ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಕೈ ಬಿಡುವಂತೆ ಮನವಿ


Team Udayavani, Oct 15, 2018, 5:10 PM IST

15-october-21.gif

ಗಂಗಾವತಿ: ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಹಳೆ ಮಂಡಲ ಪ್ರದೇಶ ಕೈ ಬಿಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಜನರು ಶಾಸಕ, ಸಂಸದರಿಗೆ ಮನವಿ ಸಲ್ಲಿಸಿದರು. ಈ ವೇಳೆ ಆನೆಗೊಂದಿ ರೈತ ಸಂಘದ ಅಧ್ಯಕ್ಷ ಸುದರ್ಶನ್‌ ವರ್ಮಾ, ವಕೀಲ ಎಚ್‌.ಸಿ. ಯಾದವ್‌, ಪರಶುರಾಮ ಗಡ್ಡಿ ಮಾತನಾಡಿ, 2002ರಿಂದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಆನೆಗೊಂದಿ, ಮಲ್ಲಾಪೂರ, ಸಂಗಾಪೂರ ಮತ್ತು ಸಾಣಾಪೂರ ಗ್ರಾಮ ಪಂಚಾಯತ್‌ ವ್ಯಾಪ್ತಿಯ 15 ಹಳ್ಳಿಗಳನ್ನು ಸೇರ್ಪಡೆ ಮಾಡುವ ಮೂಲಕ ಸರಕಾರ ಈ ಭಾಗದಲ್ಲಿ ಅಭಿವೃದ್ದಿ ಕಾರ್ಯ ನಡೆಯದಂತೆ ನಿಷೇಧ ಹೇರಿದೆ. ವೈಯಕ್ತಿಕ ಶೌಚಾಲಯ ಸೇರಿ ಮನೆಗೆ ವಿದ್ಯುತ್‌ ಸಂಪರ್ಕ, ಶಾಲಾ ಕಾಲೇಜು, ಕುಡಿಯುವ ನೀರಿನ ಕಾಮಗಾರಿ ರಸ್ತೆ ಏನೇ ಕಾಮಗಾರಿ ನಡೆಯಬೇಕಿದ್ದರೆ ಪ್ರಾಧಿಕಾರ ಇರುವ ಹೊಸಪೇಟೆಗೆ ಅಲೆದಾಡಬೇಕಿದೆ. 16 ವರ್ಷಗಳಿಂದ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯಲು ಪ್ರಾಧಿಕಾರದ ಅಧಿಕಾರಿಗಳು ಇನ್ನಿಲ್ಲದ ನಿಯಮಗಳನ್ನು ಮುಂದಿಟ್ಟು ಸ್ಥಗಿತವಾಗಲು ಕಾರಣರಾಗಿದ್ದಾರೆ. 

ಪ್ರವಾಸಿಗರು ಆಗಮಿಸುವ ಪ್ರದೇಶವಾಗಿದ್ದರೂ ಮೂಲಸೌಕರ್ಯ ಕಲ್ಪಿಸಲು ಆಗುತ್ತಿಲ್ಲ. ಹೊಸಪೇಟೆಯ ಖಾಸಗಿ ಹೋಟೆಲ್‌ ಮತ್ತು ರೆಸಾರ್ಟ್‌ ಮಾಲೀಕರ ಲಾಭಿಯಿಂದ ಪ್ರಾಧಿಕಾರ ಆನೆಗೊಂದಿ ಭಾಗದ ಜನರಿಗೆ ಅನ್ಯಾಯ ಮಾಡುತ್ತಿದೆ. ಹೊಸಪೇಟೆ ತಾಲೂಕಿನಲ್ಲಿ ಪ್ರಾಧಿಕಾರದ ವ್ಯಾಪ್ತಿಗೆ 14 ಹಳ್ಳಿಗಳು ಬರುತ್ತಿದ್ದು, ಇಲ್ಲಿ ಮಾತ್ರ ಖಾಸಗಿ ಸ್ಟಾರ್‌ ಹೊಟೇಲ್‌ಗ‌ಳು ರೆಸಾರ್ಟ್‌ಗಳು ತಲೆ ಎತ್ತಿವೆ. ಆನೆಗೊಂದಿ ವಿರೂಪಾಪೂರಗಡ್ಡಿ, ಸಾಣಾಪೂರ ಜಂಗ್ಲಿ ಇಲ್ಲಿ ಒಂದು ಗುಡಿಸಲು ನಿರ್ಮಿಸಬೇಕಾದರೂ ಪ್ರಾಧಿಕಾರದಿಂದ ನಿರಾಪೇಕ್ಷಣಾ ಪತ್ರ ಬೇಕು ಇದು ಮಲತಾಯಿ ಧೋರಣೆಯಾಗಿದೆ. ಪುರಾತನ ಕಾಲದಿಂದಲೂ ಇಲ್ಲಿರುವ ಸ್ಮಾರಕ ಗುಡಿಗುಂಡಾರಗಳನ್ನು ಸ್ಥಳೀಯರು ಸಂರಕ್ಷಣೆ ಮಾಡುತ್ತಿದ್ದು ಪ್ರಾಧಿಕಾರ ಏನು ಮಾಡಿಲ್ಲ. ಕಾರಣ ಅತ್ಯಂತ ಹಿಂದುಳಿದ ಆನೆಗೊಂದಿ ಹಳೆಯ ಮಂಡಲವನ್ನು ಪ್ರಗತಿಯ ವಾಹಿನಿಗೆ ತೆಗೆದುಕೊಂಡು ಹೋಗಲು ಕೂಡಲೇ ಪ್ರಾಧಿಕಾರ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಸಿದ್ದರಾಮಯ್ಯ, ಆನೆಗೊಂದಿ ಭಾಗದ ನರಸಿಂಹಲು ಸಾಣಾಪೂರ, ದ್ಯಾಮಣ್ಣ, ಕಡೆಬಾಗಿಲು ಪ್ರಸಾದ, ಕೆ. ವೆಂಕಟೇಶ, ಪದ್ಮನಾಭರಾಜು, ಚಂದ್ರಶೇಖರ ಸುಂಕದ, ಮಲ್ಲಿಕಾರ್ಜುನಸ್ವಾಮಿ ಸೇರಿ ಅನೇಕರಿದ್ದರು. 

