Gangavathi: ಪ್ರವಾಸೋದ್ಯಮದಿಂದ ಉದ್ಯೋಗ ಸೃಷ್ಟಿ‌


Team Udayavani, Dec 18, 2023, 6:18 PM IST

Gangavathi: ಪ್ರವಾಸೋದ್ಯಮದಿಂದ ಉದ್ಯೋಗ ಸೃಷ್ಟಿ‌

ಗಂಗಾವತಿ: ವಿಶ್ವದ ಬಹುತೇಕ ದೇಶಗಳು ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿವೆ. ಪ್ರವಾಸೋದ್ಯಮ ಬದಲಾಗುತ್ತಿರುವ
ಕ್ಷೇತ್ರವಾಗಿದ್ದು, ಇದಕ್ಕೆ ಭಾರತೀಯ ಪ್ರವಾಸೋದ್ಯಮ ಹೊಂದಿಕೊಂಡರೆ ಮಾತ್ರ ಆರ್ಥಿಕ ಲಾಭವಾಗುತ್ತದೆ. ಕಿಷ್ಕಿಂಧಾ, ಗಂಗಾವತಿ ಪ್ರವಾಸೋದ್ಯಮದಿಂದ ನೇರ ಮತ್ತು ಪರೋಕ್ಷ ಉದ್ಯೋಗ ಲಭಿಸಿ ಆರ್ಥಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಪ್ರೊ| ಎಸ್‌. ಕರಿಗೂಳಿ ಹೇಳಿದರು.

ಅವರು ನಗರದ ಶ್ರೀ ಕೃಷ್ಣದೇವರಾಯ ಕಲಾಭವನದಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಮಿತಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪ್ರವಾಸೋದ್ಯಮ ಮತ್ತು ಭವಿಷ್ಯದ ಗಂಗಾವತಿ ಎನ್ನುವ ವಿಷಯ ಕುರಿತು ಮಾತನಾಡಿದರು.

ಗಂಗಾವತಿ ಐತಿಹಾಸಿಕವಾದ ಹಲವು ಪ್ರವಾಸಿ ತಾಣಗಳನ್ನು ಹೊಂದಿದ್ದು, ಇವುಗಳು ರಾಮಾಯಣ, ಮಹಾಭಾರತ ಸೇರಿದಂತೆ
ಭಾರತದ ಪವಿತ್ರ ಗ್ರಂಥಗಳಲ್ಲಿ ಪ್ರಸ್ತಾಪವಾಗಿರುವ ಸ್ಥಳಗಳಾಗಿವೆ. ಆದ್ದರಿಂದ ವಿಶ್ವದ ಪ್ರವಾಸಿ ಕ್ಷೇತ್ರಗಳಲ್ಲಿ ಸ್ಥಾನ ಪಡೆದುಕೊಂಡಿರುವುದರಿಂದ ಹಲವು ದಶಕಗಳಿಂದ ಇಲ್ಲಿಗೆ ದೇಶ ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದು, ಇದರಿಂದ ನೇರ, ಪರೋಕ್ಷ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಶಕ್ತಿ ಬರುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಆನೆಗೊಂದಿ ಭಾಗ ಸೇರಿದಂತೆ ಕಿಷ್ಕಿಂಧಾ ಅಂಜನಾದ್ರಿ, ಹೇಮಗುಡ್ಡ, ಹಳೆ ಶಿಲಾಯುಗದ ಮೊರ್ಯರ ಬೆಟ್ಟ, ಕುಮ್ಮಟದುರ್ಗ ಸ್ಥಳಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶ್ವಕ್ಕೆ ಇನ್ನಷ್ಟು ಮಾಹಿತಿ ನೀಡಬೇಕಿದೆ.

