ಗಂಗಾವತಿ: ಚಿರತೆ, ಕರಡಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ
Team Udayavani, Nov 6, 2020, 9:27 AM IST
ಗಂಗಾವತಿ: ಆನೆಗೊಂದಿಯ ಯುವಕನನ್ನು ಬಲಿ ಪಡೆದ ಮತ್ತು ವಿವಿಧ ಗ್ರಾಮಗಳ ಹಲವರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಚಿರತೆ ಹಾಗೂ ಕರಡಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮಕೈಗೊಂಡಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಪ್ರಾದೇಶಿಕ ಬಳ್ಳಾರಿ ವಲಯ ಅಧಿಕಾರಿ ಲಿಂಗರಾಜ ನೇತೃತ್ವದಲ್ಲಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ.
ಆನೆಗೊಂದಿ ಅಂಜನಾದ್ರಿ ಮಲ್ಲಾಪೂರ ಸಾಣಾಪೂರ ಜಂಗ್ಲಿ ರಂಗಾಪೂರ ಭಾಗದ ಬೆಟ್ಟ ಪ್ರದೇಶಗಳ ಆಯ್ದ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಡ್ರೋಣ್ ಕ್ಯಾಮರಾ ಮೂಲಕ ಗುಡ್ಡದ ಗವಿಯಲ್ಲಿ ಅಡಗಿ ಕುಳಿತಿರುವ ಚಿರತೆ ಕರಡಿಗಳನ್ನು ಪತ್ತೆ ಮಾಡಲಾಗುತ್ತಿದೆ.
ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ಗಸ್ತುಕಾರ್ಯ ಮಾಡಲಾಗುತ್ತಿದೆ. ಆದಿಶಕ್ತಿ ದೇಗುಲ ಪಂಪಾಸರೋವರ ಅಂಜನಾದ್ರಿ ಬೆಟ್ಟ ಸೇರಿ ಕಾಡುಪ್ರಾಣಿಗಳ ಉಪಟಳ ಇರುವ ಸ್ಥಳದಲ್ಲಿ ಬೋನುಗಳನ್ನು ಇರಿಸಲಾಗಿದೆ. ರಾತ್ರಿ ವೇಳೆ ಸಂಚಾರ ಮಾಡದಂತೆ ಆನೆಗೊಂದಿ ಹಳೆಯಮಂಡಲದ ಗ್ರಾಮಗಳ ಜನರಿಗೆ ಸೂಚನೆ ನೀಡಲಾಗಿದೆ.
ಮತ್ತೆ ಚಿರತೆ ಪ್ರತ್ಯಕ್ಷ: ಆನೆಗೊಂದಿ ಆದಿಶಕ್ತಿ ದೇಗುಲದ ಹಿಂಭಾಗದಲ್ಲಿ ಗುರುವಾರ ಯುವಕನೊರ್ವನನ್ನು ಚಿರತೆ ಕೊಂದು ಹಾಕಿದ ಬಳಿಕ ಪಂಪಾಸರೋವರ ಜಂಗ್ಲಿ ರಂಗಾಪೂರ, ಹನುಮನಹಳ್ಳಿ ಬೆಟ್ಟದಲ್ಲಿ ಗುರುವಾರ ಸಂಜೆ ಕರಡಿ ಹಾಗೂ ಚಿರತೆಗಳು ಪ್ರತ್ಯಕ್ಷವಾಗಿದ್ದು ಜನರಲ್ಲಿ ಭಯವುಂಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?