ರಾಜ್ಯ-ಕೇಂದ್ರ ಸರಕಾರಕ್ಕೆ ಮನವಿ
ಹಂಪಿ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು ಇಲ್ಲಿರುವ ಸ್ಮಾರಕಗಳ ಸಂರಕ್ಷಣೆ ನಮ್ಮೆಲ್ಲರ ಮೇಲಿದೆ. ಹಂಪಿ ಅಭಿವೃದ್ಧಿ ಪ್ರಾಧಿಕಾರದ ರಚನೆ ಉದ್ದೇಶವೂ ಇದೇ ಆಗಿದೆ. ಆದರೆ ಕೆಲ ಅಧಿಕಾರಿಗಳು ಸ್ಥಳೀಯರನ್ನು ಮತ್ತು ಚುನಾಯಿತರನ್ನು ನಿರ್ಲಕ್ಷ್ಯ ಮಾಡಿ ಸಭೆ ಸಮಾರಂಭ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದು ಆನೆಗೊಂದಿ ಭಾಗಕ್ಕೆ ಅನ್ಯಾಯವಾಗಿದೆ. 2007ರಲ್ಲಿ ಕಾರಿಗನೂರು ಗ್ರಾಮವನ್ನು ಪ್ರಾಧಿಕಾರದಿಂದ ಕೈಬಿಡಲಾಗಿದ್ದು ಯಾವ ಮಾನದಂಡ ಅನುಸರಿಸಲಾಗಿದೆ ಎನ್ನುವುದನ್ನು ಪ್ರಾಧಿಕಾರದ ಮುಖ್ಯಸ್ಥರ ಜತೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿತ್ತದೆ. ಸ್ಥಳೀಯರ ಹಿತ ಕಾಪಾಡಲು ಸಿದ್ಧ.
 ಕರಡಿ ಸಂಗಣ್ಣ, ಸಂಸದರು

ಪ್ರಾಧಿಕಾರ ಅಡ್ಡಿ
ಆನೆಗೊಂದಿ ಹಳೆಯ ಮಂಡಲ ವ್ಯಾಪ್ತಿಯಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಜನತೆಗೆ ಮೂಲಸೌಕರ್ಯ ಕಲ್ಪಿಸುವ ಯೋನೆಗಳಿಗೂ ಅಡ್ಡಿಯಾಗಿದೆ. ಕುಡಿಯುವ ನೀರು ರಸ್ತೆ ಶಾಲಾ ಕಾಲೇಜು ನಿರ್ಮಾಣಕ್ಕೂ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ. ಆದ್ದರಿಂದ ಪ್ರಾಧಿಕಾರ ವ್ಯಾಪ್ತಿಯಿಂದ ತಾಲೂಕಿನ 15 ಹಳ್ಳಿಗಳನ್ನು ಕೈಬಿಡುವಂತೆ ಸರಕಾರಕ್ಕೆ ಮನವಿ ಮಾಡಲಾಗುತ್ತದೆ.
 ಪರಣ್ಣ ಮುನವಳ್ಳಿ, ಶಾಸಕರು

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.