಿಂದ ಮೂವತ್ತು ಜೋಡಿ ಉಚಿತ ಸಾಮೂಹಿಕ ವಿವಾಹ


Team Udayavani, Nov 30, 2022, 1:41 PM IST

ಮುಸ್ಲಿಂ ಯುವಕನಿಂದ ಮೂವತ್ತು ಜೋಡಿ ಉಚಿತ ಸಾಮೂಹಿಕ ವಿವಾಹ

ಕುಷ್ಟಗಿ: ಇಲ್ಲಿನ ಬನ್ನಿಕಟ್ಟೆ ಸಂತೆ‌ ಮೈದಾನದಲ್ಲಿ ಬುಧವಾರ ಭಗತ್ ಸಿಂಗ್ ಸಾಂಸ್ಕೃತಿಕ ಕ್ರೀಡಾ ಸಂಸ್ಥೆ, ಬನ್ನಿ ಮಹಾಂಕಾಳಿ ಸೇವಾ ಸಮಿತಿ ಅಧ್ಯಕ್ಷ ವಜೀರ ಗೋನಾಳ ನೇತೃತ್ವದಲ್ಲಿ ಆಯೋಜಿಸಿದ್ದ ಸರ್ವ ಧರ್ಮ ವಿವಾಹ ಮಹೋತ್ಸವದಲ್ಲಿ 30 ನವ ಜೋಡಿಗಳು ಹಸೆಮಣೆ ಏರಿದರು.

ಬನ್ನಿಕಟ್ಟೆಯ ಸಂತೆ ಮೈದಾನದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ  ಹಿಂದೂ ಧರ್ಮದ ವಿಧಿ ವಿಧಾನಗಳ ಮೂಲಕ ಶಾಸ್ತ್ರೀಯವಾಗಿ ವಿವಾಹ ಕಾರ್ಯಕ್ರಮ ನೆರವೇರಿಸಲಾಯಿತು. ಕುಷ್ಟಗಿ ಮದ್ದಾನೇಶ್ವರ ಮಠದ ಶ್ರೀ ಕರಿಬಸವ ಶಿವಾಚಾರ್ಯರರ ಸಾನಿಧ್ಯದಲ್ಲಿ 30 ಜೋಡಿಗಳು ಸತಿ-ಪತಿಗಳಾಗಿ ಹೊಸ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಇದೇ ವೇಳೆ ಆಶೀರ್ವಚನ ನೀಡಿದ ಮದ್ದಾನಿಮಠದ ಕರಿಬಸವ ಶಿವಾಚಾರ್ಯ ಸ್ವಾಮೀಜಿ, ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವರ ‌ಹಿತ ಕಾಯಲು ಹಾಗೂ ನೆಮ್ಮದಿ ಜೀವನ ನಡೆಸಲು ಸಾಮೂಹಿಕ ವಿವಾಹಗಳು ‌ಹೆಚ್ಚಾಗಿ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಸಾಮೂಹಿಕ ವಿವಾಹಗಳ ಸಂಖ್ಯೆ ಕ್ಷೀಣಿಸುತ್ತಿವೆ. ಹೀಗಾಗಿ, ಬಡ ಹಾಗೂ ಕೂಲಿಕಾರರಿಗೆ ವಿವಾಹಗಳು ಭಾರವಾಗಿ ಪರಿಣಮಿಸುತ್ತಿವೆ ಇಂತಹ ಸಂದರ್ಬದಲ್ಲಿ ವಜೀರ ಗೋನಾಳ ಅವರು, ಬಡ ಕುಟುಂಬಗಳಿಗೆ ಆಸರೆಯಾಗಲು ವಿವಾಹ ಕಾರ್ಯಕ್ರಮವನ್ನೂ ಅದ್ದೂರಿಯಾಗಿ ನೆರೆವೇರಿಸಿದ್ದಾರೆ.

ಪ್ರತಿ ವರ್ಷ ತಪ್ಪದೇ ಸಾಮೂಹಿಕ ವಿವಾಹ ಕಾರ್ಯಕ್ರಮ ತಪ್ಪದೇ ವಜೀರ ಗೋನಾಳ ಅವರು, ತಮ್ಮ ಮನೆಯ ಕಾರ್ಯಕ್ರಮ ಎನ್ನುವಂತೆ ಆಯೋಜಿಸುತ್ತಾ ಬಂದಿದ್ದಾರೆ ಅವರ ಈ ಸತ್ಕಾರ್ಯಗಳಿಗೆ ಸಮಾಜ, ಸರ್ಕಾರ ಬೆಂಬಲಿಸಬೇಕು ಎಂದರು.

ಹಾಲುಮತ‌ಸಮಾಜದ ಅಧ್ಯಕ್ಷ ಮಲ್ಲಣ್ಣ ಪಲ್ಲೇದ ಮಾತನಾಡಿ, ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ವಜೀರ ಗೋನಾಳ ಆಯೋಜಿಸುತ್ತಿರುವುದು ಪುಣ್ಯದ ಕಾರ್ಯವಾಗಿದೆ ಎಂದರು.

ಇದೇ ವೇಳೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ರಾಮಚಂದ್ರರಾವ್, ಆಯೋಜಕ ವಜೀರ ಗೋನಾಳ, ಅಮರಚಂದ ಜೈನ್, ಮಲ್ಲಿಕಾರ್ಜುನ‌ ಮಸೂತಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸುಮಾ ಬ್ಯಾಳಿ‌ ಮತ್ತೀತರರು ಹಾಜರಿದ್ದರು.

ಹಿಂದೂ-ಮುಸ್ಲಿಂ ಅಸಹಿಷ್ಣುತೆಯ ಸಂದರ್ಭದಲ್ಲಿ ಮುಸ್ಲಿಂ‌ ಸಮುದಾಯದ ವಜೀರ ಗೋನಾಳ ಅವರು, ಕೊರೊನಾ ಎರಡು ವರ್ಷ ಹೊರತುಪಡಿಸಿದರೆ ಪ್ರತಿ ವರ್ಷ ಬನ್ನಿ ಮಹಾಂಕಾಳಿ ದೇವಸ್ಥಾನದ ಮುಂದೆ ಹಿಂದೂ ಧರ್ಮದ ಪದ್ದತಿಯಲ್ಲಿ ಶಾಸ್ತ್ರೀಯವಾಗಿ ಸರ್ವ ಧರ್ಮಿಯರ ವಿವಾಹ ಕಾರ್ಯಕ್ರಮ ನೆರವೇರಿಸಿರುವುದು ಭಾವೈಕ್ಯತೆಗೆ ಮುನ್ನುಡಿಯಾಗಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.