ಆಹಾರ ಧಾನ್ಯ-ವೈದ್ಯಕೀಯ ಸೌಕರ್ಯಕ್ಕೆ ಸೂಚನೆ
ಶಾಸಕರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷರ ವಿಡಿಯೋ ಕಾನ್ಫರೆನ್ಸ್ ಭತ್ತದ ಬೆಳೆ ಹಾನಿ ಪರಿಹಾರಕ್ಕೆ ಮನವಿ
Team Udayavani, Apr 12, 2020, 5:16 PM IST
ಗಂಗಾವತಿ: ನಳೀನಕುಮಾರ ಕಟೀಲ್ ಜೊತೆ ಶಾಸಕ ಪರಣ್ಣ ಮುನವಳ್ಳಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದರು.
ಗಂಗಾವತಿ: ಕೊವೀಡ್-19 ರೋಗದ ಹಿನ್ನೆಲೆಯಲ್ಲಿ ಜನರು ಕೆಲಸವಿಲ್ಲದೇ ಹಲವು ದಿನಗಳಿಂದ ಮನೆಯಲ್ಲಿದ್ದು, ಜನರಿಗೆ ಆಹಾರ ಮತ್ತು ವೈದ್ಯಕೀಯ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ ಕಟೀಲ್ ಸೂಚಿಸಿದ್ದಾರೆ.
ಅವರು ಶನಿವಾರ ಶಾಸಕರ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ಕೋವಿಡ್ ವೈರಸ್ ಹರಡದಂತೆ ಕರ್ಫ್ಯೂ ವಿಧಿಸಲಾಗಿದೆ. ದೇಶದಲ್ಲಿ ಅಗತ್ಯ ವೈದ್ಯಕೀಯ ಸೇವೆ ಮಾಡಲಾಗುತ್ತಿದೆ. ಪ್ರತಿದಿನ ದುಡಿದು ತಿನ್ನುವ ಬಡವರಿಗೆ ಬಿಜೆಪಿ ಕಾರ್ಯಕರ್ತರು ಅಗತ್ಯ ಸೌಕರ್ಯ ನೀಡಬೇಕು. ದಾನಿಗಳು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಹೇರಳ ದೇಣಿಗೆ ನೀಡಿ ಜನರ ಸಂಕಷ್ಟದಲ್ಲಿ ಪ್ರಧಾನಿ ಮೋದಿಯವರಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಕೊರೊನಾ ವಿರುದ್ಧ ಜಿಲ್ಲೆಯ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಯವರು ಮುನ್ನೆಚ್ಚರಿಕೆ ಕ್ರಮದ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚಿಗೆ ಅಕಾಲಿಕ ಮಳೆಗೆ ತಾಲೂಕಿನ 75 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ಸಂಪೂರ್ಣ ನಷ್ಟವಾಗಿದೆ. ಕೂಡಲೇ ಪರಿಹಾರ ನೀಡಲು ಸಹಕರಿಸುವಂತೆ ಕೋರಿದರು. ಬಿಜೆಪಿ ಮುಖಂಡರಾದ ಕಾಶಿನಾಥ ಚಿತ್ರ, ಮಳಗಿ ಚನ್ನಪ್ಪ, ಅಕ್ಕಿ ಪ್ರಕಾಶ, ಯಂಕಪ್ಪ ಕಟ್ಟಿಮನಿ, ಸಂತೋಷ ಕೆಲೋಜಿ, ಟಿ.ಆರ್. ರಾಯಬಾಗಿ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