ಗಂಗಾವತಿ: ಸಾರಿಗೆ ಸಚಿವರ ಆದೇಶಕ್ಕೆ ಕ್ಯಾರೆ ಎನ್ನದ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು
ಆನೆಗೊಂದಿ-ಸಾಣಾಪುರ ಭಾಗದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನಾನುಕೂಲ
Team Udayavani, Nov 29, 2022, 2:48 PM IST
ಗಂಗಾವತಿ: ತಾಲೂಕಿನ ಆನೆಗುಂದಿ-ಸಾಣಾಪುರ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಹುಲುಗಿ, ಅಂಜನಾದ್ರಿಗೆ ತೆರಳುವವರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಗಳನ್ನು ಗಂಗಾವತಿ, ಕೊಪ್ಪಳ ಮತ್ತು ಹೊಸಪೇಟೆಯಿಂದ ಓಡಿಸುವಂತೆ ಸಾರಿಗೆ ಸಚಿವ ಬಿ. ಶ್ರೀ ರಾಮುಲು ಹಾಗೂ ಶಾಸಕ ಪರಣ್ಣ ಮುನವಳ್ಳಿ ಮಾಡಿದ ಆದೇಶಕ್ಕೆ ಗಂಗಾವತಿ ಕೊಪ್ಪಳ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.
ಇದರಿಂದ ಹರ್ಲಾಪೂರ, ಹಿಟ್ನಾಳ ಮತ್ತು ಹುಲಿಗಿಯಲ್ಲಿ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಶನಿವಾರ, ರವಿವಾರ, ಮಂಗಳವಾರ ಮತ್ತು ಹುಣ್ಣಿಮೆ ಅಮವಾಸ್ಯೆಯಂದು ಹುಲುಗಿ ಮತ್ತು ಅಂಜನಾದ್ರಿಗೆ ಬರುವವರ ಸಂಖ್ಯೆ ಅಧಿಕವಾಗಿರುವುರಿಂದ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಸೀಟುಗಳ ಕೊರತೆಯಿಂದ ಬಾಗಿಲಿನಲ್ಲಿ ನಿಂತುಕೊಂಡು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುವ ಸ್ಥಿತಿಯುಂಟಾಗಿದೆ.
ನಿಗದಿತ ಸಮಯಕ್ಕೆ ಬಸ್ ಗಳ ಓಡಾಟ ನಡೆಯದೇ ಇರುವುದರಿಂದ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗುತ್ತಿಲ್ಲ. ಇದರಿಂದ ಶಾಲಾ ಮಕ್ಕಳ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ. ಆನೆಗುಂದಿ, ಸಾಣಾಪುರ, ಜಂಗ್ಲಿ, ರಂಗಾಪುರ, ಹನುಮನಹಳ್ಳಿ, ತಿರುಮಲಾಪುರ, ಬಸಾಪುರ ಗ್ರಾಮಗಳಿಂದ ಹರ್ಲಾಪುರ ಗ್ರಾಮದ ಬೋರುಖಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಗೆ ನಿತ್ಯವೂ ನೂರಾರು ವಿದ್ಯಾರ್ಥಿಗಳು ತೆರಳುತ್ತಾರೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ಸಮಯದಲ್ಲಿ 2-3 ಬಸ್ಸುಗಳು ಈ ಭಾಗದಲ್ಲಿ ಸಂಚಾರ ಮಾಡಿದರೆ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಹೋಗಲು ಅನುಕೂಲವಾಗುತ್ತದೆ.
ಈಗಾಗಲೇ ಸಾಣಾಪುರ ಆನೆಗುಂದಿಪುರ ಗ್ರಾಮಸ್ಥರ ಮನವಿ ಮೇರೆಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಿಗೆ ಹೆಚ್ಚುವರಿ ಬಸ್ ಗಳನ್ನು ಓಡಿಸುವಂತೆ ಸೂಚನೆ ನೀಡಿದರೂ ಸಾರಿಗೆ ಸಚಿವರ ಆದೇಶಕ್ಕೆ ಅಧಿಕಾರಿಗಳು ಕ್ಯಾರೆ ಮಾಡುತ್ತಿಲ್ಲ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ.
ಕೂಡಲೇ ಕೊಪ್ಪಳ, ಗಂಗಾವತಿ ಕೆ.ಎಸ್.ಆರ್.ಆರ್.ಟಿ.ಸಿ. ಡಿಪೋದಿಂದ ಆನೆಗೊಂದಿ-ಸಾಣಾಪೂರ ಭಾಗದಲ್ಲಿ ಹೆಚ್ವುವರಿ ಬಸ್ ಓಡಿಸಬೇಕು. ಇಲ್ಲದಿದ್ದರೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಲಾಗುತ್ತದೆ ಎಂದು ವಿದ್ಯಾರ್ಥಿಗಳ ಪಾಲಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!