ಗಂಗಾವತಿ : ಪೋಲೀಸ್ ಅಧಿಕಾರಿ ಉದಯ ರವಿ ಮನೆಗಳ ಮೇಲೆ ಎಸಿಬಿ ದಾಳಿ
Team Udayavani, Jun 17, 2022, 7:59 AM IST
ಗಂಗಾವತಿ : ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಅಧಿಕಾರಿಯಾಗಿದ್ದ ಪ್ರಸ್ತುತ ಪೊಲೀಸ್ ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಗಂಗಾವತಿ ಮನೆ ಸೇರಿದಂತೆ ವಿವಿಧೆಡೆ ಇರುವ 4 ಮನೆಗಳ ಮೇಲೆ ಎಸಿಬಿ ಡಿವೈಎಸ್ಪಿ ಶಿವಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಆಂಜನೇಯ ನೇತೃತ್ವದ ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ .
ಉದಯರವಿ ಅವರು ಗಂಗಾವತಿ ನಗರ ಠಾಣೆ ಗ್ರಾಮೀಣ ಠಾಣೆಗಳಲ್ಲಿ ಪಿ ಐ ಆಗಿ ಕಾರ್ಯ ನಿರ್ವಹಿಸಿದ್ದರು.ಇತ್ತೀಚೆಗಷ್ಟೇ ಬೆಂಗಳೂರಿಗೆ ಪೊಲೀಸ್ ಗುಪ್ತಚರ ಇಲಾಖೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದರು .ಕೆಲ ಜನಪ್ರತಿನಿಧಿಗಳು ಮತ್ತು ಉದಯ ರವಿ ಅವರ ಮಧ್ಯೆ ಶೀತಲ ಸಮರದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೊಪ್ಪಳಕ್ಕೆ ಭೇಟಿ ನೀಡಿದ್ದ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿಯ ಕೆಲ ಮುಖಂಡರು ದೂರು ಸಲ್ಲಿಸಿ ತನಿಖೆ ನಡೆಸಿ ಮತ್ತು ವರ್ಗಾವಣೆಗೊಳಿಸುವಂತೆ ಒತ್ತಾಯಿಸಿದ್ದರು.
ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಕನಕಗಿರಿ ಭಾಗದಲ್ಲಿ ಮಟ್ಕಾ ಇಸ್ಪೀಟ್ ದಂಧೆ, ಮರಳು ಮಾಫಿಯದ ಹಿಂದೆ ಪೋಲಿಸ್ ಇಲಾಖೆಯ ನೇರವಾಗಿ ಕೈವಾಡವಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.
ನಾಲ್ಕು ಎಸಿಬಿ ದಾಳಿ :ಪೋಲೀಸ್ ಅಧಿಕಾರಿ ಉದಯ ರವಿ ಅವರ ಗಂಗಾವತಿ, ಮುದಗಲ್, ಗಂಗಾವತಿಯ ಬೊಂಬು ಬಜಾರ್ ಮತ್ತು ಆಪ್ತನ ಮನೆ ಸೇರಿ ಒಟ್ಟು 4 ಕಡೆ ಎಸಿಬಿ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ .
ದಾಳಿಯಲ್ಲಿ ಎಸಿಬಿ ಡಿವೈಎಸ್ಪಿ ಶಿವಕುಮಾರ್, ಇನ್ಸ್ಪೆಕ್ಟರ್ ಆಂಜನೇಯ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದು ಎಸಿಬಿ ದಾಳಿ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಪೊಲೀಸ್ ಬಿಗಿ ಭದ್ರತೆ ಒದಗಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