ಸ್ಮಾರ್ಟ್ ಕ್ಲಾಸ್ಗೆ ಧನಸಹಾಯ
Team Udayavani, Mar 22, 2020, 6:22 PM IST
ತಾವರಗೇರಾ: ಸಮೀಪದ ಹಿರೇತೆಮ್ಮಿನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ನ್ನು ಆರಂಭಿಸಲು ಗ್ರಾಮಸ್ಥರೇ ಸಾವಿರಾರು ರೂ. ದೇಣಿಗೆ ಕೊಟ್ಟಿರುವುದು ಮಾದರಿಯಾಗಿದೆ ಎಂದು ವಲಯ ಸಂಪನ್ಮೂಲ ವ್ಯಕ್ತಿ ಶರಣಪ್ಪ ತುಮರಿಕೊಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದ ಹಿರಿಯರು, ಶಿಕ್ಷಣ ಪ್ರೇಮಿಗಳು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು 90 ಸಾವಿರ ರೂ. ಕೊಡುವುದಾಗಿ ವಾಗ್ಧಾನ ಮಾಡಿದ್ದಾರೆ. ಪಾಲಕರ ಸಭೆಯಲ್ಲಿ ಭಾಗಿಯಾಗಿದ್ದ ಈ ದಾನಿಗಳು ಸಭೆಯಲ್ಲಿ 23 ಸಾವಿರ ರೂ. ಸಂಗ್ರಹಿಸಿ ದೇಣಿಗೆ ನೀಡಿದ್ದಾರೆ. ಆದಷ್ಟು ಬೇಗ ಉಳಿದ ಹಣವನ್ನು ನೀಡುವುದಾಗಿ ದಾನಿಗಳು ತಿಳಿಸಿದ್ದಾರೆ ಎಂದು ಸಿಆರ್ಸಿ ಶರಣಪ್ಪ ತುಮರಿಕೊಪ್ಪ ತಿಳಿಸಿದ್ದಾರೆ.
ಶಿಕ್ಷಕರಾದ ಬಸವರಾಜ ಅಂಗಡಿ, ಬಸವರಾಜ ರಡ್ಡಿ, ಗ್ರಾಮಸ್ಥರಾದ ಯಂಕಣ್ಣ ಮಾಸ್ತರ್, ಛತ್ರಪ್ಪ ಕಂಬಳಿ, ಮುದಕಪ್ಪ, ಶ್ಯಾಮಣ್ಣ ಮ್ಯಾದರಡೊಕ್ಕಿ, ಮಹೇಶ ಕನ್ನಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್