ಪ್ರಾಕೃತಿಕ ಆನೆಗೊಂದಿ, ಸಾಣಾಪುರ ಭಾಗದಲ್ಲಿರುವ ಪ್ರಾಕೃತಿಕ ಬೆಟ್ಟಗಳ ಸೌಂದರ್ಯವನ್ನು ಪ್ರಚಾರ ಪಡಿಸಬೇಕಿದೆ. ತುಂಗಭದ್ರಾ ನದಿಯಲ್ಲಿ ನೈಸರ್ಗಿಕವಾಗಿ ಸೃಷ್ಟಿಯಾಗಿರುವ ಫಾಲ್ಸ್‌ಗಳ ಕುರಿತ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಪ್ರಚಾರ ನೀಡಬೇಕಿದೆ ಎಂದರು.

ಪ್ರವಾಸೋದ್ಯಮ ಬೆಳವಣಿಗೆ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ ಒಳಗೊಂಡಂತೆ ರೆಸಾರ್ಟ್‌ಗಳನ್ನು ಆಧುನಿಕವಾಗಿ ಸಿದ್ಧಪಡಿಸಬೇಕಿದೆ. ಅಕ್ರಮವಾಗಿ ನಡೆಯುವ ರೆಸಾರ್ಟ್‌, ಹೋಟೆಲ್‌ ಉದ್ಯಮಗಳನ್ನು ಕಾನೂನು ಬದ್ಧಗೊಳಿಸಿ
ಅಕ್ರಮ ಚಟುವಟಿಕೆ ತಡೆಯಬೇಕಿದೆ. ಇದರಿಂದ ಕಿಷ್ಕಿಂಧಾ, ಅಂಜನಾದ್ರಿ ಸುತ್ತಲಿನ ಪ್ರದೇಶದಲ್ಲಿ ಪ್ರವಾಸೋದ್ಯಮದ ಬೆಳವಣಿಗೆ ಸಾಧ್ಯವಾಗುತ್ತದೆ.

ಪ್ರವಾಸೋದ್ಯಮ ಕ್ಷೇತ್ರಗಳಿಗೆ ರಸ್ತೆ, ರೈಲ್ವೆ,ಸೇರಿದಂತೆ ವಿಮಾನ ಸಂಪರ್ಕ ಜೋಡಿಸಬೇಕಿದೆ. ಈ ಹಿಂದೆ ಅಧಿಕ ಭತ್ತವನ್ನು ಬೆಳೆಯುವ ಮೂಲಕ ಭತ್ತದ ಕಣಜ ಎಂದು ಗಂಗಾವತಿಯನ್ನು ಗುರುತಿಸಲಾಗುತ್ತಿತ್ತು. ಜಾಗತೀಕರಣದ ಪರಿಣಾಮ ಎಲ್ಲೆಡೆ ಭತ್ತ ಬೆಳೆಯಲಾಗುತ್ತಿದೆ. ಆದ್ದರಿಂದ ಗಂಗಾವತಿ ಸುತ್ತಮುತ್ತ ಇದ್ದ 180ಕ್ಕೂ ಹೆಚ್ಚು ರೈಸ್‌ ಮಿಲ್‌ಗ‌ಳು ಮುಚ್ಚುವ ಸ್ಥಿತಿಯಲ್ಲಿದ್ದು, ಮಿಲ್‌ ಗಳನ್ನು ನಂಬಿಕೊಂಡಿದ್ದ ಕಾರ್ಮಿಕ ವಲಯಕ್ಕೆ ಪುನರ್ವಸತಿ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ಗಂಗಾವತಿ ರೈಲ್ವೆ ನಿಲ್ದಾಣದಿಂದ ಪ್ರವಾಸಿ ತಾಣಗಳ ಪರಿಚಯದ ಫಲಕ ಅಳವಡಿಸಬೇಕು. ಈಗಾಗಲೇ ವಿಶ್ವ ಪಾರಂಪರಿಕ ಪಟ್ಟಿಯಲ್ಲಿರುವ ಆನೆಗೊಂದಿ ಭಾಗವನ್ನು ಜಗತ್ತಿಗೆ ಇನ್ನಷ್ಟು ಪರಿಚಯಿಸುವ ಜೊತೆಗೆ 3 ಸಾವಿರ ವರ್ಷಗಳ ಹಿಂದಿನ ಶಿಲಾಯುಗದ ಜನರ ಮನೆ ಮತ್ತು ಸ್ಮಾರಕಗಳಿರುವ ಹಿರೇಬೆಣಕಲ್‌ ಮೊರ್ಯರ ಬೆಟ್ಟ ವಿಶ್ವ ಪಾರಂಪರಿಕ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಇಲ್ಲಿಗೆ ಹೋಗಲು ರಸ್ತೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವ ವಾತಾವರಣ ನಿರ್ಮಿಸಬೇಕು ಎಂದರು.

