ಗಂಗಾವತಿ ಬಾಲಕಿಯರ ಶಾಲೆ ಮಕ್ಕಳು-ಪಾಲಕರಿಗೆ ಅಚ್ಚುಮೆಚ್ಚು 

­ಶಿಥಿಲಾವಸ್ಥೆಯಲ್ಲಿ 72 ವಸಂತ ಕಂಡ ಶಾಲೆ ಕೊಠಡಿಗಳು

Team Udayavani, May 16, 2022, 5:17 PM IST

19

ಗಂಗಾವತಿ: ಕೊರೊನಾ ಮಹಾಮಾರಿ ಪರಿಣಾಮದಿಂದ ತತ್ತರಿಸಿ, ಯಶಸ್ವಿಯಾಗಿ ಅರ್ಧ ಶೈಕ್ಷಣಿಕ ವರ್ಷದ ನಂತರ ಇದೀಗ ಪುನಃ ಶಾಲೆಗಳು ಮೇ 16ರಿಂದ ಆರಂಭವಾಗುತ್ತಿದ್ದು, ತಾಲೂಕಿನಾದ್ಯಂತ ಶಿಕ್ಷಣ ಇಲಾಖೆ ಶಾಲಾರಂಭವನ್ನು ವೈಶಿಷ್ಟ್ಯದಿಂದ ಮಾಡಲು ಯೋಜನೆ ರೂಪಿಸಿದೆ. ಈಗಾಗಲೇ ಶಾಲೆಯ ಮುಖ್ಯಗುರುಗಳಿಗೆ ಸೂಚನೆ ನೀಡಿದೆ.

ಗಂಗಾವತಿ ನಗರದ ಮಧ್ಯೆ ಭಾಗದಲ್ಲಿರುವ ಸರಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲೂ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಈ ಶಾಲೆಗೆ 72 ವಸಂತಗಳು ತುಂಬಿದ್ದು, ಇಲ್ಲಿ ಓದಿದ ಸಾವಿರಾರು ವಿದ್ಯಾರ್ಥಿನಿಯರು ಅಮೋಘ ಸಾಧನೆ ಮಾಡಿದ್ದಾರೆ.

ಶಾಲೆಗೆ ಸ್ವಂತ ಮೈದಾನವಿದ್ದು, 26 ಕೊಠಡಿಗಳಿವೆ. ಮಕ್ಕಳಿಗೆ ಶೌಚಾಲಯ, ಗ್ರಂಥಾಲಯ, ಕಂಪ್ಯೂಟರ್‌ ಕಲಿಕೆ ಸೇರಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳನ್ನು ಬೋಧಿಸಲಾಗುತ್ತಿದೆ. 1-8 ಕನ್ನಡ ಮತ್ತು 6-8 ಆಂಗ್ಲ ಮಾಧ್ಯಮ ವಿಭಾಗ 7 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಶಾಲೆಯಲ್ಲಿ ಸದ್ಯ 460 ವಿದ್ಯಾರ್ಥಿನಿಯರಿದ್ದು, 15 ಶಿಕಕ್ಷ-ಶಿಕ್ಷಕಿಯರಿದ್ದಾರೆ. ಚಿತ್ರಕಲಾ ಶಿಕ್ಷಕರ ಹುದ್ದೆ ಖಾಲಿ ಇದೆ. ಶಾಲೆಯಲ್ಲಿ ಸರಕಾರದ ಯೋಜನೆಗಳಾದ ಸೈಕಲ್‌ ವಿತರಣೆ, ಬಿಸಿಯೂಟ, ಸಮವಸ್ತ್ರ, ಪ್ರವಾಸ, ಉಚಿತ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತದೆ. ಎಲ್ಲ ಕಂಪ್ಯೂಟರ್‌ಗಳು ದುರಸ್ತಿ ಇರುವ ಕಾರಣ ಪ್ರಾಯೋಗಿಕ ತರಗತಿ ನಡೆಯುತ್ತಿಲ್ಲ. ತರಬೇತಿ ಪಡೆದ ಶಿಕ್ಷಕ-ಶಿಕ್ಷಕಿಯರು ಇರುವುದರಿಂದ ಉತ್ತಮ ಬೋಧನೆಯಿಂದ ಈ ಶಾಲೆ ವಿದ್ಯಾರ್ಥಿನಿಯರ ಮತ್ತು ಪಾಲಕರ ಮನಗೆದ್ದಿದೆ.