ಶಾಸಕ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಪ್ರವಾಸೋದ್ಯಮಕ್ಕೆ ಗಂಗಾವತಿ ಕ್ಷೇತ್ರದಲ್ಲಿ ವಿಫಲ ಅವಕಾಶಗಳಿವೆ. ಈಗಾಗಲೇ ಈ ಹಿಂದಿನ ಸರಕಾರ ಅಂಜನಾದ್ರಿ ಬೆಟ್ಟಕ್ಕೆ 120 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ರಸ್ತೆ, ಕುಡಿಯುವ ನೀರು ಸೇರಿ ಮೂಲಸೌಕರ್ಯಗಳಿಗೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಪಡೆಯುವ ಮೂಲಕ ಹಾಲಿ ಶಾಸಕರು ಕಾರ್ಯ ಮಾಡಬೇಕಿದೆ ಎಂದರು.

ಡಿವೈಎಸ್ಪಿ ಸಿದ್ಧಲಿಂಗಪ್ಪಗೌಡ ಪಾಟೀಲ್‌ ಮಾತನಾಡಿ, ಪ್ರವಾಸೋದ್ಯಮದ ಮೂಲಕ ವಿಶ್ವದ ಅನೇಕ ದೇಶಗಳು ಆರ್ಥಿಕ ಸದೃಢತೆ ಹೊಂದಿವೆ. ನಮ್ಮ ಭಾಗದಲ್ಲಿಯೂ ಹೋಟೆಲ್‌ ಸೇರಿದಂತೆ ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬೇಕೆಂದರು.

ನ್ಯಾಯವಾದಿ ನಾಗರಾಜ ಗುತ್ತೇದಾರ ಮತದಾನದ ಮಹತ್ವ ಕುರಿತು ಮಾತನಾಡಿದರು. ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ್‌ ಮೇಗಳಮನಿ, ದಲಿತ ಮುಖಂಡ ಹಂಪೇಶ ಅರಿಗೋಲು, ನಗರಸಭೆ ಸದಸ್ಯ ನವೀನಕುಮಾರ, ಕರವೇ ರಾಜ್ಯಾಧ್ಯಕ್ಷ ಅರ್ಜುನ ನಾಯಕ, ಈರಣ್ಣ ಬಡಿಗೇರ, ಡಾ| ಶಿವಕುಮಾರ್‌ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಸ್ವಾಭಿಮಾನ ಕರವೇ ಅಧ್ಯಕ್ಷ ರಾಜೇಶರೆಡ್ಡಿ ಸೇರಿದಂತೆ ಸಮಿತಿ ಪದಾಧಿಕಾರಿಗಳಿದ್ದರು.

ರಾಜ್ಯೋತ್ಸವ ಪ್ರಶಸ್ತಿ ಪಡೆದ ವಿಭೂತಿ ಗುಂಡಪ್ಪ, ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕೆ. ನಿಂಗಜ್ಜ, ಪೊಲೀಸ್‌ ಅಧಿಕಾರಿ ಶಾರದಮ್ಮ, ಮೈಲಾರಪ್ಪ, ಬಸವರಾಜ್‌, ರಂಗಭೂಮಿ ಕಲಾವಿದರಾದ ಜೀ. ವಂದನಾ, ಪತ್ರಕರ್ತ ನಾಗರಾಜ ಇಂಗಳಿ, ಬಿ. ಅಶೋಕ ಸೇರಿದಂತೆ ಹಲವು ಸಾಧಕರನ್ನುಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.