ಈ ಶಾಲೆಯ ಕೆಲ ಕೊಠಡಿಗಳು 50 ವರ್ಷಗಳ ಹಿಂದೆ ನಿರ್ಮಿಸಿರುವುದರಿಂದ ಶಿಥಿಲಾವಸ್ಥೆ ತಲುಪಿವೆ. ಸುಮಾರು 10 ಕೊಠಡಿಗಳ ಮೇಲ್ಛಾವಣಿ ಕಾಂಕ್ರೀಟ್‌ ಉದುರಿ ಬೀಳುತ್ತಿದೆ. ಹಲವು ವರ್ಷಗಳಿಂದ ಶಾಲೆಯ ಗೋಡೆಗಳು ಸುಣ್ಣ, ಬಣ್ಣ ಕಾಣದೇ ಮಾಸಿ ಹೋಗಿವೆ. ಶಾಲಾ ಆವರಣದಲ್ಲಿರುವ ಕೈ ತೋಟದ ಸಣ್ಣಪುಟ್ಟ ಗಿಡ ಮರಗಳು ಒಣಗುತ್ತಿವೆ. ಸುತ್ತಲಿನ ತಂತಿ ಬೇಲಿಯನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ.

ಶಾಲೆಯಲ್ಲಿ ದಾನಿಗಳ ನೆರವಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಾದರೂ 460 ವಿದ್ಯಾರ್ಥಿನಿಯರಿಗೆ ಇದು ಸಾಲುತ್ತಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಈ ಶಾಲಾವರಣ ಕೆರೆಯಂತೆ ಕಂಡು ಬರುತ್ತಿದೆ. ಇಡೀ ಆವರಣ ಗುಂಡಿ ಪ್ರದೇಶವಾಗಿರುವುದರಿಂದ ಮಳೆ ನೀರು ವಾರಗಟ್ಟಲೇ ನಿಲ್ಲುತ್ತದೆ. ವಿದ್ಯಾರ್ಥಿನಿಯರು, ಬೋಧಕರು ಇದರಲ್ಲಿಯೇ ಓಡಾಡುವ ಸ್ಥಿತಿ ಇದೆ. ಈ ಶಾಲೆಯಲ್ಲಿ ಕೆಲ ಮೂಲಸೌಕರ್ಯ ಕೊರತೆ ಹೊರತು ಪಡಿಸಿದರೆ ಉಳಿದಂತೆ ಮಾದರಿಯಾಗಿದೆ.

ಈಗಾಗಲೇ ಸರಕಾರದ ಸೂಚನೆಯಂತೆ ಮೇ 16ರಿಂದ ಶಾಲಾರಂಭ ಮಾಡಲಾಗುತ್ತದೆ. ತಳೀರು, ತೋರಣ ಕಟ್ಟಿ ಇಡೀ ಶಾಲಾ ಮೇಲುಸ್ತುವಾರಿ ಸಮಿತಿ ಮತ್ತು ನಗರಸಭೆಯ ಸದಸ್ಯರ ನೇತೃತ್ವದಲ್ಲಿ ಸುತ್ತಲಿನ ವಾರ್ಡ್‌ಗಳಲ್ಲಿ ಜಾಥಾ ನಡೆಸಲಾಗುತ್ತದೆ. ಗುಲಾಬಿ ಹೂವು ನೀಡಿ ವಿದ್ಯಾರ್ಥಿನಿಯರನ್ನು ಸ್ವಾಗತಿಸಲಾಗುತ್ತದೆ. ನಮ್ಮ ಶಾಲೆಯಲ್ಲಿ ಆಂಗ್ಲ-ಕನ್ನಡ ಮಾಧ್ಯಮಗಳಿದ್ದು, ಎರಡಕ್ಕೂ ಬೇಡಿಕೆ ಇದೆ. ಬಿಇಒ ಸೇರಿ ಇಲಾಖೆ ಅಧಿಕಾರಿಗಳು ನಮ್ಮ ಶಾಲೆಯ ಬಗ್ಗೆ ಕಾಳಜಿ ಹೊಂದಿದ್ದಾರೆ. 6 ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. –ಬಲಭೀಮಾಚಾರ್ಯ ಜೋಶಿ ಮುಖ್ಯ ಶಿಕ್ಷಕ             ಕೆ. ನಿಂಗಜ್ಜ 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.